Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ನಿಯಂತ್ರಣಕ್ಕೆ 1 ಸಾವಿರ...

ಕೊರೋನ ನಿಯಂತ್ರಣಕ್ಕೆ 1 ಸಾವಿರ ವೆಂಟಿಲೇಟರ್ ಗಳ ಖರೀದಿ: ಡಿಸಿಎಂ ಡಾ.ಅಶ್ವಥ್ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ24 March 2020 10:19 PM IST
share
ಕೊರೋನ ನಿಯಂತ್ರಣಕ್ಕೆ 1 ಸಾವಿರ ವೆಂಟಿಲೇಟರ್ ಗಳ ಖರೀದಿ: ಡಿಸಿಎಂ ಡಾ.ಅಶ್ವಥ್ ನಾರಾಯಣ

ಬೆಂಗಳೂರು, ಮಾ.24: ರಾಜ್ಯದಲ್ಲಿ ಕೊರೋನ ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಒಂದು ಸಾವಿರ ವೆಂಟಿಲೇಟರ್ ಗಳ ಖರೀದಿಗೆ ಅನುಮೋದನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ.

ಮಂಗಳವಾರ ವಿಧಾನಪರಿಷತ್‍ನಲ್ಲಿ ನಿಯಮ 68 ಅಡಿಯಲ್ಲಿ ರಾಜ್ಯಾದ್ಯಂತ ಕೋವಿಡ್-19 ಖಾಯಿಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತು ವಿರೋಧ ಪಕ್ಷದ ನಾಯಕ ಸೇರಿದಂತೆ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ 300 ಸರಕಾರಿ ಹಾಗೂ 100 ಖಾಸಗಿ ವೆಂಟಿಲೇಟರ್ ಗಳ ಸೌಲಭ್ಯವಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಇದುವರೆಗೂ ಕೊರೋನ ಸೋಂಕು ದೃಢಪಟ್ಟ ವ್ಯಕ್ತಿಗಳಲ್ಲಿ ಯಾರಿಗೂ ವೆಂಟಿಲೇಟರ್ ಬಳಕೆ ಮಾಡಿಲ್ಲ. ಹೀಗಾಗಿ, ಸರಕಾರ ಮುಂಜಾಗ್ರತಾ ಕ್ರಮವಾಗಿ 1 ಸಾವಿರ ವೆಂಟಿಲೇಟರ್ ಗಳನ್ನು ಖರೀದಿ ಮಾಡಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಅಲ್ಲದೆ, ಇನ್ಪೋಸಿಸ್ 100 ವೆಂಟಿಲೇಟರ್ ಖರೀದಿಸಿ ನೀಡುವುದಾಗಿ ಹೇಳಿದೆ. ಉಳಿದಂತೆ ಜಿಲ್ಲಾ ಮಟ್ಟದಲ್ಲಿ ಖಾಸಗಿ ಆಸ್ಪತ್ರೆಗಳಿಂದ ಸೌಲಭ್ಯಗಳನ್ನು ಪಡೆಯಲಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ 15 ಲಕ್ಷ ಮಾಸ್ಕ್ ಗಳನ್ನು ತಯಾರಿಸಲು ಈಗಾಗಲೇ ಒಂದು ಸಂಸ್ಥೆಗೆ ಜವಾಬ್ದಾರಿ ನೀಡಿದ್ದೇವೆ. ಉಳಿದಂತೆ, 10 ಲಕ್ಷ ಪಿಪಿಪಿಗಳ ತಯಾರಿಕೆಗೆ ಅನುಮತಿ ನೀಡಲಾಗಿದೆ. ಎನ್ 95 ಮಾಸ್ಕ್ ಗಳ ತಯಾರಿಕೆಗೂ ಹೇಳಲಾಗಿದೆ. ಜನರಿಗೆ ಸ್ಥಳೀಯವಾಗಿ ಜಾಗೃತಿ ವಹಿಸಲು ಅಲ್ಲಲ್ಲಿ ತಾತ್ಕಾಲಿಕ ಟೆಂಟ್‍ಗಳನ್ನು ಹಾಕಲಾಗಿದ್ದು, ಅಲ್ಲಿಯೇ ಫಿವರ್ ಚೆಕ್ ಮಾಡಲಾಗುತ್ತಿದೆ ಎಂದರು.

ಜಿಲ್ಲಾ ಮಟ್ಟದಲ್ಲಿ ಐಸೋಲೇಷನ್ ಘಟಕ ಮಾಡಲಾಗಿದೆ. ಈಗಾಗಲೇ 9 ಜಿಲ್ಲೆಗಳಲ್ಲಿ ಇದ್ದು, ಅದನ್ನು ರಾಜ್ಯದ ಎಲ್ಲ ಕಡೆಗಳಿಗೂ ವಿಸ್ತರಣೆ ಮಾಡಲಾಗಿದೆ ಎಂದ ಅವರು, ತಾಲೂಕು ಮಟ್ಟದಲ್ಲಿಯೂ ಫಿವರ್ ಸ್ಕ್ರೀನಿಂಗ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಮಾಡಿದ್ದು, ಜಿಲ್ಲಾಧಿಕಾರಿಗಳಿಗೆ ಅದರ ನಿಯಂತ್ರಣಕ್ಕೆ ವಹಿಸಲಾಗಿದೆ ಎಂದು ವಿವರಿಸಿದರು.

ಕೊರೋನ ಸೋಂಕು ಪತ್ತೆಯಾದಂತಹ ಕುಟುಂಬದವರ ಮನೆಗಳ ಮೇಲೆ ನೋಟಿಸ್ ಅಂಟಿಸಲಾಗುತ್ತದೆ. ಅದರಲ್ಲಿ ಐಸೋಲೇಷನ್, ಕ್ವಾರಂಟೈನ್‍ನಲ್ಲಿರಬೇಕಾ ಎಂಬುದನ್ನು ತಿಳಿಸಲಾಗಿರುತ್ತದೆ ಎಂದು ಅವರು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X