Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಲಸಿಗ ಕಾರ್ಮಿಕರ ದಾರುಣ ಸ್ಥಿತಿಗೆ ಮೋದಿ...

ವಲಸಿಗ ಕಾರ್ಮಿಕರ ದಾರುಣ ಸ್ಥಿತಿಗೆ ಮೋದಿ ಸರಕಾರ ಹೊಣೆ: ರಾಹುಲ್ ಆರೋಪ

ವಾರ್ತಾಭಾರತಿವಾರ್ತಾಭಾರತಿ28 March 2020 11:29 PM IST
share
ವಲಸಿಗ ಕಾರ್ಮಿಕರ ದಾರುಣ ಸ್ಥಿತಿಗೆ ಮೋದಿ ಸರಕಾರ ಹೊಣೆ: ರಾಹುಲ್ ಆರೋಪ

ಹೊಸದಿಲ್ಲಿ, ಮಾ. 28: ಕೊರೋನ ವೈರಸ್ ರುದ್ರತಾಂಡವದ ಹಿನ್ನೆಲೆಯಲ್ಲಿ ದೇಶಾದ್ಯಂತ ಹೇರಲಾಗಿರುವ ಲಾಕ್‌ಡೌನ್‌ನಿಂದಾಗಿ ದುಡಿಮೆಯಿಲ್ಲದೆ ತಮ್ಮ ಹಳ್ಳಿಗಳಿಗೆ ವಾಪಾಸಾಗುತ್ತಿರುವ ಲಕ್ಷಾಂತರ ಮಂದಿ ಬಡಕಾರ್ಮಿಕರ ದಾರುಣ ಪರಿಸ್ಥಿತಿಗೆ ಕೇಂದ್ರ ಸರಕಾರ ಹೊಣೆಗಾರನೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಪಾದಿಸಿದ್ದಾರೆ.

ಪ್ರಸಕ್ತ ಪರಿಸ್ಥಿತಿ ಭೀಕರವಾದ ದುರಂತವಾಗಿ ಪರಿಣಮಿಸದೆ ಇರಲು ದೃಢವಾದ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಮೋದಿ ಸರಕಾರವನ್ನು ಆಗ್ರಹಿಸಿದ್ದಾರೆ.

 ಉದ್ಯೋಗವಿಲ್ಲದೆ ಪರದಾಡುತ್ತಿರುವ ವಲಸಿಗ ಕಾರ್ಮಿಕರಿಗೆ ಆಹಾರ ಹಾಗೂ ವಸತಿಯನ್ನು ಒದಗಿಸಲು ನೆರವಾಗುವಂತೆ ಅವರು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ‘‘ ಈ ಘೋರ ಪರಿಸ್ಥಿತಿಗೆ ಕೇಂದ್ರ ಸರಕಾರವೇ ಜವಾಬ್ದಾರನಾಗಿದೆ. ಜನರನ್ನು ಇಂತಹ ಪರಿಸ್ಥಿತಿಗೆ ತಂದಿರುವುದು ಅದು ಎಸಗಿರುವ ದೊಡ್ಡ ಅಪರಾಧವಾಗಿದೆ ’’ ಎಂದು ರಾಹುಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 ‘‘ಹಸಿದ,ಬಾಯಾರಿರುವ ನಮ್ಮ ನೂರಾರು ಸಹೋದರರು ಹಾಗೂ ಸಹೋದರಿಯರು ತಮ್ಮ ಕುಟುಂಬಗಳವರ ಜೊತೆ ತಮ್ಮ ಹಳ್ಳಿಗಳೆಡೆಗೆ ನಡೆದುಕೊಂಡು ಹೋಗುತ್ತಿದ್ದಾರೆ” ಎಂದವರು ಹೇಳಿದರು.

 “ನಿಮಗೆ ಸಾಧ್ಯವಿದ್ದಲ್ಲಿ ಪ್ರಯಾಸಕಾರಿ ಪ್ರಯಾಣದ ಸಂದರ್ಭದಲ್ಲಿ ಅವರಿಗೆ ಆಹಾರ, ನೀರು, ಆಶ್ರಯ ಒದಗಿಸುವಂತೆ ನಾನು ಎಲ್ಲರಿಗೂ, ಅದರಲ್ಲಿ ವಿಶೇಷವಾಗಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರಲ್ಲಿ ಮನವಿ ಮಾಡುತ್ತೇನೆ. ಜೈಹಿಂದ್” ಎಂದು ಗಾಂಧಿ ಟ್ವೀಟಿಸಿದ್ದಾರೆ.

‘‘ವಿದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆತರಲು ಸರಕಾರಕ್ಕೆ ವಿಮಾನಗಳನ್ನು ಕಳುಹಿಸಲು ಸಾಧ್ಯವಿರುವುದಾದರೆ, ಅದು ಯಾಕೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸಲು ಸಾರಿಗೆಯನ್ನು ಒದಗಿಸುತ್ತಿಲ್ಲ’’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಹೇಳಿದ್ದಾರೆ.

‘‘ಒಂದು ದೇಶವಾಗಿ ನಾವು ಸಾವಿರಾರು ವಲಸಿಗ ಕಾರ್ಮಿಕರನ್ನು ಅವರ ಪಾಡಿಗೆ ಬಿಟ್ಟುಬಿಡಲು ಹೇಗೆ ಸಾಧ್ಯ?. ಸಾವಿರಾರು ಪುರುಷರು, ಮಹಿಳೆಯರು ಹಾಗೂ ಮಕ್ಕಳು ಕಾಲ್ನಡಿಗೆಯಲ್ಲಿ. ಪೂರ್ವ ಉತ್ತರಪ್ರದೇಶ ಹಾಗೂ ಬಿಹಾರದೆಡೆಗೆ ನಡೆದುಕೊಂಡೇ ಹೋಗುತ್ತಿದ್ದಾರೆ’’ ಎಂದು ಆಕೆ ತಿಳಿಸಿದರು.

‘‘ಯುರೋಪ್‌ನಿಂದ ನಾಗರಿಕರನ್ನು ಕರೆತರಲು ನಾವು ವಿಮಾನಗಳನ್ನು ಕಳುಹಿಸಿದ್ದೇವೆ. ಆದರೆ ನಮ್ಮೊಂದಿಗಿರುವ ಕಡುಬಡವರು ಹಾಗೂ ದುರ್ಬಲರನ್ನು ಸಾಗಿಸಲು ನಾವು ಯಾಕೆ ಸಾರಿಗೆ ವ್ಯವಸ್ಥೆಯನ್ನು ಸಂಘಟಿಸುತ್ತಿಲ್ಲ’’ ಎಂದವರು ಪ್ರಶ್ನಿಸಿದ್ದಾರೆ.

ಮೋದೀಜಿ ಹಾಗೂ ಅಮಿತ್‌ಶಾ ಜೀ ಅವರೇ, ದೇವರಿಗೋಸ್ಕರವಾದರೂ, ಜನರ ಪ್ರಾಣಗಳನ್ನು ರಕ್ಷಿಸಲು ನಿಮ್ಮಲ್ಲಿರುವ ಅಧಿಕಾರವನ್ನು ಬಳಸಿಕೊಳ್ಳಿ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X