Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ವೈರಸ್ ಭೀತಿ: ಉಡುಪಿ...

ಕೊರೋನ ವೈರಸ್ ಭೀತಿ: ಉಡುಪಿ ಧರ್ಮಪ್ರಾಂತ್ಯಕ್ಕೆ ಧರ್ಮಾಧ್ಯಕ್ಷರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ19 March 2020 9:44 PM IST
share
ಕೊರೋನ ವೈರಸ್ ಭೀತಿ: ಉಡುಪಿ ಧರ್ಮಪ್ರಾಂತ್ಯಕ್ಕೆ ಧರ್ಮಾಧ್ಯಕ್ಷರ ಸೂಚನೆ

ಉಡುಪಿ, ಮಾ.19: ಕೊರೋನ ವೈರಸ್ ದಾಳಿಗೆ ಇಡೀ ವಿಶ್ವವೇ ತಲ್ಲಣ ಗೊಂಡಿದ್ದು, ಈ ಮಾರಣಾಂತಿಕ ವೈರಸ್‌ಗೆ ಬಲಿಯಾಗದಂತೆ ಹಾಗೂ ಪರೋಕ್ಷವಾಗಿ ಈ ವೈರಸ್ ಸೋಂಕನ್ನು ಇತರರಿಗೆ ಹರಡದಂತೆ ಜಾಗರೂಕತೆ ವಹಿಸಬೇಕು. ಇದಕ್ಕಾಗಿ ಉಡುಪಿಯ ಧರ್ಮಾಧ್ಯಕ್ಷರಾಗಿರುವ ಅ.ವಂ. ಜೆರಾಲ್ಡ್ ಐಸಾಕ್ ಲೋಬೊ ಅವರು ಉಡುಪಿ ಧರ್ಮಪ್ರಾಂತದ ಜನತೆಗೆ ಉಡುಪಿ ಜಿಲ್ಲಾಧಿಕಾರಿ ಈ ಸಂಬಂಧ ನೀಡಿರುವ ಆದೇಶದನ್ವಯ ಕೆಲವು ಮಾರ್ದರ್ಶಿ ಸೂತ್ರಗಳನ್ನು ನೀಡಿದ್ದಾರೆ.

ಈಗಿನ ವಿಷಮ ಪರಿಸ್ಥಿತಿಯಲ್ಲಿ, ಮನುಜಕುಲದ ಪ್ರತಿಯೊಬ್ಬರನ್ನು ಅಪಾಯ ದಿಂದ ರಕ್ಷಿಸಲು ಸರ್ವಶಕ್ತ ಭಗವಂತನನ್ನು ಪ್ರಾರ್ಥಿಸೋಣ. ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ, ಚರ್ಚ್‌ಗಳಲ್ಲಿ ಜನರು ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಚರ್ಚ್‌ನಲ್ಲಿ ನೆರವೇರುವ ಎಲ್ಲಾ ಬಲಿಪೂಜೆಗಳನ್ನು (ದಿನಂಪ್ರತಿ ಹಾಗೂ ಭಾನುವಾರ) ರದ್ಧುಪಡಿಸಲಾಗಿದೆ.

ಚರ್ಚ್‌ನಲ್ಲಿ ಆಯೋಜಿಸುವ ಪ್ರಾರ್ಥನಾ ಕೂಟಗಳು, ಕಾರ್ಯಾಗಾರಗಳು, ಶಿಲುಬೆಯ ಹಾದಿ, ಮೆರವಣಿಗೆಗಳು, ಬೇಸಿಗೆ ಶಿಬಿರಗಳು, ಇನ್ನಿತರ ಸಾಮೂಹಿಕ ಧಾರ್ಮಿಕ ಆಚರಣೆಗಳನ್ನು ರದ್ದುಪಡಿಸಲಾಗಿದೆ. ಕುಟುಂಬದಲ್ಲಿ ಸಾವು ಸಂಭವಿಸಿದಾಗ, ಅಂತಿಮ ಕ್ರಿಯೆಯ ಪ್ರಕ್ರಿಯೆಯನ್ನು, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸರಳವಾಗಿ ನಡೆಸಬೇಕು.

ನೆಗಡಿ, ಕೆಮ್ಮು, ಜ್ವರ, ಇನ್ನಿತರ ರೋಗದ ಲಕ್ಷಣಗಳು ಕಂಡುಬಂದಲ್ಲಿ, ಅಂಥವರು ಚರ್ಚ್‌ಗೆ ಅಥವಾ ಇನ್ನಿತರ ಸ್ಥಳಗಳಿಗೆ ಹೋಗದೆ ತಮ್ಮ ಮನೆಯ ಸುರಕ್ಷತೆಯಲ್ಲಿ ಉಳಿಯಬೇಕು. ಆರೋಗ್ಯ ಮತ್ತು ಸುರಕ್ಷತೆಯ ನಿಟ್ಟಿನಲ್ಲಿ, ಚರ್ಚ್ ಹಾಲ್‌ಗಳು ಹಾಗೂ ಸಭಾಗೃಹಗಳನ್ನು ಯಾವುದೇ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ನೀಡಬಾರದು.

ವೈರಸ್ ಸೋಂಕಿನ ಈ ವಿಷಮ ಪರಿಸ್ಥಿತಿಯಲ್ಲಿ ಜನರು ತಮ್ಮ ಕುಟುಂಬ ಗಳಲ್ಲಿ ಜೊತೆಗೂಡಿ ಪ್ರಾರ್ಥನೆ, ಜಪಸರ, ಶಿಲುಬೆಯ ಹಾದಿ, ಇನ್ನಿತರ ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಹೆಚ್ಚು ಮಗ್ನರಾಗಬೇಕು. ಚರ್ಚ್‌ನಲ್ಲಿ ಸಾಮೂಹಿಕ ಧಾರ್ಮಿಕ ಚಟುವಟಿಕೆಗಳಿಗೆ ನಿಷೇಧವಿದ್ದರೂ, ಚರ್ಚ್‌ಗಳು ಹಾಗೂ ಪ್ರಾರ್ಥನಾ ಮಂದಿರಗಳು ಜನರ ವೈಯಕ್ತಿಕ ಪ್ರಾರ್ಥನೆ ಹಾಗೂ ಖಾಸಗಿ ಧ್ಯಾನಕ್ಕಾಗಿ ತೆರೆದಿರುತ್ತವೆ.

ಸಾರ್ವಜನಿಕರು ವೈಯಕ್ತಿಕವಾಗಿ ಹಾಗೂ ಸಾಮುದಾಯಿಕವಾಗಿ ನಿರ್ಮಲತೆಗೆ ಹೆಚ್ಚು ಮಹತ್ವವನ್ನು ನೀಡಿ, ಸರ್ಕಾರ ಹಾಗೂ ಸ್ಥಳೀಯ ಆಡಳಿತವು ನೀಡಿದ ಎಲ್ಲ ಆದೇಶಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಈ ಮೇಲಿನ ಕ್ರಮಗಳು ಮಾ.31ರವರೆಗೆ ಚಾಲ್ತಿಯಲ್ಲಿರುತ್ತವೆ ಎಂದು ಉಡುಪಿ ಬಿಷಪ್‌ರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X