Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ಭೀತಿಯಿಂದ ಬೆಂಗಳೂರು ತೊರೆದ ಜನತೆ:...

ಕೊರೋನ ಭೀತಿಯಿಂದ ಬೆಂಗಳೂರು ತೊರೆದ ಜನತೆ: ರಾಜ್ಯ ರಾಜಧಾನಿ ಖಾಲಿ ಖಾಲಿ

ವಾರ್ತಾಭಾರತಿವಾರ್ತಾಭಾರತಿ27 March 2020 11:41 PM IST
share
ಕೊರೋನ ಭೀತಿಯಿಂದ ಬೆಂಗಳೂರು ತೊರೆದ ಜನತೆ: ರಾಜ್ಯ ರಾಜಧಾನಿ ಖಾಲಿ ಖಾಲಿ

ಬೆಂಗಳೂರು, ಮಾ.27: ಕೊರೋನ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಕಡೆಗಳಿಂದ ರಾಜಧಾನಿಗೆ ಬಂದಿದ್ದವರಲ್ಲಿ ಬಹುತೇಕರು ತಮ್ಮ ತಮ್ಮ ಊರುಗಳಿಗೆ ದೌಡಾಯಿಸಿರುವ ಹಿನ್ನೆಲೆಯಲ್ಲಿ ಶೇ.50 ರಷ್ಟು ನಗರದ ಜನಸಂಖ್ಯೆ ಇಳಿಕೆಯಾಗಿದೆ ಎಂದು ಅಂದಾಜಿಸಲಾಗಿದೆ.

ಜನರು ನಗರವನ್ನು ಬಿಟ್ಟು ತಮ್ಮ ತಮ್ಮ ಊರುಗಳಿಗೆ ವಾಪಸ್ಸಾಗಿದ್ದಾರೆ. ನಿತ್ಯ ಸಂಚಾರ ದಟ್ಟಣೆಯಿಂದ, ಧೂಳು, ವಾಹನ ಸಂಚಾರದ ಹೊಗೆ, ಜನರಿಂದ ಗಿಜಿಗಿಡುತ್ತಿದ್ದ ಮಾಲ್‍ಗಳು, ಸದ್ದುಗದ್ದಲದಿಂದ ಕೂಡಿರುತ್ತಿದ್ದ ರಾಜ್ಯದ ರಾಜಧಾನಿ ಇದೀಗ ಶಾಂತವಾಗಿದೆ. ಇಡೀ ದೇಶವೇ ಲಾಕ್‍ಡೌನ್ ಆಗಿರುವುದರ ಪರಿಣಾಮದಿಂದಾಗಿ ಎಲ್ಲ ಕಡೆಗಳಲ್ಲಿ ಖಾಲಿ ಖಾಲಿಯಾಗಿವೆ. ಎಲ್ಲೆಡೆ ಧೂಳಿನಿಂದಲೇ ಕಂಗೊಳಿಸುತ್ತಿದ್ದ ಕಟ್ಟಡಗಳಿಂದು ಶುಭ್ರವಾಗಿ ಕಾಣುತ್ತಿವೆ.

ಎಲ್ಲ ವರ್ಗದ ಜನ ಖಾಲಿ: ಮೊದಲಿಗೆ ಕೊರೋನ ಸೋಂಕಿತ ವ್ಯಕ್ತಿ ದೃಢವಾಗುತ್ತಿದ್ದಂತೆಯೇ ಜಾಗೃತಗೊಂಡ ಕೆಲವೊಂದು ಐಟಿ-ಬಿಟಿ ಕಂಪೆನಿಗಳು ತಮ್ಮ ಕಾರ್ಮಿಕರಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿದವು.

ಅನಂತರ ಸೋಂಕು ಹೆಚ್ಚಾದಂತೆ ರಾಜ್ಯವನ್ನು ಲಾಕ್‍ಡೌನ್ ಮಾಡಲು ಸರಕಾರ ತೀರ್ಮಾನ ಕೈಗೊಂಡಿತು. ಇದರ ನಡುವೆ ಬಹುತೇಕರು ತಮ್ಮ ತಮ್ಮ ಮನೆಗಳಿಗೆ ತೆರಳಿದ್ದು, ಸರಕಾರಿ, ಅರೆ ಸರಕಾರಿ, ಖಾಸಗಿ, ಗುತ್ತಿಗೆ ಕಾರ್ಮಿಕರು, ವ್ಯಾಪಾರಿಗಳು ಸೇರಿದಂತೆ ಎಲ್ಲ ವರ್ಗದವರೂ ನಗರದಿಂದ ನಿರ್ಗಮಿಸಿದ್ದಾರೆ.

ಕಾಮಗಾರಿ ಸ್ಥಗಿತ, ಆಹಾರಕ್ಕಾಗಿ ಪರದಾಟ: ನಗರದಲ್ಲಿ ಕಟ್ಟಡ ನಿರ್ಮಾಣ, ರಸ್ತೆ ದುರಸ್ಥಿ ಸೇರಿದಂತೆ ಮತ್ತಿತರೆ ಕೆಲಸ ಕಾರ್ಯಗಳಲ್ಲಿ ದುಡಿದು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದವರಿಗೆ ಈಗ ಕೆಲಸಗಳೇ ಇಲ್ಲದಂತಾಗಿದೆ. ಅಲ್ಲದೆ, ಅವರು ಅನ್ನ, ಆಹಾರವಿಲ್ಲದೆ ಪರದಾಡುವಂತಾಗಿದೆ.

ಕೊರೋನ ಭೀತಿಯಿಂದಲೇ ಕೆಲ ಕೂಲಿ ಕಾರ್ಮಿಕರು ನಗರವನ್ನು ಬಿಟ್ಟು ಹೋಗಿದ್ದಾರೆ. ಈಗ ಜನರು ಹೊರಗಡೆಯಿಂದ ಟ್ರಾಕ್ಟರ್‍ಗಳನ್ನು ತರಿಸಿಕೊಂಡು, ಊರುಗಳತ್ತ ಮುಖ ಮಾಡಿದ್ದಾರೆ. ಇನ್ನು ನಗರದಲ್ಲಿಯೇ ಇರುವವರ ಕಥೆ ಚಿಂತಾಜನಕವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X