Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರ ಸರಕಾರ ಸಂವಿಧಾನದ ಒಂದೊಂದೇ...

ಕೇಂದ್ರ ಸರಕಾರ ಸಂವಿಧಾನದ ಒಂದೊಂದೇ ಹಾಳೆಗಳನ್ನು ಕಿತ್ತು ಹಾಕುತ್ತಿದೆ: ಸಿ.ಎಂ.ಇಬ್ರಾಹಿಂ

ವಾರ್ತಾಭಾರತಿವಾರ್ತಾಭಾರತಿ19 March 2020 7:57 PM IST
share
ಕೇಂದ್ರ ಸರಕಾರ ಸಂವಿಧಾನದ ಒಂದೊಂದೇ ಹಾಳೆಗಳನ್ನು ಕಿತ್ತು ಹಾಕುತ್ತಿದೆ: ಸಿ.ಎಂ.ಇಬ್ರಾಹಿಂ

ಬೆಂಗಳೂರು, ಮಾ.19: ಕೇಂದ್ರ ಸರಕಾರ ನಾವು ಸಂವಿಧಾನದಡಿಯಲ್ಲಿಯೇ ಆಡಳಿತ ನಡೆಸುತ್ತಿದ್ದೇವೆಂದು ಹೇಳುತ್ತಲೆ, ಸಂವಿಧಾನದ ಒಂದೊಂದೇ ಹಾಳೆಗಳನ್ನು ಕಿತ್ತು ಹಾಕುತ್ತಿದೆ ಎಂದು ಕಾಂಗ್ರೆಸ್‌ನ ಹಿರಿಯ ಸದಸ್ಯ ಸಿ.ಎಂ.ಇಬ್ರಾಹಿಂ ಆರೋಪಿಸಿದ್ದಾರೆ. 

ಗುರುವಾರ ವಿಧಾನಪರಿಷತ್‌ನಲ್ಲಿ ಸಂವಿಧಾನದ ಕುರಿತ ಚರ್ಚೆಯ ವೇಳೆ ಮಾತನಾಡಿದ ಅವರು, ಇತ್ತೀಚಿಗೆ ಕೇಂದ್ರ ಸರಕಾರ ಜಾರಿ ಮಾಡಿರುವ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಕಾನೂನುಗಳನ್ನು ಗಮನಿಸಿದರೆ ಸಂವಿಧಾನದ ಮೂಲ ಆಶಯಗಳಿಗೆ ಧಕ್ಕೆ ಬಂದಿರುವುದು ನಾವು ಗಮನಿಸಬಹುದೆಂದು ತಿಳಿಸಿದರು.

ಸರಕಾರದ ಅಂಕಿ ಅಂಶಗಳ ಪ್ರಕಾರವೇ ರಾಜ್ಯದಲ್ಲಿರುವ ವಲಸಿಗರ ಸಂಖ್ಯೆ 300 ರಿಂದ 400 ಇದೆ. ಇವರನ್ನು ಪತ್ತೆ ಮಾಡಲು ರಾಜ್ಯದ 6.50 ಕೋಟಿ ಜನರನ್ನು ಅನುಮಾನದಿಂದ ನೋಡುವುದೇ ಪ್ರಜಾಪ್ರಭುತ್ವದ ವಿರೋಧಿಯಾದದ್ದು. ಆಯಾ ತಾಲೂಕಿನ ತಹಶೀಲ್ದಾರ್ ಹಾಗೂ ಪೊಲೀಸರಲ್ಲಿ ಮಾಹಿತಿ ಕೇಳಿದರೆ, ಇರುವ ಬೆರಳೆಣಿಕೆಯ ವಲಸಿಗರ ಪಟ್ಟಿ ಕೊಡುತ್ತಾರೆ. ಆದರೆ, ನಮ್ಮ ಸರಕಾರ ಅಕ್ಕಿಯಲ್ಲಿ ಕಲ್ಲನ್ನು ಹುಡುಕುವುದು ಬಿಟ್ಟು, ಕಲ್ಲಿನಲ್ಲಿ ಅಕ್ಕಿಯನ್ನು ಹುಡುಕಲು ಹೊರಟಿದೆ ಎಂದು ಅವರು ಹೇಳಿದರು.

