Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಹಿನ್ನೆಲೆಯಲ್ಲಿ 'ಸಾಮಾಜಿಕ ಅಂತರ':...

ಕೊರೋನ ಹಿನ್ನೆಲೆಯಲ್ಲಿ 'ಸಾಮಾಜಿಕ ಅಂತರ': ಮಾದರಿಯಾದ ಕೊಪ್ಪದ ಅಂಗಡಿಗಳು

ವಾರ್ತಾಭಾರತಿವಾರ್ತಾಭಾರತಿ25 March 2020 6:05 PM IST
share
ಕೊರೋನ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ: ಮಾದರಿಯಾದ ಕೊಪ್ಪದ ಅಂಗಡಿಗಳು

ಚಿಕ್ಕಮಗಳೂರು, ಮಾ.22: ಇಡೀ ದೇಶದಲ್ಲಿ ಕೊರೋನ ವೈರಸ್ ಸೋಂಕು ಹರಡುತ್ತಿರುವ ಆತಂಕ ಎಲ್ಲರನ್ನೂ ಕಾಡುತ್ತಿದ್ದು, ಸರಕಾರಗಳು ಈ ಸಂಬಂಧ ಹಲವು ರೀತಿಯಲ್ಲಿ ಜನಜಾಗೃತಿ ಮೂಡಿಸುತ್ತಿದೆ. ದೇಶಾದ್ಯಂತ ಲಾಕ್ ಡೌನ್ ಕೂಡಾ ಮಾಡಲಾಗಿದೆ. ಜನತೆಯೂ ಜಾಗೃತರಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಸ್ವಚ್ಚತೆ, ಗೃಹಬಂಧನದ ಮೂಲಕ ಕೊರೋನ ಹರಡದಂತೆ ಜಾಗೃತೆ ವಹಿಸುತ್ತಿದ್ದಾರೆ. ಈ ಮಧ್ಯೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಹಲವು ಅಂಗಡಿ, ಮೆಡಿಕಲ್ ಮಾಲಕರು 'ಸಾಮಾಜಿಕ ಅಂತರ'ದ ಮೂಲಕ ಗಮನ ಸೆಳೆದಿದ್ದು, ಇತರರಿಗೆ ಮಾದರಿಯಾಗಿದ್ದಾರೆ.

ಕೊಪ್ಪದ ಹಲವು ದಿನಸಿ, ತರಕಾರಿ ಅಂಗಡಿಗಳು, ಮೆಡಿಕಲ್ ಶಾಪ್ ಗಳು 'ಸಾಮಾಜಿಕ ಅಂತರ'ದ ಮೂಲಕ ಕೊರೋನ ಹರಡದಂತೆ ಜಾಗೃತೆ ವಹಿಸುತ್ತಿದ್ದು, ಅಂಗಡಿಗಳ ಮುಂಭಾಗ ಗ್ರಾಹಕರ ನಡುವೆ ಅಂತರ ಕಾಪಾಡಲು ಮೀಟರ್ ಅಂತರದಲ್ಲಿ ಚೌಕಾಕಾರದಲ್ಲಿ ಮಾರ್ಕ್ ಮಾಡಿದ್ದಾರೆ. ಗ್ರಾಹಕರು ಈ ಮಾರ್ಕ್ ನಲ್ಲೇ ನಿಲ್ಲಬೇಕಾಗಿದ್ದು, ಇತರೆ ಗ್ರಾಹಕರು ಪರಸ್ಪರ ಅಂತರ ಕಾಯ್ದುಕೊಳ್ಳಲು ಇದು ಸಹಕಾರಿಯಾಗುತ್ತದೆ. ಈ ರೀತಿಯ ಮಾರ್ಕ್ ಗಳು ಕೊಪ್ಪದ ಹಲವು ಕಡೆಗಳಲ್ಲಿ ಅಂಗಡಿಗಳ ಮುಂಭಾಗ ಕಂಡುಬಂದಿದೆ.

ಲೌಕ್‌ ಡೌನ್ ಹೊರತಾಗಿಯೂ ದಿನಬಳಕೆಯ ಸಾಮಗ್ರಿಗಳು ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಜನಸಾಮಾನ್ಯರು ಮಾರುಕಟ್ಟೆ ಸೇರಿದಂತೆ ಅಂಗಡಿಗಳ ಎದುರು ಗುಂಪುಗೂಡುತ್ತಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂಬ ನಿಯಮವನ್ನೇ ಮರೆತು ನೂರಾರು ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಹೀಗಾಗಿ ಸ್ವತಃ ಅಂಗಡಿ, ಮೆಡಿಕಲ್ ಗಳ ಮಾಲಕರೇ ಈ ಬಗ್ಗೆ ಜಾಗೃತರಾಗಿದ್ದು, 'ಸಾಮಾಜಿಕ ಅಂತರ'ದ  ಮೂಲಕ ಕೊರೋನ ಹರಡದಂತೆ ಮುನ್ನೆಚ್ಚರಿಕೆ ವಹಿಸುವಲ್ಲಿ ಇತರರಿಗೆ ಮಾದರಿಯಾಗಿದ್ದಾರೆ. 

ಕೊರೋನ ವೈರಸ್ ಹರಡುತ್ತಿರುವ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸರಕಾರ ಜನತೆಗೆ ಮನವಿ ಮಾಡುತ್ತಿದೆ. ಆದರೂ ಜನತೆ ಈ ಬಗ್ಗೆ ಸಂಪೂರ್ಣ ಎಚ್ಚರ ವಹಿಸಿದಂತೆ ಕಾಣುತ್ತಿಲ್ಲ. ಜನಸಾಮಾನ್ಯರು ಬಹುತೇಕವಾಗಿ ಜಿಲ್ಲಾಡಳಿತದ ಸೂಚನೆಗಳನ್ನು ಪಾಲನೆ ಮಾಡುತ್ತಿದ್ದಾರೆ. ಹೆದ್ದಾರಿ ಸೇರಿದಂತೆ ನಗರದ ರಸ್ತೆಗಳಲ್ಲಿ ವಾಹನಗಳ ಸಂಚಾರ ನಿಯಂತ್ರಿಸಲ್ಪಟ್ಟಿದೆ. ಹಾಗಿದ್ದರೂ ಮಾರುಕಟ್ಟೆ ಹಾಗೂ ದಿನಸಿ ಅಂಗಡಿಗಳಲ್ಲಿ ಮಾತ್ರ ಜನ ಸಾಮಾನ್ಯರು ಮುಗಿಬೀಳುವ ಸನ್ನಿವೇಶ ಉಂಟಾಗುತ್ತಿದೆ. ಹೀಗಾಗಿ ಕೊಪ್ಪದ ಅಂಗಡಿ ಮಾಲಕರು 'ಮಾರ್ಕ್' ಮೂಲಕ 'ಸಾಮಾಜಿಕ ಅಂತರ' ಕಾಪಾಡಿ ಗಮನ ಸೆಳೆದಿದ್ದಾರೆ.

ಇದರ ಫೋಟೋಗಳನ್ನು ಕೊಪ್ಪದ ಉದ್ಯಮಿ ಸುನಿಲ್ ಕುಮಾರ್ ತನ್ನ ಫೇಸ್ಬುಕ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X