ಬೆಂಗಳೂರು: ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಸ್ಕ್ರೀನಿಂಗ್
ಬೆಂಗಳೂರು, ಮಾ.23: ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕಟ್ಟುನಿಟ್ಟಾಗಿ ಸ್ಕ್ರೀನಿಂಗ್ಗೆ ಒಳಪಡಿಸಲಾಗುತ್ತಿದೆ.
ದಿಲ್ಲಿಯಿಂದ ಸೋಮವಾರ ಮಧ್ಯಾಹ್ನ ಆಗಮಿಸಿದ ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಸ್ಕ್ರೀನಿಂಗ್ಗೆ ಒಳಪಡಿಸಲಾಯಿತು. ಈ ವೇಳೆ ಕೆಲವು ಪ್ರಯಾಣಿಕರ ದೇಹದ ತಾಪಮಾನದಲ್ಲಿ ಏರುಪೇರು ಕಂಡುಬಂದ ಕಂಡುಬಂದ ಅವರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಯಿತು.
ಈ ನಡುವೆ ಈ ರೈಲಿನಲ್ಲಿದ್ದ ಯಾವೊಬ್ಬ ಪ್ರಯಾಣಿಕನಲ್ಲೂ ಕೊರೋನ ವೈರಸ್ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಮಧ್ಯಾಹ್ನವಾದ ಕೆಲವರ ದೇಹ ತಾಪಮಾನದಲ್ಲಿ ಏರುಪೇರು ಕಂಡುಂಬಂದಿರಬಹುದು. ಆದರೂ ಕೆಲವರಿಗೆ ನಿಗಾದಲ್ಲಿರುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.