Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನಾ ವೈರಸ್: ಸೋಂಕಿತರ ಸಂಖ್ಯೆ...

ಕೊರೋನಾ ವೈರಸ್: ಸೋಂಕಿತರ ಸಂಖ್ಯೆ 168ಕ್ಕೆ ಏರಿಕೆ; ಮೃತರ ಸಂಖ್ಯೆ 4ಕ್ಕೇರಿಕೆ

ವಾರ್ತಾಭಾರತಿವಾರ್ತಾಭಾರತಿ19 March 2020 8:24 PM IST
share
ಕೊರೋನಾ ವೈರಸ್: ಸೋಂಕಿತರ ಸಂಖ್ಯೆ 168ಕ್ಕೆ ಏರಿಕೆ; ಮೃತರ ಸಂಖ್ಯೆ 4ಕ್ಕೇರಿಕೆ

ಹೊಸದಿಲ್ಲಿ, ಮಾ.19: ಗುರುವಾರ ಕೊರೋನಾ ವೈರಸ್ ಸೋಂಕಿನ 18 ಹೊಸ ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 168ಕ್ಕೇರಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಈ ಮಧ್ಯೆ ಪಂಜಾಬ್‌ನಲ್ಲಿ ಮೃತಪಟ್ಟ 72 ವರ್ಷದ ವ್ಯಕ್ತಿಯಲ್ಲೂ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಕೊರೋನಾ ವೈರಸ್‌ಗೆ ಬಲಿಯಾದವರ ಸಂಖ್ಯೆ 4ಕ್ಕೇರಿದೆ.

ಕೊರೋನಾ ಪೀಡಿತರಲ್ಲಿ 25 ವಿದೇಶೀಯರು(ಇಟಲಿಯ 17, ಫಿಲಿಪ್ಪೀನ್ಸ್ 3, ಬ್ರಿಟನ್‌ನ ಇಬ್ಬರು, ಕೆನಡಾ, ಇಂಡೋನೇಶಿಯಾ ಮತ್ತು ಸಿಂಗಾಪುರದ ತಲಾ ಒಬ್ಬರು) ಸೇರಿದ್ದಾರೆ . ಚಂಡೀಗಢದಲ್ಲಿ 23 ವರ್ಷದ ಮಹಿಳೆಗೆ ಕೊರೊನ ವೈರಸ್ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದ್ದು ಈಕೆ ರವಿವಾರ ಇಂಗ್ಲೆಂಡಿನಿಂದ ಬಂದಿದ್ದರು. ಛತ್ತೀಸ್‌ಗಢ ರಾಜ್ಯದಲ್ಲೂ ಪ್ರಪ್ರಥಮ ಕೊರೊನ ವೈರಸ್ ಸೋಂಕು ಪ್ರಕರಣ ಬುಧವಾರ ದೃಢಪಟ್ಟಿದೆ.

ಲಂಡನ್‌ನಿಂದ ಬಂದಿದ್ದ 24 ವರ್ಷದ ಮಹಿಳೆಯನ್ನು ರಾಯ್‌ಪುರದ ಎಐಐಎಂಎಸ್‌ಗೆ ದಾಖಲಿಸಿ ಪ್ರತ್ಯೇಕ ವಾರ್ಡ್‌ನಲ್ಲಿರಿಸಲಾಗಿತ್ತು. ಮುಂಬೈಯಲ್ಲಿ ಮತ್ತೆ ಎರಡು ಸೋಂಕು ಪ್ರಕರಣ ದೃಢಪಟ್ಟಿದ್ದು ಇದರೊಂದಿಗೆ ಮಹಾರಾಷ್ಟ್ರದಲ್ಲಿ ಸೋಂಕು ಪೀಡಿತರ ಸಂಖ್ಯೆ 47ಕ್ಕೇರಿದೆ. ಕರ್ನಾಟಕದ ಕೊಡಗಿನಲ್ಲಿ ಒಂದು ಪ್ರಕರಣ ದೃಢಪಡುವುದರೊಂದಿಗೆ ಸೋಂಕು ಪೀಡಿತರ ಸಂಖ್ಯೆ 15ಕ್ಕೇರಿದೆ. ದಿಲ್ಲಿಯಲ್ಲಿ 12, ಉತ್ತರಪ್ರದೇಶದಲ್ಲಿ 17, ಕೇರಳದಲ್ಲಿ 27, ತೆಲಂಗಾಣದಲ್ಲಿ 6, ರಾಜಸ್ತಾನದಲ್ಲಿ 4, ಹರ್ಯಾನದಲ್ಲಿ 17, ಲಡಾಖ್‌ನಲ್ಲಿ 8, ಜಮ್ಮು ಮತ್ತು ಕಾಶ್ಮೀರದಲ್ಲಿ 4, ಆಂಧ್ರಪ್ರದೇಶ, ಒಡಿಶಾ, ಉತ್ತರಾಖಂಡ, ಪಶ್ಚಿಮ ಬಂಗಾಳ, ಪಾಂಡಿಚೇರಿ, ಚಂಡೀಗಢ ಮತ್ತು ಪಂಜಾಬ್‌ಗಳಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ.

