Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಾಕ್ ಡೌನ್ ವೇಳೆ ಯುವಕನಿಗೆ ಹಲ್ಲೆ:...

ಲಾಕ್ ಡೌನ್ ವೇಳೆ ಯುವಕನಿಗೆ ಹಲ್ಲೆ: ಪೊಲೀಸರ ವಿರುದ್ಧ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ27 March 2020 6:21 PM IST
share
ಲಾಕ್ ಡೌನ್ ವೇಳೆ ಯುವಕನಿಗೆ ಹಲ್ಲೆ: ಪೊಲೀಸರ ವಿರುದ್ಧ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ

ಬೆಂಗಳೂರು, ಮಾ.27: ಕೊರೋನ ಮುಂಜಾಗ್ರತಾ ಕ್ರಮವಾಗಿ ದೇಶಾದ್ಯಂತ ಘೋಷಿಸಲಾಗಿರುವ ಲಾಕ್ ಡೌನ್ ವೇಳೆಯಲ್ಲಿ ಗೋಲಿಬಾರ್ ನಡೆಸಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬೆಂಗಳೂರು ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಆಗ್ರಹಿಸಿದ್ದಾರೆ. 

ಕರ್ತವ್ಯ ನಿರತ ಪೊಲೀಸರೊಂದಿಗೆ ನಾಗರಿಕರು ಸಂಪೂರ್ಣವಾಗಿ ಕೈಜೋಡಿಸಬೇಕಾಗಿದ್ದು, ಸಂಯಮ ಕಳೆದು ಪೊಲೀಸರ ಮೇಲೆ ನಡೆಸುವ ಹಲ್ಲೆ ಕೃತ್ಯವನ್ನೂ ಪಾಪ್ಯುಲರ್ ಫ್ರಂಟ್ ಖಂಡಿಸುತ್ತದೆ. ಕೊರೋನ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿದ್ದು, ಇದು ಆಡಳಿತ ವ್ಯವಸ್ಥೆ ಮತ್ತು ನಾಗರಿಕರ ಸಹಯೋಗದೊಂದಿಗೆ ಮಾತ್ರವೇ ಯಶಸ್ವಿಯಾಗಲು ಸಾಧ್ಯ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ವೇಳೆ ಕೆಲವು ಕಡೆ ಪೊಲೀಸರು ಏಕಾಏಕೀ ಯಾವುದೇ ವಿಚಾರಣೆ ಇಲ್ಲದೆ ಥಳಿಸುತ್ತಿರುವ ಪ್ರಕರಣವು ಬೆಳಕಿಗೆ ಬರುತ್ತಿದೆ. ಬೆಂಗಳೂರಿನ ಸಂಜಯನಗರದಲ್ಲಿ ಯುವಕನ ಮೇಲೆ ಪೊಲೀಸರು ತೀವ್ರಸ್ವರೂಪದ ಹಲ್ಲೆ ನಡೆಸಿದ್ದು, ಮೊಣಕಾಲಿಗೆ ಗುಂಡುಹಾರಿಸಿ ಪೊಲೀಸರು ದ್ವೇಷ ತೀರಿಸಿರುವುದು ಖಂಡನಾರ್ಹ. 

ಇಡೀ ಜಗತ್ತು ಮಾನವೀಯತೆ ಭಾಷೆಯಲ್ಲಿ ವ್ಯವಹರಿಸುತ್ತಿರುವ ಈ ಸನ್ನಿವೇಶದಲ್ಲೂ ಅಮಾನವೀಯವಾಗಿ ವರ್ತಿಸಿರುವ ಪೊಲೀಸರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ನಾಸಿರ್ ಪಾಶ ಒತ್ತಾಯಿಸಿದ್ದಾರೆ. 

