Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೊನಾ ಸೋಂಕಿಗೊಳಗಾದ ಕನಿಕಾ ಕಪೂರ್...

ಕೊರೊನಾ ಸೋಂಕಿಗೊಳಗಾದ ಕನಿಕಾ ಕಪೂರ್ ಭೇಟಿ: ವಸುಂಧರಾ ರಾಜೆ, ಪುತ್ರ ಸ್ವಯಂ ನಿರ್ಬಂಧದಲ್ಲಿ

ವಾರ್ತಾಭಾರತಿವಾರ್ತಾಭಾರತಿ20 March 2020 7:16 PM IST
share
ಕೊರೊನಾ ಸೋಂಕಿಗೊಳಗಾದ ಕನಿಕಾ ಕಪೂರ್ ಭೇಟಿ: ವಸುಂಧರಾ ರಾಜೆ, ಪುತ್ರ ಸ್ವಯಂ ನಿರ್ಬಂಧದಲ್ಲಿ

 ಹೊಸದಿಲ್ಲಿ,ನ.22: ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಕರೋನಾ ವೈರಸ್ ಸೋಂಕು ತಗಲಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿದ ಬೆನ್ನಲ್ಲೇ, ಆಕೆ ಲಕ್ನೋದಲ್ಲಿ ಭೋಜನಕೂಟವೊಂದರಲ್ಲಿ ಪಾಲ್ಗೊಂಡಿರುವ ವಿಷಯ ಕೂಡಾ ಬೆಳಕಿಗೆ ಬಂದಿದ್ದು ಭಾರೀ ಆತಂಕ ಸೃಷ್ಟಿಸಿದೆ. ಬಿಜೆಪಿಯ ನಾಯಕಿ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಹಾಗೂ ಆಕೆಯ ಪುತ್ರ ದುಷ್ಯಂತ ಸಿಂಗ್ ಕೂಡಾ ಭೋಜನಕೂಟದಲ್ಲಿ ಭಾಗವಹಿಸಿದ್ದು, ಅವರೀಗ ಸ್ವಯಂ ದಿಗ್ಬಂಧನಕ್ಕೊಳಗಾಗಲು ನಿರ್ಧರಿಸಿದ್ದಾರೆ.

ವಸುಂಧರ ರಾಜೆ ಸಿಂಧ್ಯಾ ಶುಕ್ರವಾರ ಈ ಬಗ್ಗೆ ಟ್ವೀಟ್ ಮಾಡಿದ್ದು, ‘‘ ನಾನು ಲಕ್ನೋದಲ್ಲಿದ್ದಾಗ ನನ್ನ ಪುತ್ರ ದುಷ್ಯಂತ ಹಾಗೂ ಆತನ ಬೀಗರ ಜೊತೆಗೆ ನಾನು ಭೋಜನಕೂಟದಲ್ಲಿ ಭಾಗವಹಿಸಿದ್ದೆ. ದುರದೃಷ್ಟವಶಾತ್ ಕೊರೋನವೈರಸ್ ಸೋಂಕು ಪಾಸಿಟಿವ್ ಆಗಿರುವುದು ದೃಢಪಟ್ಟ ಕನಿಕಾ ಕಪೂರ್ ಕೂಡಾ ಅತಿಥಿಯಾಗಿ ಆಗಮಿಸಿದ್ದರು. ಅಪಾರವಾದ ಎಚ್ಚರಿಕೆಯ ಕ್ರಮವಾಗಿ, ನನ್ನ ಪುತ್ರ ಹಾಗೂ ನಾನು ತಕ್ಷಣವೇ ಸ್ವಯಂ ದಿಗ್ಬಂಧನಕ್ಕೊಳಗಾಗಿದ್ದೇವೆ ಹಾಗೂ ಎಲ್ಲಾ ರೀತಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ’’ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರ ರಾಜೆ ಟ್ವೀಟಿಸಿದ್ದಾರೆ.