ಈ ಮಧ್ಯೆ, ಚೆನ್ನೈಯ ಗಣಿತ ವಿಜ್ಞಾನಗಳ ಸಂಸ್ಥೆಯ ವಿಜ್ಞಾನಿಗಳು ನಡೆಸಿದ ಅಧ್ಯಯನ ದ ಪ್ರಕಾರ, ಭಾರತದಲ್ಲಿ ಕೊರೊನ ವೈರಸ್ ಸೋಂಕಿತ ವ್ಯಕ್ತಿ ಸರಾಸರಿ 1.7 ವ್ಯಕ್ತಿಗೆ ಮಾತ್ರ ಈ ಸೋಂಕನ್ನು ಹರಡುತ್ತಿರುವುದರಿಂದ ಕೊರೊನ ವೈರಸ್ ಸೋಂಕಿತರ ಸಂಖ್ಯೆ ನಿಧಾನಗತಿಯಲ್ಲಿ ಹೆಚ್ಚುತ್ತಿದೆ. ಇದೇ ಪ್ರಮಾಣ ಮುಂದುವರಿದರೆ ಮುಂದಿನ 5 ದಿನಗಳಲ್ಲಿ ಸೋಂಕಿತರ ಸಂಖ್ಯೆ ಸುಮಾರು 200ಕ್ಕೆ ತಲುಪಬಹುದು ಎಂದು ವರದಿ ತಿಳಿಸಿದೆ. ಕೊರೊನ ವೈರಸ್ ವಿರುದ್ಧ ಭಾರತ ಸಮಗ್ರ ಮತ್ತು ದೃಢ ಪ್ರತಿಬಂಧಕ ಕ್ರಮಗಳನ್ನು ಕೈಗೊಂಡಿದೆ ಎಂದು ಭಾರತದಲ್ಲಿ ವಿಶ್ವಸಂಸ್ಥೆಯ ಪ್ರತಿನಿಧಿ ಡಾ ಹೆಂಕ್ ಬೆಕೆಡಮ್ ಶ್ಲಾಘಿಸಿದ್ದಾರೆ. ಭಾರತದಲ್ಲಿ ಫೆಬ್ರವರಿ ಮಧ್ಯಭಾಗದ ಬಳಿಕ ತೀವ್ರವಾದ ಉಸಿರಾಟ ತೊಂದರೆಯ ಸಮಸ್ಯೆ ಎದುರಿಸುತ್ತಿರುವವರನ್ನೂ ತಪಾಸಣೆಗೆ ಒಳಪಡಿಸಲಾಗಿದೆ ಎಂದವರು ಹೇಳಿದ್ದಾರೆ.

ಪಂಜಾಬ್: 72 ವರ್ಷದ ವ್ಯಕ್ತಿ ಸಾವು

ಪಂಜಾಬ್‌ನ ಬಾಂಗ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತೀವ್ರ ಎದೆನೋವಿನ ಸಮಸ್ಯೆಯಿಂದ ಬುಧವಾರ ಚಿಕಿತ್ಸೆಗೆ ದಾಖಲಾಗಿದ್ದ 72 ವರ್ಷದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದು ಇವರು ಕೊರೊನ ಸೋಂಕಿತರಾಗಿದ್ದರು ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ. ನವಾನ್‌ಶಹರ್ ನಿವಾಸಿಯಾಗಿದ್ದ ಇವರು ಜರ್ಮನಿಗೆ ತೆರಳಿದ್ದು 15 ದಿನದ ಹಿಂದೆ ಇಟಲಿ ಮಾರ್ಗವಾಗಿ ಪಂಜಾಬ್‌ಗೆ ಆಗಮಿಸಿದ್ದರು. ಇವರ ಸಾವಿಗೆ ನಿಖರ ಕಾರಣ ಪತ್ತೆಹಚ್ಚಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X