ಮಡಿಕೇರಿ: ಕಾಗೆಗಳ ನಿಗೂಢ ಸಾವು; ಗ್ರಾಮಸ್ಥರಲ್ಲಿ ಆತಂಕ
ಮಡಿಕೇರಿ, ಮಾ.19: ಕೊಡಗಿನಲ್ಲಿ ಕೊರೋನ ವೈರಸ್ ನ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೊಟ್ಟಮುಡಿ ಗ್ರಾಮದಲ್ಲಿ ಹತ್ತಾರು ಕಾಗೆಗಳು ಸತ್ತು ಬಿದ್ದು ಗ್ರಾಮಸ್ಥರಲ್ಲಿ ಭೀತಿಯನ್ನು ಉಂಟುಮಾಡಿದೆ.
ಕೊಟ್ಟಮುಡಿ ವ್ಯಾಪ್ತಿಯಲ್ಲಷ್ಟೇ ಈ ದೃಶ್ಯ ಕಂಡು ಬಂದಿದ್ದು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಕೊರೋನ ವೈರಸ್ ಹಾಗೂ ಕಾಗೆಗಳ ಸಾವಿಗೂ ಯಾವುದೇ ಸಂಬಂಧವಿಲ್ಲವೆನ್ನುವ ಅಭಿಪ್ರಾಯ ಕೇಳಿ ಬಂದಿದ್ದು, ಸೂಕ್ತ ತನಿಖೆಯ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.
ವಿಷ ಆಹಾರ ಸೇವನೆಯಿಂದ ಕಾಗೆಗಳು ಸತ್ತಿರಬಹುದೆಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ತನಿಖಾ ವರದಿಯನ್ನು ಎದುರು ನೋಡಲಾಗುತ್ತಿದೆ.
Next Story