Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಗೋಮೂತ್ರದಿಂದ ಕ್ಯಾನ್ಸರ್ ಗುಣ' ಆದ ಕಥೆ...

'ಗೋಮೂತ್ರದಿಂದ ಕ್ಯಾನ್ಸರ್ ಗುಣ' ಆದ ಕಥೆ ಹೇಳಿದ ಆಸ್ಕರ್ ಫೆರ್ನಾಂಡಿಸ್

ವಾರ್ತಾಭಾರತಿವಾರ್ತಾಭಾರತಿ19 March 2020 11:39 AM IST
share
ಗೋಮೂತ್ರದಿಂದ ಕ್ಯಾನ್ಸರ್ ಗುಣ ಆದ ಕಥೆ ಹೇಳಿದ ಆಸ್ಕರ್ ಫೆರ್ನಾಂಡಿಸ್

ಹೊಸದಿಲ್ಲಿ : ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರು ಗೋಮೂತ್ರದಿಂದ ಕ್ಯಾನ್ಸರ್ ಗುಣವಾದ ಕುರಿತು ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿ ಸ್ವಪಕ್ಷೀಯರಿಗೆ ಅಚ್ಚರಿ ಮೂಡಿಸಿದ್ದಾರೆ. ಒಮ್ಮೆ ಮೀರತ್ ಸಮೀಪದ ಆಶ್ರಮಕ್ಕೆ ಹೋಗಿದ್ದ ವೇಳೆ 'ಗೋಮೂತ್ರ' ಸೇವಿಸಿ ತನ್ನ ಕ್ಯಾನ್ಸರ್ ಕಾಯಿಲೆ ಗುಣವಾಯಿತೆಂದು ಹೇಳಿಕೊಂಡ ವ್ಯಕ್ತಿಯನ್ನು ಭೇಟಿಯಾಗಿದ್ದಾಗಿ ಅವರು ಹೇಳಿದರು.

ಹೋಮಿಯೋಪತಿ ಹಾಗೂ ಭಾರತೀಯ ಔಷಧಿ ಪದ್ಧತಿಗಳ ರಾಷ್ಟ್ರೀಯ ಆಯೋಗ ರಚನೆ ಕುರಿತಂತೆ ಎರಡು ಮಸೂದೆಗಳ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಆಸ್ಕರ್ ''ನಾನು ಗೋಮೂತ್ರದ ಕುರಿತು ಮಾತನಾಡಿದಾಗ ನನ್ನ ಗೆಳೆಯ ಜೈರಾಂ ರಮೇಶ್ ನನ್ನ ಕಾಲೆಳೆಯುತ್ತಾರೆ'' ಎಂದರು.

ಭಾರತೀಯ ಔಷಧಿ ಪದ್ಧತಿಗಳನ್ನೂ ಹೊಗಳಿದ ಅವರು ತಮಗೆ ಮೊಣಕಾಲುಗಳಲ್ಲಿ ತೀವ್ರ ನೋವು ಕಾಡಿದಾಗ ವೈದ್ಯರು ಶಸ್ತ್ರಕ್ರಿಯೆ ಸಲಹೆ ನೀಡಿದ್ದರು, ಆದರೆ ತಾವು `ವಜ್ರಾಸನ' ಅಭ್ಯಸಿಸಿದ್ದನ್ನು ನೆನಪಿಸಿದ್ದಾರೆ. ''ನಾನು ವಜ್ರಾಸನ, ಯೋಗಾಭ್ಯಾಸ ಮಾಡಲು ಆರಂಭಿಸಿದೆ, ಇಂದು ನಾನು ಯಾವುದೇ ಸಮಸ್ಯೆಯಿಲ್ಲದೆ ಕುಸ್ತಿ ಮಾಡಬಲ್ಲೆ'' ಎಂದರು.

''ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮೊಣಕಾಲಿನ ಶಸ್ತ್ರಕ್ರಿಯೆಗೊಳಗಾದಂತಹ ಸಂದರ್ಭದಲ್ಲಿ ನನಗೆ ವಜ್ರಾಸನದ ಬಗ್ಗೆ ತಿಳಿದ್ದದರೆ ನಾನು ಅವರಿಗೆ ಕೂಡ ವಜ್ರಾಸನ ಮಾಡಲು ಹೇಳುತ್ತಿದ್ದೆ, ಇದು ಅವರ ಸಮಸ್ಯೆಯನ್ನು ಪರಿಹರಿಸುತ್ತಿತ್ತು,'' ಎಂದರು.

ಅಮೆರಿಕದಲ್ಲಿ ಯುವಕರಂತೆಯೇ ನಡೆದಾಡುವ 104 ವರ್ಷದ ವ್ಯಕ್ತಿಯನ್ನು ತಾವು ಭೇಟಿಯಾಗಿದ್ದಾಗಿಯೂ ಹೇಳಿಕೊಂಡ ಆಸ್ಕರ್ ''ಯೋಗ ನಮ್ಮ ಆಸ್ತಿ, ನಾವು ಯೊಗ ಅಭ್ಯಸಿಸಿದರೆ ಆರೋಗ್ಯ ಕ್ಷೇತ್ರದ ನಮ್ಮ ಬಜೆಟಿನ ವೆಚ್ಚಗಳನ್ನು ಅರ್ಧದಷ್ಟು ಕಡಿಮೆಗೊಳಿಸಬಹುದು. ವೈದ್ಯರ ಬಳಿಗೆ ಹೋಗುವುದಕ್ಕಿಂತಲೂ ಮೊದಲು ನಮ್ಮ ಭಾರತೀಯ ಔಷಧಿ ಪದ್ಧತಿ ಸಾಕಷ್ಟು ಪರಿಹಾರವೊದಗಿಸುತ್ತದೆ,'' ಎಂದು ಆಸ್ಕರ್ ಹೇಳಿಕೊಂಡರು.

ಸರಕಾರ ಮಂಡಿಸಿದ ಮಸೂದೆಯನ್ನು ಆಸ್ಕರ್ ಬೆಂಬಲಿಸಿದರಾದರೂ ಅದರಲ್ಲಿ ಯೋಗ ಹಾಗೂ ಪ್ರಕೃತಿ ಚಿಕಿತ್ಸೆಯನ್ನು ಕೈಬಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X