Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯಸಭೆಗೆ ಮಾಜಿ ಸಿಜೆಐ ಗೊಗೊಯಿ ನಾಮಕರಣ...

ರಾಜ್ಯಸಭೆಗೆ ಮಾಜಿ ಸಿಜೆಐ ಗೊಗೊಯಿ ನಾಮಕರಣ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅರ್ಜಿ

ಕೋರ್ಟ್ ಮೆಟ್ಟಿಲೇರಿದ ಮೋದಿ ಅಭಿಮಾನಿ ಮಧು ಕೀಶ್ವರ್

ವಾರ್ತಾಭಾರತಿವಾರ್ತಾಭಾರತಿ19 March 2020 4:14 PM IST
share
ರಾಜ್ಯಸಭೆಗೆ ಮಾಜಿ ಸಿಜೆಐ ಗೊಗೊಯಿ ನಾಮಕರಣ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅರ್ಜಿ

ಹೊಸದಿಲ್ಲಿ: ಸುಪ್ರೀಂ ಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರನ್ನು ರಾಜ್ಯಸಭೆಗೆ ನಾಮಕರಣಗೊಳಿಸಿದ ಸರಕಾರದ ಕ್ರಮವನ್ನು ಪ್ರಶ್ನಿಸಿ ಮೋದಿ ಕಟ್ಟಾ ಅಭಿಮಾನಿ ಮಧು ಪೂರ್ಣಿಮಾ ಕೀಶ್ವರ್ ಅವರು ಸುಪ್ರೀಂ ಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ದಾಖಲಿಸಿದ್ದಾರೆ.

ಗೊಗೊಯಿ ಅವರ ನೇಮಕಾತಿ ದೇಶದ ನ್ಯಾಯಾಂಗದ  ಸ್ವಾತಂತ್ರ್ಯದ ಮೇಲೆಯೇ ಕಾರ್ಮೋಡ ಮೂಡಿಸಿದೆ ಎಂದು ಆಕೆ ತಮ್ಮ ಅಪೀಲಿನಲ್ಲಿ ಆರೋಪಿಸಿದ್ದಾರೆ. "ರಾಷ್ಟ್ರಪತಿಗಳು ಗೊಗೊಯಿ ಅವರನ್ನು ರಾಜ್ಯಸಭೆಗೆ ನಾಮಕರಣಗೊಳಿಸಿರುವ ಕ್ರಮವು ರಾಜಕೀಯ ನೇಮಕಾತಿಯ ಬಣ್ಣ  ಪಡೆದಿದೆ ಹಾಗೂ  ಅವರು ಸುಪ್ರೀಂ ಕೋರ್ಟನ್ನು ಮುನ್ನಡೆಸಿದ್ದ ಸಂದರ್ಭ ಅವರು ನೀಡಿದ್ದ ತೀರ್ಪುಗಳ ವಿಶ್ವಾಸಾರ್ಹತೆಯನ್ನೇ ಶಂಕಿಸುವಂತೆ ಮಾಡಿದೆ'' ಎಂದು ಮಧುಕೀಶ್ವರ್ ತಮ್ಮ ಪಿಐಎಲ್‍ ನಲ್ಲಿ ಹೇಳಿದ್ದಾರೆ.

ನ್ಯಾಯಾಧೀಶರು ನಿವೃತ್ತರಾದ ನಂತರ ಅವರು ಬೇರೆ ಹುದ್ದೆಗಳಿಗೆ ನೇಮಕಾತಿಗೊಳ್ಳುವುದನ್ನು ಈ ಹಿಂದೆ ವಿರೋಧಿಸಿದ್ದ ಗೊಗೊಯಿ ಅವರು ರಾಜ್ಯಸಭಾ ನಾಮಕರಣವನ್ನು ಏಕೆ ಒಪ್ಪಿದರು  ಎಂದೂ ಮಧು ಕೀಶ್ವರ್ ಪ್ರಶ್ನಿಸಿದ್ದಾರೆ.

ದೇಶದ ಮಾನಹಾನಿಗೈಯ್ಯಲು ಹಾಗೂ ನ್ಯಾಯಾಂಗದ ಮೇಲೆ ಆರೋಪ ಹೊರಿಸಲು ಇದು ದೇಶದ ವೈರಿಗಳಿಗೆ  ಆಸ್ಪದ ನೀಡುವುದು ಎಂದೂ ಅವರು ತಮ್ಮ ಅಪೀಲಿನಲ್ಲಿ ಹೇಳಿದ್ದಾರಲ್ಲದೆ, ಗೊಗೊಯಿ ಅವರ ನೇಮಕಾತಿಗೆ ತಡೆಯಾಜ್ಞೆ ನೀಡಬೇಕು, ಲೋಕಪಾಲ್ ಹಾಗೂ ಲೋಕಾಯುಕ್ತ ಕಾಯಿದೆ 2013ರಲ್ಲಿ ಮಾಡಿದಂತೆ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ನಿವೃತ್ತಿ ನಂತರ ಬೇರೆ ಹುದ್ದೆಗಳನ್ನು ಹೊಂದುವುದಕ್ಕೆ ನಿರ್ಬಂಧ ಹೇರಬೇಕೆಂದೂ ಕೋರಿದ್ದಾರೆ.

ಆದರೆ ಮಧುಕೀಶ್ವರ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದು 'ದಾರಿ ತಪ್ಪಿಸುವ' ತಂತ್ರ ಎನ್ನುವ ಆರೋಪಗಳೂ ಕೇಳಿ ಬರುತ್ತಿವೆ. ಮಧುಕೀಶ್ವರ್ ಅವರು ಸುಪ್ರೀಂಗೆ ಅರ್ಜಿ ಸಲ್ಲಿಸಿ ಆ ಮೂಲಕ ಬೇರೆ ಯಾರೂ ಈ ಕುರಿತು ಸುಪ್ರೀಂ ಕೋರ್ಟ್ ಮೆಟ್ಟಲೇರದಂತೆ ಪರೋಕ್ಷವಾಗಿ ತಡೆಯುತ್ತಿದ್ದಾರೆ. ಇದು ದಾರಿ ತಪ್ಪಿಸುವ ತಂತ್ರವೇ ಹೊರತು ಬೇರೇನೂ ಅಲ್ಲ. ಈ ಪ್ರಕರಣದಲ್ಲಿ ಮಧು ಕೀಶ್ವರ್ ದುರ್ಬಲ ಪಿಐಎಲ್ ಸಲ್ಲಿಸಲಿದ್ದಾರೆ. ಕೋರ್ಟ್ ಈ ಪಿಐಎಲ್ ಅನ್ನು ವಜಾಗೊಳಿಸಿದ ನಂತರ ಇಂತಹ ಎಲ್ಲಾ ಅರ್ಜಿಗಳನ್ನು ವಜಾಗೊಳಿಸುತ್ತದೆ. ಇದು ಈ ನಡೆಯ ಹಿಂದಿನ ತಂತ್ರವಾಗಿದೆ ಎಂದು ಸಾಮಾಜಿಕ ಜಾಲತಾಣದ ಬಳಕೆದಾರರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X