 ಸಂತೋಷಕೂಟವನ್ನು ತಾನು ಆಯೋಜಿಸಿದ್ದೆ ಎಂಬ ವರದಿಗಳನ್ನು 41 ವರ್ಷ ವಯಸ್ಸಿನ ಕನಿಕಾ ಕಪೂರ್ ನಿರಾಕರಿಸಿದ್ದಾರೆ. ಸಚಿವರು ಹಾಗೂ ಅಧಿಕಾರಿಗಳು ಸೇರಿದಂತೆ ಹಲವು ಪ್ರಮುಖ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ ಕಾರ್ಯಕ್ರಮದಲ್ಲಿ ಸುಮಾರು 200 ಮಂದಿ ಉಪಸ್ಥಿತರಿದ್ದರೆಂದು ತಿಳಿದುಬಂದಿದೆ.

ಕನಿಕಾಕಪೂರ್ ಮಾರ್ಚ್ 9ರಂದು ಲಂಡನ್‌ನಿಂದ ಮುಂಬೈಗೆ ಆಗಮಿಸಿದ್ದರು ಹಾಗೂ ಎರಡು ದಿನಗಳ ಬಳಿಕ ಅವರು ಲಕ್ನೋಗೆ ತೆರಳಿದ್ದರು.

ಲಂಡನ್‌ನಿಂದ ಆಗಮಿಸಿದ ಬಳಿಕ ಮುಂಬೈ ವಿಮಾನನಿಲ್ದಾಣದಲ್ಲಿ ತಾನು ತಪಾಸಣೆಗೊಳಗಾಗಿದ್ದರೂ ತನಗೆ ಕೊರೋನಾ ವೈರಸ್‌ನ ಯಾವುದೇ ರೋಗಲಕ್ಷಣಗಳು ಪತ್ತೆಯಾಗಿರಲಿಲ್ಲವೆಂದು ಆಕೆ ಹೇಳಿದ್ದಾರೆ.

ಸಂಸತ್‌ಗೆ ಬೀಗಜಡಿಯಿರಿ: ಬ್ರಿಯಾನ್

ಕನಿಕಾ ಕಪೂರ್ ಉಪಸ್ಥಿತರಿದ್ದ ಸಂತೋಷಕೂಟದಲ್ಲಿ ಪಾಲ್ಗೊಂಡ ಬಳಿಕ, ಬಿಜೆಪಿ ಸಂಸದ ದುಷ್ಯಂತ ಸಿಂಗ್ ಲೋಕಸಭಾ ಕಲಾಪಕ್ಕೂ ಹಾಜರಾಗಿದ್ದರು. ಈ ಬಗ್ಗೆ ತೃಣಮೂಲ ಕಾಂಗ್ರೆಸ್ ಸದಸ್ಯ ಡೆರೆಕ್ ಓ ಬ್ರಿಯಾನ್ ಕಟುವಾಗಿ ಪ್ರತಿಕ್ರಿಯಿಸಿದ್ದು ಕೋವಿಡ್-19 ಹಿನ್ನೆಲೆಯಲ್ಲಿ ಸಂತ್‌ಗೆ ಪೂರ್ಣವಾಗಿ ಬೀಗಜಡಿಯಬೇಕೆಂದು ಆಗ್ರಹಿಸಿದ್ದಾರೆ.

 ‘‘ ಈ ಸರಕಾರವು ನಮ್ಮನ್ನೆಲ್ಲಾ ಅಪಾಯಕ್ಕೊಡ್ಡಿದೆ. ನೀವಾಗಿಯೇ ಏಕಾಂತದಲ್ಲಿರಿ ಎಂದು ಪ್ರಧಾನಿ ಹೇಳುತ್ತಾರೆ. ಆದರೆ ಸಂಸತ್ ನಡೆಯುತ್ತಲೇ ಇದೆ. ಮರು ದಿನ ನಾನು ದುಷ್ಯಂತರ ಸಮೀಪ ಸುಮಾರು 2:50 ತಾಸು ಕಾಲ ಕುಳಿತುಕೊಂಡಿದ್ದೆ. ಇನ್ನೂ ಇಬ್ಬರು ಸಂಸದರು ಸ್ವಯಂ ದಿಗ್ಬಂಧನದಲ್ಲಿದ್ದಾರೆ. ಈ ಅಧಿವೇಶನವನ್ನು ಮುಂದೂಡಬೇಕಾಗಿದೆ’’ ಎಂದು ಓ ಬ್ರಿಯಾನ್ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X