Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸದಿಲ್ಲಿಯಿಂದ ಕಾಲ್ನಡಿಗೆಯಲ್ಲೇ ಗುಳೆ...

ಹೊಸದಿಲ್ಲಿಯಿಂದ ಕಾಲ್ನಡಿಗೆಯಲ್ಲೇ ಗುಳೆ ಹೋಗುತ್ತಿರುವ ವಲಸೆ ಕಾರ್ಮಿಕರು

ಹಸಿದ ಹೊಟ್ಟೆಯಲ್ಲಿ ನೂರಾರು ಮಂದಿಯ ಪಯಣ

ವಾರ್ತಾಭಾರತಿವಾರ್ತಾಭಾರತಿ28 March 2020 11:46 PM IST
share
ಹೊಸದಿಲ್ಲಿಯಿಂದ ಕಾಲ್ನಡಿಗೆಯಲ್ಲೇ ಗುಳೆ ಹೋಗುತ್ತಿರುವ ವಲಸೆ ಕಾರ್ಮಿಕರು

ಹೊಸದಿಲ್ಲಿ,ಮಾ.28: ಕೊರೋನವೈರಸ್ ಸೋಂಕು ಹರಡುವುದನ್ನು ತಡೆಯಲು ಕೇಂದ್ರ ಸರಕಾರ ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡಿರುವ ಕಾರ್ಮಿಕರು ಹೊಸದಿಲ್ಲಿ ಸೇರಿದಂತೆ ದೇಶದ ವಿವಿಧ ನಗರಗಳಿಂದ ಹಸಿದ ಹೊಟ್ಟೆಯಲ್ಲೇ ತಮ್ಮ ಊರುಗಳಿಗೆ ವಾಪಾಸಾಗುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ವಲಸಿಗ ಕಾರ್ಮಿಕರ ಸಮಸ್ಯೆಯು ಇನ್ನೊಂದು ಗಂಭೀರ ಬಿಕ್ಕಟ್ಟನ್ನು ಸೃಷ್ಟಿಸುವ ಸಾಧ್ಯತೆಯಿದೆ.

 ಹೊಸದಿಲ್ಲಿಯಿಂದ ಸಾವಿರಾರು ವಲಸಿಗರು ಉತ್ತರಪ್ರದೇಶ, ಬಿಹಾರಗಳಲ್ಲಿರುವ ತಮ್ಮ ಹಳ್ಳಿಗಳಿಗೆ ಕಾಲ್ನಡಿಗೆಯಲ್ಲಿಯೇ ನಡೆದುಕೊಂಡು ಹೋಗುತ್ತಿದ್ದಾರೆ. ಇನ್ನು ಕೆಲವರು ಉತ್ತರಪ್ರದೇಶದ ಗಾಝಿಯಾಬಾದ್‌ನಿಂದ ಸರಕಾರಿ ಹಾಗೂ ಖಾಸಗಿ ಬಸ್‌ಗಳನ್ನೇರಿ, ತಮ್ಮ ಹಳ್ಳಿಗಳನ್ನು ಸೇರುತ್ತಿದ್ದಾರೆ.

 ಲಾಕ್‌ಡೌನ್ ವೇಳೆ ಖಾಸಗಿ ಬಸ್‌ಗಳ ಒಡಾಟವನ್ನು ನಿಷೇಧಿಸಲಾಗಿದ್ದರೂ, ಅವು ಪ್ರಯಾಣಿಕರನ್ನು ಕೊಂಡೊಯ್ಯಲು ಅಧಿಕ ಹಣವನ್ನು ವಸೂಲು ಮಾಡುತ್ತಿವೆಯೆಂದು ಈ ಬಡಕಾರ್ಮಿಕರು ತಮ್ಮ ಗೋಳು ತೋಡಿಕೊಳ್ಳುತ್ತಿದ್ದಾರೆ.

ಖಾಸಗಿ ಬಸ್‌ಗಳು ಈ ಕಾರ್ಮಿಕರನ್ನು ಉತ್ತರಪ್ರದೇಶದಲ್ಲಿರುವ ಊರಿಗೆ ಕೊಂಡೊಯ್ಯಲು 1 ಸಾವಿರ ರೂ.ಗೂ ಹೆಚ್ಚು ಹಣವನ್ನು ವಸೂಲಿ ಮಾಡುತ್ತಿವೆಯೆಂಬ ಆರೋಪಗಳು ಕೇಳಿಬರುತ್ತಿವೆ.

