Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಕೊರೋನ ವೈರಸ್ : ಉಡುಪಿ ಆಸ್ಪತ್ರೆಗಳಿಗೆ...

​ಕೊರೋನ ವೈರಸ್ : ಉಡುಪಿ ಆಸ್ಪತ್ರೆಗಳಿಗೆ ಮತ್ತೆ ನಾಲ್ವರು ದಾಖಲು

ವಾರ್ತಾಭಾರತಿವಾರ್ತಾಭಾರತಿ20 March 2020 9:06 PM IST
share

ಉಡುಪಿ, ಮಾ.20: ಶುಕ್ರವಾರ ಇನ್ನೂ ನಾಲ್ವರು ಶಂಕಿತ ಕೊರೋನ ವೈರಸ್ ಸೋಂಕಿಗಾಗಿ ಉಡುಪಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಇವರೆಲ್ಲರನ್ನೂ ಆಸ್ಪತ್ರೆಯ ಐಸೋಲೆಟೆಡ್ ವಾರ್ಡುಗಳಿಗೆ ಸೇರಿಸಿ, ಅವರ ಗಂಟಲು ದ್ರವಗಳ ಮಾದರಿಗಳನ್ನು ಸಂಗ್ರಹಿಸಿ ಹಾಸನದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಓ) ಡಾ.ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ.

ಬಹರೈನ್‌ನಿಂದ ಆಗಮಿಸಿದ 48ರ ಹರೆಯದ ವ್ಯಕ್ತಿಯೊಬ್ಬರು ಹಾಗೂ ಸೌದಿಯಿಂದ ಆಗಮಿಸಿದ 23ರ ಹರೆಯದ ಯುವತಿ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರೆ, ಸೌದಿಯಿಂದ ಬಂದ 32ರ ಹರೆಯದ ಯುವಕ ಕುಂದಾಪುರದ ಸರಕಾರಿ ತಾಲೂಕು ಆಸ್ಪತ್ರೆಗೆ ಹಾಗೂ ಆಸ್ಟ್ರೇಲಿಯ ದಿಂದ ಬಂದ 66 ವರ್ಷ ಪ್ರಾಯದ ಹಿರಿಯ ಮಹಿಳೆಯೊಬ್ಬರು ಅಜ್ಜರಕಾಡಿನ ಜಿಲ್ಲಾಸ್ಪತ್ರೆಯ ಪ್ರತ್ಯೇಕಿತ ವಾರ್ಡಿಗೆ ದಾಖಲಾಗಿದ್ದಾರೆ ಎಂದವರು ವಿವರಿಸಿದರು.

ಶಿವಮೊಗ್ಗದಲ್ಲಿರುವ ವೈರಸ್ ಪತ್ತೆ ಕೇಂದ್ರದ ಪ್ರಯೋಗಾಲಯದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಕಳುಹಿಸಿದ ಐವರು ಹಾಗೂ ಗುರುವಾರ ಕಳುಹಿಸಿದ ಮೂವರು ಶಂಕಿತರು ಸೇರಿ ಒಟ್ಟು ಎಂಟು ಮಂದಿಯ ಸ್ಯಾಂಪಲ್‌ಗಳ ಪರೀಕ್ಷಾ ವರದಿ ಇಂದೂ ನಮ್ಮ ಕೈಸೇರಿಲ್ಲ ಎಂದು ಅವರು ತಿಳಿಸಿದು.

369 ಮಂದಿಯ ತಪಾಸಣೆ:  ವಿದೇಶಗಳಿಂದ ಆಗಮಿಸಿದ ಭಾರತೀಯರ ಕೊರೋನ ವೈರಸ್ ಸೋಂಕಿಗಾಗಿ ಪರೀಕ್ಷೆ ಪ್ರಾರಂಭಗೊಂಡ ಬಳಿಕ ಉಡುಪಿ ಜಿಲ್ಲೆಯ ಒಟ್ಟು 364 ಮಂದಿ ತಪಾಸಣೆಗೆ ಒಳಗಾಗಿದ್ದಾರೆ. ಇವರಲ್ಲಿ 66 ಮಂದಿ ಇಂದು ಒಂದೇ ದಿನದಲ್ಲಿ ತಪಾಸಣೆಗೊಳಗಾದರು ಎಂದವರು ತಿಳಿಸಿದರು.

ಇವರಲ್ಲಿ 69 ಮಂದಿ ನಿಗದಿತ 28 ದಿನಗಳ ನಿರ್ಬಂಧದ ಅವಧಿಯನ್ನು ಪೂರ್ಣಗೊಳಿಸಿದ್ದು, ಸಂಪೂರ್ಣ ಆರೋಗ್ಯದಿಂದಿದ್ದಾರೆ. ಇಂದು ತಪಾಸಣೆಗೊಳಗಾದ 66 ಮಂದಿಯೂ ಸೇರಿದಂತೆ ಒಟ್ಟು 286 ಮಂದಿ ಅವರವರ ಮನೆಗಳಲ್ಲಿ ಕ್ವಾರಂಟೀನ್ ಅವಧಿಯಲ್ಲಿ ನಿಗಾದಲ್ಲಿ ಇದ್ದಾರೆ.

ಇನ್ನು 12 ಮಂದಿ ಜಿಲ್ಲಾಸ್ಪತ್ರೆ, ಮಣಿಪಾಲದ ಕೆಎಂಸಿ ಹಾಗೂ ಕುಂದಾಪುರದ ತಾಲೂಕು ಸರಕಾರಿ ಆಸ್ಪತ್ರೆಯ ಐಸೋಲೆಟೆಡ್ ವಾರ್ಡುಗಳಲ್ಲಿ ವೈದ್ಯರ ತೀವ್ರ ನಿರೀಕ್ಷಣೆಯಲ್ಲಿದ್ದಾರೆ. ಇವರಲ್ಲಿ ಇಂದು ವಾರ್ಡುಗಳಿಗೆ ಸೇರ್ಪಡೆಗೊಂಡ ನಾಲ್ವರೊಂದಿಗೆ ಇನ್ನೂ ಮಾದರಿಯ ಪರೀಕ್ಷಾ ವರದಿ ಕೈಸೇರದ ಎಂಟು ಮಂದಿ ಶಂಕಿತ ಸೋಂಕಿತರಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 28 ಮಂದಿಯ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದಿರುವ ಎಲ್ಲಾ 16 ಮಂದಿಯಲ್ಲಿ ನೆಗೆಟಿವ್ ಆಗಿದೆ. ಇನ್ನುಳಿದ 12 ಮಂದಿ ವರದಿ ನಿರೀಕ್ಷೆಯಲ್ಲಿರುವವರು. ಜಿಲ್ಲೆಯಲ್ಲಿ ಇದುವರೆಗೆ ಯಾರೂ ಸೋಂಕಿತರು ಪತ್ತೆಯಾಗಿಲ್ಲ ಎಂದು ಡಾ. ಸೂಡ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X