Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯಕ್ಕೆ ಹೆಚ್ಚುವರಿ ಪರಿಹಾರ ನೀಡಲು...

ರಾಜ್ಯಕ್ಕೆ ಹೆಚ್ಚುವರಿ ಪರಿಹಾರ ನೀಡಲು ದ.ಕ.ಜಿಲ್ಲಾ ಕಾಂಗ್ರೆಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 March 2020 8:49 PM IST
share

ಮಂಗಳೂರು, ಮಾ.20: ಕೇಂದ್ರ ಸರಕಾರವು ವ್ಯಾಪಾರದಲ್ಲಿ ನಷ್ಟ ಹೊಂದಿದವರಿಗೆ ಮತ್ತು ಕೆಲಸವನ್ನು ಕಳೆದುಕೊಂಡವರಿಗೆ ಹಾಗೂ ಆರ್ಥಿಕ ಮುಗ್ಗಟ್ಟನ್ನು ಎದುರಿಸುವ ಜನಸಾಮಾನ್ಯರಿಗೆ ಪ್ರಧಾನಿ ಆರ್ಥಿಕ ಭರವಸೆ ನೀಡುವುದೊಂದಿಗೆ ರಾಜ್ಯಕ್ಕೆ ಕಾನೂನಾತ್ಮಕವಾಗಿ ಕೊಡಬೇಕಾದ ತೆರಿಗೆ ಹಣ 11 ಸಾವಿರ ಕೋ.ರೂ.ಅಲ್ಲದೆ ಹೆಚ್ಚುವರಿಯಾಗಿ 30 ಸಾವಿರ ಕೋ.ರೂ.ವನ್ನು ಪರಿಹಾರ ರೂಪದಲ್ಲಿ ಬಿಡುಗಡೆ ಮಾಡಲು ಕಾಂಗ್ರೆಸ್ ಆಗ್ರಹಿಸಿದೆ.