ಕೇಂದ್ರ ಸರಕಾರ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರಾದೇಶಿಕ ಸಮಾನತೆಯನ್ನು ಕಾಣುತ್ತಿಲ್ಲ. ಕರ್ನಾಟಕದಿಂದ ಕೇಂದ್ರ ಸರಕಾರಕ್ಕೆ ಹೆಚ್ಚಿನ ತೆರಿಗೆ ಹೋಗುತ್ತಿದೆ. ಆದರೆ, ರಾಜ್ಯದ ಪಾಲಿಗೆ ಬರಬೇಕಾದ ಜಿಎಸ್‌ಟಿ ಹಣ ಕೊಡಲು ಮಾತ್ರ ಉದಾಸೀನ ಮಾಡುತ್ತಿದೆ. ಕೇಂದ್ರದ ಇಂತಹ ನೀತಿಗಳು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನು ತಂದೊಡ್ಡುತ್ತವೆ ಎಂದು ಅವರು ಎಚ್ಚರಿಸಿದರು.

ಇವಿಎಂ ಬೇಡ: ಜಗತ್ತಿನ ಹಲವು ದೇಶಗಳು ಪ್ರಾರಂಭದಲ್ಲಿ ಇವಿಎಂ ಮತಯಂತ್ರಗಳನ್ನು ಅಳವಡಿಸಿಕೊಂಡು ನಂತರ ಅದನ್ನು ಬದಲಾಯಿಸಿ, ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆ ನಡೆಸುತ್ತಿವೆ. ಅದೇ ಮಾದರಿಯಲ್ಲಿ ನಮ್ಮ ದೇಶದಲ್ಲೂ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್‌ನಲ್ಲಿ ಮತದಾನ ನಡೆಯಲಿ ಎಂದು ಅವರು ಒತ್ತಾಯಿಸಿದರು.

ಇಬ್ರಾಹಿಂ ಮಾತಿನಿಂದ ಗದ್ದಲ

ಕಂಪೆನಿಯ ಮಾಲಕರು ವ್ಯಕ್ತಿಗೆ ಕೆಲಸ ಕೊಡುವಾಗ ಅನುಭವ ಕೇಳುತ್ತಾನೆ. ಆದರೆ, ತನ್ನ ಮಗಳ ಮದುವೆ ಮಾಡುವಾಗ ಅಳಿಯನ ಬಳಿ ಅನುಭವ ಯಾಕೆ ಕೇಳುವುದಿಲ್ಲವೆಂಬ ಕಾಂಗ್ರೆಸ್‌ನ ಸಿ.ಎಂ.ಇಬ್ರಾಹಿಂ ಮಾತು ಸದನದಲ್ಲಿ ಗದ್ದಲಕ್ಕೆ ಕಾರಣವಾಯಿತು.

18 ವರ್ಷ ತುಂಬುತ್ತಿದ್ದಂತೆ ಮತದಾನಕ್ಕೆ ಅವಕಾಶ ಮಾಡಿಕೊಡುವುದು ಸರಿಯಲ್ಲ. ಯಾವುದೇ ಅನುಭವ ಇರುವುದಿಲ್ಲವೆಂಬ ವಿಷಯದ ಕುರಿತು ಮಾತನಾಡುತ್ತಿದ್ದ ಸಂದರ್ಭದಲ್ಲಿ ಇಬ್ರಾಹಿಂ ಮದುವೆಯಾಗುವ ಹುಡುಗನ ಅನುಭವ ಕೇಳುವುದಿಲ್ಲವೆಂಬ ಮಾತು ವಾಗ್ವಾದಕ್ಕೆ ಕಾರಣವಾಯಿತು. ಕೂಡಲೇ ಬಿಜೆಪಿ ಸದಸ್ಯೆ ತೇಜಸ್ವಿನಿ, ಹೆಣ್ಣು ಮಕ್ಕಳನ್ನು ಅನುಮಾನಿಸುವ ರೀತಿಯಲ್ಲಿ ಇಬ್ರಾಹಿಂ ಮಾತನಾಡಿದ್ದಾರೆ. ಕೂಡಲೇ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ನಾವು ಸದನದಿಂದ ಹೊರಕ್ಕೆ ಹೋಗುತ್ತೇನೆಂದು ಹೇಳಿದರು. ಇದಕ್ಕೆ ಬಿಜೆಪಿ ಸದಸ್ಯರು ಧ್ವನಿಗೂಡಿಸಿದರು. ನಂತರ ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X