ಇದು ಗಲಭೆಗೆ ಸಂಬಂಧಿಸಿದ ಕರ್ಫ್ಯೂ ಆಗಿರದೆ ಸಾಮಾಜಿಕ ಕಳಕಳಿಯ ದಿಗ್ಬಂಧನವಾಗಿದೆ. ಈ ಸಂದರ್ಭದಲ್ಲಿ ಜನರೊಂದಿಗೆ ಹೇಗೆ ವರ್ತಿಸಬೇಕು ಎಂದು ಪೊಲೀಸ್ ಇಲಾಖೆಯ ಕೆಲವು ಹಿರಿಯ ಅಧಿಕಾರಿಗಳು ಎಲ್ಲ ಠಾಣೆಗಳಿಗೂ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ಸರಕಾರ ಅಗತ್ಯ ಸಾಮಗ್ರಿಗಳನ್ನು ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಯಾವುದೇ ಕ್ರಮಕೈಗೊಳ್ಳದಿರುವುದು 21 ದಿನಗಳ ಕಾಲ ಲಾಕ್ ಡೌನ್ ಎಂಬುದು ಜನಸಾಮಾನ್ಯರ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆ. ಈ ಮಧ್ಯೆ ಅಗತ್ಯ ಸಾಮಗ್ರಿ ಖರೀದಿಗಾಗಿ ಜನರು ಬೀದಿಗೆ ಬರುವ ಸಾಧ್ಯತೆಯನ್ನು ಮನಗಂಡು ದಾರಿಹೋಕರೊಂದಿಗೆ ಮಾತನಾಡಿ ಮನವೊಲಿಸಿ ವ್ಯವಹರಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ನಿರ್ದೇಶನಗಳನ್ನು ನೀಡಿದ್ದಾರೆ. ಬೆಂಗಳೂರಿನ ಪೊಲೀಸರು ಈ ಎಲ್ಲ ನಿರ್ದೇಶನಗಳನ್ನು ಉಲ್ಲಂಘಿಸಿ ಯುವಕನ ಮೇಲೆ ಹಲ್ಲೆ ನಡೆಸಿ ಗೋಲಿಬಾರ್ ನಡೆಸಿರುವುದು ಅನಾಗರಿಕ ವರ್ತನೆ ಎಂದು ನಾಸಿರ್ ಪಾಶ ಖಂಡಿಸಿದ್ದಾರೆ. 

ಲಾಕ್ ಡೌನ್ ವೇಳೆ ಗಸ್ತಿನಲ್ಲಿದ್ದ ಪೊಲೀಸ್ ಪೇದೆಯು ಯುವಕನೊಂದಿಗೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಿದ್ದು ತಡವಾಗಿ ಬೆಳಕಿಗೆ ಬಂದಿರುತ್ತದೆ. ಹೊರಗಡೆ ತಿರುಗುತ್ತಿದ್ದ ಯುವಕರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬಹುದಾಗಿದ್ದ ಕ್ಷುಲ್ಲಕ ಘಟನೆಯು ವಿಕೋಪಕ್ಕೆ ತಿರುಗಲು ಪೊಲೀಸ್ ಪೇದೆಯ ಅನಪೇಕ್ಷಿತ ಅತಿರೇಕದ ವರ್ತನೆಯೇ ಕಾರಣ ಎಂಬುದು ವೀಡಿಯೋ ಸಾಕ್ಷಿ ಹೇಳುತ್ತಿದೆ. ಘಟನೆಯು ವಿಕೋಪಕ್ಕೆ ತಿರುಗಿ ಇಬ್ಬರು ಯುವಕರು ಮತ್ತು ಪೊಲೀಸರ ನಡುವೆ ಮಾರಾಮಾರಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮುಖ್ಯ ಆರೋಪಿ ಎಂದು ಯುವಕನನ್ನು ಬಂಧಿಸಿದ್ದರು. ಠಾಣೆಯಲ್ಲಿ ಪೊಲೀಸರು ಯುವಕನನ್ನು ತೀವ್ರವಾಗಿ ಥಳಿಸಿ ಬಳಿಕ ಮೊಣಕಾಲಿಗೆ ಗುಂಡುಹಾರಿಸಿ ದ್ವೇಷ ಸಾಧಿಸಿರುವುದು ಶಿಕ್ಷಾರ್ಹ ಅಪರಾಧವಾಗಿದೆ. ಮಾತ್ರವಲ್ಲದೆ ಮನೆಯವರನ್ನೂ ಠಾಣೆಗೆ ಕರೆಸಿ ಕಿರುಕುಳ ನೀಡಿದ್ದು, ಪ್ರಕರಣದ ಸತ್ಯಾಸತ್ಯತೆಯನ್ನು ಹೊರಗಡೆ ತಿಳಿಸದಂತೆ ಬೆದರಿಕೆಯನ್ನೂ ಒಡ್ಡಿರುವುದು ಪೊಲೀಸರ ಆಘಾತಕಾರಿ ನಡೆ ಎಂದು ನಾಸಿರ್ ಪಾಶ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X