ಪಕ್ಷದ ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ಮನಪಾ ಕಾರ್ಪೊರೇಟರ್ ಎಸಿ ವಿನಯರಾಜ್ ಪತ್ರಿಕಾ ಹೇಳಿಕೆಯೊಂದನ್ನು ನೀಡಿ ಕೊರೋನ ವೈರಸ್ ನಿಗ್ರಹದ ಹಿನ್ನಲೆ ಮತ್ತು ದೇಶದ ಜನತೆಯ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾ.22ರಂದು ಬೆಳಗ್ಗೆ 7ರಿಂದ ರಾತ್ರಿ 9ರವರೆಗೆ ‘ಜನತಾ ಕರ್ಫ್ಯೂ’ ನಡೆಸಲು ನೀಡಿರುವ ಕರೆಗೆ ಪಕ್ಷದ ಬೆಂಬಲವಿದೆ. ಆದರೆ, ಇದರಿಂದ ಮತ್ತಷ್ಟು ಆರ್ಥಿಕ ಮುಗ್ಗಟ್ಟು ಎದುರಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ವ್ಯಾಪಾರ-ವಹಿವಾಟು ಸ್ಥಗಿತದಿಂದ ಹೊಟೇಲು, ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ಅಸಂಘಟಿತ ವಲಯದ ಕಾರ್ಮಿಕರು, ರೈತರು ವ್ಯಾಪಾರವಿಲ್ಲದೆ ಆರ್ಥಿಕ ಮುಗಟ್ಟನ್ನು ಎದುರಿಸುತ್ತಿದ್ದಾರೆ. ಉತ್ಪಾದನೆ ಕಡಿತವಾಗಿರುವುದರಿಂದ ಎಲ್ಲಾ ಸಿಬ್ಬಂದಿ ಮತ್ತು ಕಾರ್ಮಿಕರನ್ನು ರಜೆಯಲ್ಲಿ ಕಳುಹಿಸಲಾಗಿದೆ. ಆಟೊ ರಿಕ್ಷಾ, ಟ್ಯಾಕ್ಸಿ ಚಾಲಕ ಮತ್ತು ಮಾಲಕರು, ಬೀದಿಬದಿ ವ್ಯಾಪಾರಸ್ಥರು, ಕಟ್ಟಡ ಕಾರ್ಮಿಕರು ಕೂಡ ಆರ್ಥಿಕ ತೊಂದರೆಗೆ ಈಡಾಗಿದ್ದಾರೆ. ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೇರುತ್ತಿದೆ. ದಿನಸಿ ಸಾಮಾನುಗಳ ಪೂರೈಕೆಯ ಕೊರತೆ ಕಂಡುಬಂದಿದ್ದು ಬೆಲೆ ಹೆಚ್ಚಳವಾಗಿದೆ. ಹೊರ ರಾಜ್ಯಗಳಿಂದ ಬರುವ ಸರಕು ಟ್ರಕ್ಕುಗಳು, ಬಸ್ಸುಗಳು ಸೇವೆಯನ್ನು ಮೊಟಕುಗೊಳಿಸಿವೆ. ಸರಕಾರಿ, ಖಾಸಗಿ ಬಸ್, ರೈಲು, ವಿಮಾನಗಳ ಸೇವೆಯನ್ನು ಭಾಗಶಃ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರಕಾರದ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆಗಳ ಸಿಬ್ಬಂದಿಯು ಮನೆಯಿಂದ ಕೆಲಸ ಮಾಡಲು ಕರೆ ನೀಡಲಾಗಿದೆ. ಸುಮಾರು 30 ಕೋಟಿ ಕಾರ್ಮಿಕ/ಸಿಬ್ಬಂದಿ ಪಡೆಯನ್ನು (ವರ್ಕ್‌ಫೋರ್ಸ್) ಮನೆಗೆ ಸೀಮಿತಗೊಳಿಸಲಾಗಿದೆ. ಈ ಎಲ್ಲಾ ಕಾರಣಗಳಿಂದ ಆರ್ಥಿಕ ವಹಿವಾಟು ಸಂಪೂರ್ಣ ಸ್ತಬ್ದವಾಗಿದೆ ಎಂದು ವಿನಯರಾಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರ್ಥಿಕ ವಲಯ ಸ್ತಬ್ದತೆಯಿಂದ ಜನರ ಆದಾಯಕ್ಕೆ ಕುತ್ತು ಬಂದಿದೆ. ಬ್ಯಾಂಕುಗಳಿಂದ ಸಾಲ ಪಡೆದವರು ಮರುಪಾವತಿ ಮಾಡಲು ಕಷ್ಟಪಡುತ್ತಿದ್ದಾರೆ. ರಜೆಯಲ್ಲಿ ಹೋಗಿರುವ ಸಿಬ್ಬಂದಿ/ಕಾರ್ಮಿಕರಿಗೆ ಪುನಃ ಕೆಲಸ ಸಿಗುತ್ತದೆ ಎಂಬ ಭರವಸೆ ಇಲ್ಲವಾಗಿದೆ. ಅಂಗಡಿ ಮುಂಗಟ್ಟು, ಕೈಗಾರಿಕೆಗಳು ವ್ಯಾಪಾರವಿಲ್ಲದೆ ಮುಚ್ಚಲ್ಪಟ್ಟಿದೆ. ಇಂತಹ ಅಘೋಷಿತ ತುರ್ತು ಪರಿಸ್ಥಿತಿಯಲ್ಲಿ ಕೇಂದ್ರ ಸರಕಾರ ಯಾವ ರೀತಿಯಾಗಿ ಆರ್ಥಿಕ ತೊಂದರೆಗೆ ಒಳಪಟ್ಟವರಿಗೆ ಮತ್ತು ಕೆಲಸ ಕಳೆದುಕೊಂಡವರಿಗೆ ಹಾಗೂ ರೋಗ ಭಾದಿತರಿಗೆ ಆರ್ಥಿಕವಾಗಿ ಸ್ಪಂದನೆ ನೀಡುತ್ತದೆ ಎಂದು ವಿನಯರಾಜ್ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X