 ನಗರಗಳಿಂದ ಗುಳೇ ಹೋಗುತ್ತಿರುವ ಭಾರೀ ಸಂಖ್ಯೆಯ ವಲಸಿಗರಿಗೆ ಊರು ಸೇರುವಂತೆ ಮಾಡಲು ಉ.ಪ್ರ.ಸರಕಾರವು ಲಾಕ್‌ಡೌನ್ ನಡುವೆಯೂ ಸರಕಾರಿ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಿದೆ. ಆದರೆ ಅವು ಅಗತ್ಯಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಲಭ್ಯವಿರುವುದು ಸಮಸ್ಯೆಯನ್ನು ಬಿಗಡಾಯಿಸಿದೆ.

 ಹೇಗಾದರೂ ಮಾಡಿ ತಮ್ಮ ಊರನ್ನು ಸೇರಲು ಪರದಾಡುತ್ತಿರುವ ಈ ಕಾರ್ಮಿಕರು, ಯಾವುದೇ ಸರಕಾರವು ಈವರೆಗೆ ತಮ್ಮ ನೆರವಿಗೆ ಬಂದಿಲ್ಲವೆಂದು ರೋದಿಸುತ್ತಾರೆ.

ಈ 21 ದಿನಗಳ ಲಾಕ್‌ಡೌನ್ ವಲಸಿಗ ಕೃಷಿ ಕಾರ್ಮಿಕರು, ಕೈಗಾರಿಕಾ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದು, ದಿಕ್ಕು ತೋಚದೆ ಅವರು ಅರೆಹೊಟ್ಟೆಯಲ್ಲಿ ಊರು ಸೇರುತ್ತಿದ್ದಾರೆ.

ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಸಚಿವಾಲಯವು ವಲಸಿಗ ಕಾರ್ಮಿಕರನ್ನು ತಡೆಯುವಂತೆ ರಾಜ್ಯ ಸರಕಾರಕ್ಕೆ ಸೂಚನಾಪತ್ರವನ್ನು ಹೊರಡಿಸಿದೆ.

 ಕೊರೋನಾ ವೈರಸ್ ಸೋಂಕು ಹಳ್ಳಿಗಳಿಗೂ ಹರಡುವುದನ್ನು ತಪ್ಪಿಸುವುದಕ್ಕಾಗಿ ವಲಸಿಗ ಕೃಷಿ ಕಾರ್ಮಿಕರು, ಕೈಗಾರಿಕಾ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರ ಸಾಮೂಹಿಕ ಪಲಾಯನವನ್ನು ತಡೆಯಬೇಕೆಂದು ಕೇಂದ್ರ ಗೃಹ ಸಚಿವಾಲಯವು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ನೀಡಿದೆ ಎಂದು ಅಧಿಕೃತ ವಕ್ತಾರರೊಬ್ಬರು ತಿಳಿಸಿದ್ದಾರೆ.

 ಪಡಿತರ ವ್ಯವಸ್ಥೆಯ ಮೂಲಕ ಅಗತ್ಯ ಸಾಮಗ್ರಿಗಳು ಹಾಗೂ ಆಹಾರಧಾನ್ಯಗಳ ವಿತರಣೆ ಸೇರಿದಂತೆ ಸರಕಾರವು ಕೈಗೊಂಡಿರುವ ಕ್ರಮಗಳ ಬಗ್ಗೆ ದುರ್ಬಲ ವರ್ಗಗಳಲ್ಲಿ ಅರಿವು ಮೂಡಿಸುವಂತೆ ಸಚಿವಾಲಯವು ರಾಜ್ಯಗಳಿಗೆ ಸಲಹೆ ನೀಡಿದೆ.

 ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಲಾಕ್‌ಡೌನ್‌ನಿಂದಾಗಿ ಅತಂತ್ರರಾಗಿರುವ ವಲಸಿಗ ಕಾರ್ಮಿಕರಿಗೆ, ಕೃಷಿಕರಿಗೆ ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ನೆರವಾಗಲು 1.70 ಲಕ್ಷ ರೂ.ಗಳ ಪ್ಯಾಕೇಜ್ ಘೋಷಿಸಿದ್ದರು. ಇದರಿಂದಾಗಿ ಲಾಕ್‌ಡೌನ್ ಮೂರು ತಿಂಗಳವರೆಗೂ ವಿಸ್ತರಿಸುವ ಸಾಧ್ಯತೆಯಿದ್ದು, ತಾವು ಇನ್ನಷ್ಟು ಸಂಕಷ್ಟಕ್ಕೊಳಗಾಗಬೇಕಾದೀತೆಂದು ವಲಸಿಗ ಕಾರ್ಮಿಕರು ಭೀತಿಗೊಳಗಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X