Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೊರೋನ ವೈರಸ್: ನಿರ್ಬಂಧದ ಶಿಷ್ಟಾಚಾರ...

ಕೊರೋನ ವೈರಸ್: ನಿರ್ಬಂಧದ ಶಿಷ್ಟಾಚಾರ ಉಲ್ಲಂಘಿಸಿದ ಮೇರಿಕೋಮ್

ವಾರ್ತಾಭಾರತಿವಾರ್ತಾಭಾರತಿ21 March 2020 11:44 PM IST
share
ಕೊರೋನ ವೈರಸ್: ನಿರ್ಬಂಧದ ಶಿಷ್ಟಾಚಾರ ಉಲ್ಲಂಘಿಸಿದ ಮೇರಿಕೋಮ್

ಹೊಸದಿಲ್ಲಿ, ಮಾ.21: ಕೊರೋನ ವೈರಸ್ ಸಮುದಾಯಕ್ಕೆ ಪಸರಿಸುವ ಭೀತಿಯ ಸಾಧ್ಯತೆ ನಡುವೆ ಹಿರಿಯ ಬಾಕ್ಸರ್ ಹಾಗೂ ರಾಜ್ಯಸಭಾ ಸಂಸದೆ ಮೇರಿಕೋಮ್ ವಿಶ್ವ ಆರೋಗ್ಯ ಸಂಘಟನೆ(ಡಬ್ಲುಟಿಎ)ಹಾಗೂ ಸರಕಾರಗಳು ವಿಶ್ವದಾದ್ಯಂತ ವಿಧಿಸಿರುವ 14 ದಿನಗಳ ನಿರ್ಬಂಧದ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ.

ಜೋರ್ಡನ್‌ನ ಅಮ್ಮಾನ್‌ನಲ್ಲಿ ಏಶ್ಯ-ಒಶಿಯಾನಿಯ ಒಲಿಂಪಿಕ್ಸ್ ಕ್ವಾಲಿಫೈಯರ್‌ನಲ್ಲಿ ಸ್ಪರ್ಧಿಸಿರುವ ಮೇರಿ ಕೋಮ್ ಮಾ.13ರಂದು ಸ್ವದೇಶಕ್ಕೆ ವಾಪಸಾಗಿದ್ದರು. ಮೇರಿಕೋಮ್ ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಕನಿಷ್ಠ 14 ದಿನಗಳ ಕಾಲ ಸ್ವಯಂ ನಿರ್ಬಂಧ ವಿಧಿಸಿಕೊಳ್ಳಬೇಕಾಗಿತ್ತು.

ಆದರೆ ಅವರು ಮಾರ್ಚ್ 18ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ರಾಷ್ಟ್ರಪತಿ ಭವನದಲ್ಲಿ ಅಯೋಜಿಸಿದ್ದ ಉಪಹಾರ ಕೂಟದಲ್ಲಿ ಭಾಗವಹಿಸಿದ್ದರು. ರಾಷ್ಟ್ರಪತಿಗಳ ಅಧಿಕೃತ ಟ್ವಿಟರ್‌ನಲ್ಲಿ ಟ್ವೀಟ್ ಮಾಡಲ್ಪಟ್ಟಿರುವ ನಾಲ್ಕು ಚಿತ್ರಗಳ ಪೈಕಿ ಒಂದರಲ್ಲಿ ಮೇರಿಕೋಮ್ ಅವರು ಇತರ ಸಂಸತ್ ಸದಸ್ಯರೊಂದಿಗೆ ಕಾಣಿಸಿಕೊಂಡಿದ್ದರು.

ರಾಷ್ಟ್ರಪತಿ ಕೋವಿಂದ್ ಅವರು ಉತ್ತರಪ್ರದೇಶ ಹಾಗೂ ರಾಜಸ್ಥಾನ ಸಂಸತ್ ಸದಸ್ಯರಿಗೆ ಇಂದು ಬೆಳಗ್ಗೆ ಉಪಹಾರ ಕೂಟ ಏರ್ಪಡಿಸಿದ್ದರು ಎಂದು ಫೋಟೊದ ಕೆಳಗೆ ಬರೆಯಲಾಗಿತ್ತು. ಅದೇ ದಿನ ರಾಷ್ಟ್ರಪತಿ ಭವನದಲ್ಲಿ ಬಿಜೆಪಿ ಸಂಸದ ದುಷ್ಯಂತ್ ಸಿಂಗ್ ಅವರು ವೈರಸ್ ಸೋಂಕು ಪೀಡಿತ ಬಾಲಿವುಡ್ ಗಾಯಕಿ ಕನಿಕಾ ಕಪೂರ್‌ರನ್ನು ಸಂಪರ್ಕಿಸಿದ್ದರು. ಸಿಂಗ್ ಇದೀಗ ಅವರು ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ.

ಜೋರ್ಡನ್‌ನಲ್ಲಿ ಭಾಗವಹಿಸಿರುವ ಭಾರತದ ಬಾಕ್ಸಿಂಗ್ ತಂಡ ಕಡ್ಡಾಯವಾಗಿ 14 ದಿನಗಳ ಗೃಹನಿರ್ಬಂಧಕ್ಕೆ ಒಳಗಾಗಿದೆೆಎಂದು ಬಾಕ್ಸಿಂಗ್ ಕೋಚ್ ಸ್ಯಾಂಟಿಯಾಗೊ ನೀವಾ ಶುಕ್ರವಾರ ತಿಳಿಸಿದ್ದಾರೆ.

‘‘ನಾನು ಜೋರ್ಡನ್‌ನಿಂದ ವಾಪಸಾದ ಬಳಿಕ ಮನೆಯಲ್ಲೇ ಇದ್ದೆ. ರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ಮಾತ್ರ ಹಾಜರಾಗಿದ್ದೆ. ದುಷ್ಯಂತ್‌ರನ್ನು ಭೇಟಿಯಾಗಿಲ್ಲ ಅಥವಾ ಅವರ ಕೈಕುಲುಕಿಲ್ಲ. ಜೋರ್ಡನ್ ನಿಂದ ವಾಪಸಾದ ಬಳಿಕ ನನ್ನ 14 ದಿನಗಳ ಗೃಹನಿರ್ಬಂಧದ ಅವಧಿಯು ಕೊನೆಗೊಂಡಿದೆ. ಮುಂದಿನ 3-4 ದಿನಗಳು ಮಾತ್ರ ಮನೆಯಲ್ಲಿರುತ್ತೇನೆ’’ ಎಂದು ಮೇರಿಕೋಮ್ ಹೇಳಿದ್ದಾರೆ.

ಉಪಹಾರ ಕೂಟದಲ್ಲಿ ದುಷ್ಯಂತ್ ಸಿಂಗ್ ಅವರು ರಾಷ್ಟ್ರಪತಿಯವರನ್ನು ಭೇಟಿಯಾಗಿರುವ ಕಾರಣ ರಾಷ್ಟ್ರಪತಿ ಕೋವಿಂದ್ ಕೊರೋನ ವೈರಸ್ ಪರೀಕ್ಷೆಗೆ ಒಳಗಾಗುವ ಸಾಧ್ಯತೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X