Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶಾದ್ಯಂತ ಮಾ.31 ರ ತನಕ ಎಲ್ಲ ರೈಲು...

ದೇಶಾದ್ಯಂತ ಮಾ.31 ರ ತನಕ ಎಲ್ಲ ರೈಲು ಸೇವೆ ಬಂದ್

ವಾರ್ತಾಭಾರತಿವಾರ್ತಾಭಾರತಿ22 March 2020 12:35 PM IST
share
ದೇಶಾದ್ಯಂತ ಮಾ.31 ರ ತನಕ ಎಲ್ಲ ರೈಲು ಸೇವೆ ಬಂದ್

ಹೊಸದಿಲ್ಲಿ,ಮಾ.22: ಕೊರೋನವೈರಸ್ ಪೀಡಿತ ಪ್ರಯಾಣಿಕರು ಸೋಂಕನ್ನು ಇನ್ನಷ್ಟು ಹರಡುತ್ತಿದ್ದಾರೆ ಎಂಬ ಕಳವಳಗಳ ನಡುವೆಯೇ ಅಭೂತಪೂರ್ವ ಹೆಜ್ಜೆಯನ್ನಿರಿಸಿರುವ ಭಾರತೀಯ ರೈಲ್ವೆಯು ಮಾ.22ರ ಮಧ್ಯರಾತ್ರಿಯಿಂದ ಮಾ.31ರ ಮಧ್ಯರಾತ್ರಿಯವರೆಗೆ ಮೇಲ್ ಮತ್ತು ಎಕ್ಸ್‌ಪ್ರೆಸ್ ಸೇರಿದಂತೆ ತನ್ನ ಎಲ್ಲ 13,523 ಪ್ರಯಾಣಿಕ ರೈಲುಗಳ ಸೇವೆಯನ್ನು ರದ್ದುಗೊಳಿಸಿದೆ.

ಕೊಂಕಣ ರೈಲ್ವೆ, ಕೋಲ್ಕತಾ ಮೆಟ್ರೋ ರೇಲ್ ಮತ್ತು ಎಲ್ಲ ಉಪನಗರ ರೈಲು ಸೇವೆಗಳೂ ಇದರಲ್ಲಿ ಸೇರಿವೆ. ಕೇವಲ ಸರಕು ಸಾಗಾಣಿಕೆ ರೈಲುಗಳು ಮಾತ್ರ ಸಂಚರಿಸಲಿವೆ. ನಿರ್ಬಂಧದಲ್ಲಿರುವಂತೆ ಸೂಚಿಸಲಾಗಿದ್ದ ವ್ಯಕ್ತಿಗಳು ರೈಲುಗಳಲ್ಲಿ ಪ್ರಯಾಣಿಸುತ್ತಿದ್ದ ಮೂರು ಪ್ರಕರಣಗಳನ್ನು ಶನಿವಾರ ಪತ್ತೆ ಹಚ್ಚಲಾಗಿತ್ತು. ಈ ಪ್ರಯಾಣಿಕರ ಪೈಕಿ 12ಜನರು ಕೊರೋನವೈರಸ್ ಸೋಂಕಿಗೊಳಗಾಗಿದ್ದು ದೃಢಪಟ್ಟಿತ್ತು.

ರೈಲ್ವೆಯು ಈಗಾಗಲೇ ಶುಕ್ರವಾರ ಹಲವಾರು ರೈಲುಗಳನ್ನು ರದ್ದುಗೊಳಿಸುವ ಮೂಲಕ ತನ್ನ ಸೇವೆಗಳನ್ನು ಕಡಿತಗೊಳಿಸಿತ್ತು. ಆದರೆ ಅದಾಗಲೇ ಪ್ರಯಾಣ ಆರಂಭಿಸಿದ್ದ ರೈಲುಗಳು ಪ್ರಯಾಣ ಮುಂದುವರಿಸಲು ಅವಕಾಶ ನೀಡಿತ್ತು.

    ಮಾ.22ರಂದು ಬೆಳಗಿನ ನಾಲ್ಕು ಗಂಟೆಗೆ ಮುನ್ನ ಪ್ರಯಾಣವನ್ನು ಆರಂಭಿಸಿರುವ ರೈಲುಗಳು ತಮ್ಮ ನಿಗದಿತ ಗಮ್ಯದವರೆಗೆ ಸಂಚರಿಸಲಿವೆ. ಪ್ರಯಾಣದ ವೇಳೆ ಮತ್ತು ಅವರ ನಿಗದಿತ ತಾಣಗಳಲ್ಲಿ ಪ್ರಯಾಣಿಕರಿಗಾಗಿ ಸಾಕಷ್ಟು ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದು ರೈಲ್ವೆ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಪ್ರಯಾಣಿಕರು ಮಾ.31ರವರೆಗೆ ರದ್ದಾಗಿರುವ ಎಲ್ಲ ರೈಲುಗಳ ಸಂಪೂರ್ಣ ಟಿಕೆಟ್ ಶುಲ್ಕವನ್ನು ಜೂ.21ರವರೆಗೆ ವಾಪಸ್ ಪಡೆಯಬಹುದು.

 ಕೊರೋನವೈರಸ್ ಹರಡುವಿಕೆಯನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ರೈಲು ಮ್ಯೂಝಿಯಮ್‌ಗಳು, ಹೆರಿಟೇಜ್ ಗ್ಯಾಲರಿಗಳು ಮತ್ತು ಹೆರಿಟೇಜ್ ಪಾರ್ಕ್‌ಗಳನ್ನು ಎ.15ರವರೆಗೆ ಮುಚ್ಚುವಂತೆಯೂ ರೈಲ್ವೆಯು ಆದೇಶಿಸಿದೆ.

 ರವಿವಾರ ಇನ್ನಿಬ್ಬರು ಕೊರೋನವೈರಸ್‌ಗೆ ಬಲಿಯಾಗುವು ದರೊಂದಿಗೆ ದೇಶದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಆರಕ್ಕೇರಿದೆ. ಇದೇ ವೇಳೆ ದೃಢೀಕೃತ ಸೋಂಕು ಪ್ರಕರಣಗಳ ಸಂಖ್ಯೆ 341ಕ್ಕೇರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X