Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಭಿವೃದ್ಧಿ, ಪರಿಸರ ಪತ್ರಿಕೋದ್ಯಮ...

ಅಭಿವೃದ್ಧಿ, ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ20 March 2020 5:51 PM IST
share

ಉಡುಪಿ, ಮಾ.20: ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ಪರಿಸರ ವಿಷಯಗಳಿಗೆ ಸಂಬಂಧಿಸಿದಂತೆ ಗಮನಾರ್ಹ ಸಾಧನೆ ಮಾಡಿರುವ ಪತ್ರಕರ್ತರಿಗೆ ನೀಡುವ ತಲಾ ಒಂದು ಲಕ್ಷ ರೂ ನಗದು ಪುರಸ್ಕಾರವನ್ನೊಳಗೊಂಡ 2017 ಮತ್ತು 2018ನೇ ಸಾಲಿನ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗಾಗಿ ಅರ್ಹ ಅ್ಯರ್ಥಿಗಳಿಂದ ಅರ್ಜಿಗಳನ್ನು ಹಾಗೂ ಪತ್ರಿಕಾಸಂಸ್ಥೆಗಳು ಮತ್ತು ಸಂಘಟನೆ ಗಳಿಂದ ನಾಮ ನಿರ್ದೇಶನಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಹ್ವಾನಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಮಾಧ್ಯಮ ಲೋಕದ ಅನುಭವಿ ಸದಸ್ಯರನ್ನು ಒಳಗೊಂಡ ತ್ರಿ-ಸದಸ್ಯ ಸಮಿತಿಯು ಈ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲಿದೆ.

ಪ್ರಶಸ್ತಿಗಳಿಗೆ ಅರ್ಜಿ ಅಥವಾ ನಾಮ ನಿರ್ದೇಶನ ಸಲ್ಲಿಸುವವರು ಮುದ್ರಣ ಮಾಧ್ಯಮ ಮತ್ತು ವಿದ್ಯುನ್ಮಾನ ಮಾಧ್ಯಮ ಕ್ಷೇತ್ರಗಳಲ್ಲಿ ಕನಿಷ್ಠ ಹತ್ತು ವರ್ಷಗಳ ಸೇವೆ ಸಲ್ಲಿಸಿರಬೇಕು. ಅಲ್ಲದೆ, ಅಭಿವೃದ್ಧಿ ಪತ್ರಿಕೋದ್ಯಮ ಅಥವಾ ಪರಿಸರ ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿರಬೇಕು.

ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ: ರಾಜ್ಯದೆಲ್ಲೆಡೆ ಅಭಿವೃದ್ಧಿ-ಪರ ವಾತಾವರಣ ಮೂಡಿಸಲು ಅನುಕೂಲವಾಗುವಂತೆ ಅಭಿವೃದ್ಧಿಗೆ ಪೂರಕವಾದ ಲೇಖನಗಳನ್ನು ಬರೆದು ಅಥವಾ ಕಾರ್ಯಕ್ರಮಗಳನ್ನು ರೂಪಿಸಿ ಅಭಿವೃದ್ಧಿ ಪ್ರಕ್ರಿಯೆಗೆ ಪುಷ್ಠಿ ನೀಡಿ ಸಮಾಜಕ್ಕೆ ಕೊಡುಗೆ ಸಲ್ಲಿಸಿರುವ ಪತ್ರಕರ್ತರಿಗೆ ಒಂದು ಲಕ್ಷ ರೂ ನಗದು ಒಳಗೊಂಡ ಈ ವಾರ್ಷಿಕ ಪ್ರಶಸ್ತಿ ನೀಡಲಾಗುವುದು.

ಪರಿಸರ ಪತ್ರಿಕೋದ್ಯಮ ಪ್ರಶಸ್ತಿ: ಪರಿಸರ ಸಂರಕ್ಷಣೆ ಕುರಿತು ಪೂರಕ ಲೇಖನಗಳನ್ನು ಬರೆದು ಅಥವಾ ಕಾರ್ಯಕ್ರಮಗಳನ್ನು ರೂಪಿಸಿ ರಾಜ್ಯದಲ್ಲಿನ ಪರಿಸರದಲ್ಲಿ ಸಮತೋಲನ, ಪ್ರಕೃತಿ ಸೊಬಗು ಹಾಗೂ ನಿಸರ್ಗ ಸಿರಿ ಕಾಯ್ದುಕೊಳ್ಳಲು ಸಮಾಜಕ್ಕೆ ಕೊಡುಗೆ ಸಲ್ಲಿಸಿರುವ ಪತ್ರಕರ್ತರಿಗೆ ಒಂದು ಲಕ್ಷ ರೂ ನಗದು ಒಳಗೊಂಡ ಈ ವಾರ್ಷಿಕ ಪ್ರಶಸ್ತಿ ನೀಡಲಾಗುವುದು.

ಅರ್ಜಿದಾರರ ಅಥವಾ ನಾಮ ನಿರ್ದೇಶಿತರ ಮೊಬೈಲ್ ಸಂಖ್ಯೆ ಮತ್ತು ವಿವರ ಸಂಪರ್ಕ ವಿಳಾಸ ಒಳಗೊಂಡಂತೆ ಸ್ವ-ವಿವರಗಳು ಹಾಗೂ ಸಾಧನೆಗಳ ವಿವರಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ಸಂಖ್ಯೆ:17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು- 560001 ಇವರಿಗೆ ಅಥವಾ-diprkarnatakanews@gmail.com - ಈ ಇ-ಮೇಲ್ ವಿಳಾಸ್ಕೆ ಮಾ.24ರೊಳಗೆ ಸಲ್ಲಿಸಬಹುದು. ಅಲ್ಲದೆ, ಅರ್ಜಿ ಯೊಂದಿಗೆ ಅರ್ಜಿದಾರರ ಅಥವಾ ನಾಮ ನಿರ್ದೇಶಿತರ ವಿಶೇಷ ಸಾಧನೆಯನ್ನು ಸಮರ್ಥಿಸಲು ಪ್ರಕಟಿತ ವಿಶೇಷ ಲೇಖನ ಮಾಲೆಗಳ ಪತ್ರಿಕಾ ತುಣುಕುಗಳು, ಪ್ರಕಟಿತ ಪುಸ್ತಕಗಳ ಪ್ರತಿಗಳು ಅಥವಾ ಡಿವಿಡಿ ಅಥವಾ ಪೆನ್‌ಡ್ರೈವ್‌ನಲ್ಲಿ ನಿರ್ಮಿಸಿರುವ ಕಾರ್ಯಕ್ರಮಗಳ ಸಂಚಿಕೆಗಳ ಪ್ರತಿಗಳು ಹಾಗೂ ಈಗಾಗಲೇ ಪಡೆದಿರುವ ಗೌರವಗಳ ದಾಖಲೆಗಳನ್ನೂ ಸಲ್ಲಿಸಬೇಕು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X