Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ.ರೈಪಿ.ಎ.ರೈ29 March 2020 11:14 PM IST
share
ಓ ಮೆಣಸೇ...

ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗಾಗಿ ನಾನು ಇದೇ ಮೊದಲ ಬಾರಿಗೆ ದಿನ ಪೂರ್ತಿ ಮನೆಯಲ್ಲೇ ಇದ್ದು ಮಕ್ಕಳ ಜೊತೆ ಸಮಯ ಕಳೆದೆ

- ನಳಿನ್ ಕುಮಾರ್ ಕಟೀಲು , ಸಂಸದ 

ದೇಶದ ಜನರು ಸರಕಾರದ ನೆರವಿಗಾಗಿ ಕೈ ಚಾಚುತ್ತಿರುವಾಗ, ಜನಪ್ರತಿನಿಧಿಗಳೆಲ್ಲ ಮಕ್ಕಳ ಜೊತೆಗೆ ಸಮಯ ಕಳೆಯುತ್ತಿರುವುದೇ ಇಂದಿನ ದುರಂತಗಳಿಗೆ ಮುಖ್ಯ ಕಾರಣ.


ಕೊರೋನ ವೈರಸ್ ಸೋಂಕಿನ ವಿರುದ್ಧ ಹೋರಾಡುವ ದೇಶದ ಪ್ರತಿಯೊಬ್ಬ ಪ್ರಜೆಯೂ ಸೈನಿಕ ಇದ್ದಂತೆ - ನರೇಂದ್ರ ಮೋದಿ, ಪ್ರಧಾನಿ

ಸೈನಿಕರಿಗೆ ಅತ್ಯಾಧುನಿಕ ಆಯುಧಗಳನ್ನು ನೀಡುವುದು ನಿಮ್ಮ ಕರ್ತವ್ಯವಲ್ಲವೆ?


ವಿವಿಗಳಲ್ಲಿ ಹಾಲಿ ಜನರ ತೆರಿಗೆ ಹಣ ವ್ಯರ್ಥವಾಗುತ್ತಿದೆ ಎಂಬ ಭಾವನೆ ಹೋಗಲಾಡಿಸಬೇಕಾಗಿದೆ - ಡಾ.ಸಿ.ಅಶ್ವತ್ಥ ನಾರಾಯಣ, ಉಪಮುಖ್ಯಮಂತ್ರಿ ಅನಗತ್ಯ ಉಪಮುಖ್ಯಮಂತ್ರಿಗಳ ಕಾರಣದಿಂದಲೂ ವ್ಯರ್ಥವಾಗುತ್ತಿದೆ ಎಂಬ ಭಾವನೆ ಜನರ ಮನದಲ್ಲಿದೆ.


ಯಾವುದೇ ಕಾರಣಕ್ಕೂ ನಗರವಾಸಿಗಳು ಕೊರೋನ ಮುಕ್ತವಾಗಿರುವ ಹಳ್ಳಿಗಳತ್ತ ಹೋಗಬಾರದು- ಯಡಿಯೂರಪ್ಪ, ಮುಖ್ಯಮಂತ್ರಿ

ನಾವು ಹಳ್ಳಿಗಳಿಗೆ ಹೋಗಿ ಅದನ್ನು ಕೊರೋನ ಯುಕ್ತ ಹಳ್ಳಿಗಳಾಗಿ ಪರಿವರ್ತಿಸುತ್ತೇವೆ ಎಂದು ನಗರದ ಜನರು ಭರವಸೆ ನೀಡುತ್ತಿದ್ದಾರೆ.


ಕೊರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ನಾವೆಲ್ಲ ಮನುಷ್ಯರಾಗಿ ಚಿಂತಿಸುವ ಸಮಯ ಬಂದಿದೆ - ಶೋಯೆಬ್ ಅಖ್ತರ್, ಪಾಕ್ ಮಾಜಿ ಕ್ರಿಕೆಟಿಗ ಕೊರೋನ ವೈರಸ್ ಇಲ್ಲವಾದ ಬಳಿಕ ಮತ್ತೆ ಭಾರತ-ಪಾಕಿಸ್ತಾನಿಗಳಾಗಿ ಚಿಂತಿಸಬಹುದೆ?


ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ದಲ್ಲಾಳಿ ಹಾವಳಿ ನಿಯಂತ್ರಣಕ್ಕೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು - ಆರ್. ಅಶೋಕ್, ಸಚಿವ 

ಹಾವಳಿ ನಿಯಂತ್ರಿಸುವುದಕ್ಕಾಗಿಯೇ ದಲ್ಲಾಳಿಗಳನ್ನು ನೇಮಕ ಮಾಡುವ ಉದ್ದೇಶವಿರಬೇಕು.


ಪ್ರಧಾನಿ ಮೋದಿ ಗಂಭೀರ ಸಮಸ್ಯೆಯನ್ನು ಹಬ್ಬದ ವಾತಾವರಣವಾಗಿ ಪರಿವರ್ತಿಸುತ್ತಿದ್ದಾರೆ -ಸಂಜಯ್ ರಾವತ್,ಶಿವಸೇನಾ ಮುಖಂಡ ಗಂಭೀರ ಸಮಸ್ಯೆಗಳೆಲ್ಲ ಅವರ ಪಾಲಿಗೆ ಹಬ್ಬಗಳಂತೆ.


ಲಾಕ್‌ಡೌನ್ ಅನ್ನು ಜನರು ಗಂಭೀರವಾಗಿ ಪರಿಗಣಿಸಿಲ್ಲ - ನರೇಂದ್ರ ಮೋದಿ, ಪ್ರಧಾನಿ

ಕೊರೋನವನ್ನು ತಾವು ಗಂಭೀರವಾಗಿ ಪರಿಗಣಿಸಿದ್ದೀರಾ?


ನಮಗೆ ಸಾಮರ್ಥ್ಯವಿಲ್ಲದಿದ್ದಾಗ ಸಾಮರ್ಥ್ಯವುಳ್ಳವರ ಸಹಾಯ ತೆಗೆದುಕೊಳ್ಳಬೇಕು - ಶ್ರೀ ರವಿಶಂಕರ್ ಗುರೂಜಿ, ಆರ್ಟ್‌ಆಫ್ ಲಿವಿಂಗ್ ಸಂಸ್ಥಾಪಕ ತಾವು ಆಗಾಗ ರಾಜಕಾರಣಿಗಳ ಸಹಾಯ ಪಡೆದುಕೊಳ್ಳುವುದು ಇದೇ ಕಾರಣಕ್ಕಿರಬೇಕು.


ಆರು ವರ್ಷಗಳಿಂದ ಪ್ರಧಾನಿ ಮೋದಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ಧಾರೆ- ಯಡಿಯೂರಪ್ಪ, ಮುಖ್ಯಮಂತ್ರಿ ಕಪ್ಪು ಕಾಗದದಲ್ಲಿ ಕಪ್ಪು ಚುಕ್ಕೆಯನ್ನು ಗುರುತಿಸುವುದು ಹೇಗೆ?


ಒಳ್ಳೆಯ ಆಯ್ಕೆಗಳು ಸಿಗದೇ ಇದ್ದಾಗ ಸಿಕ್ಕ ಆಯ್ಕೆಗಳನ್ನೇ ಒಳ್ಳೆಯದು ಮಾಡಿಕೊಳ್ಳಲು ನಾನು ಪ್ರಯತ್ನಿಸುತ್ತೇನೆ - ಹೃತಿಕ್ ರೋಷನ್ , ನಟ

ಪತ್ನಿಯ ಆಯ್ಕೆ ವಿಷಯದಲ್ಲೂ ಇದು ಅನ್ವಯವಾಗಲಿ.


ಕಷ್ಟದಲ್ಲಿರುವ ಜನರಿಗೆ ಸ್ಪಂದಿಸಬೇಕು. ಬಡವರನ್ನು ಪ್ರೀತಿಸಬೇಕು
- ನರೇಂದ್ರ ಮೋದಿ, ಪ್ರಧಾನಿ
ಮತ್ತೇಕೆ ತಡ, ಕಷ್ಟದಲ್ಲಿರುವ ವಲಸೆ ಕಾರ್ಮಿಕರಿಗೆ ಸ್ಪಂದಿಸಬಾರದೆ?


ವಲಸೆ ಕಾರ್ಮಿಕರ ನೆರವಿಗೆ ಕೇಂದ್ರ ಬದ್ಧ - ಅಮಿತ್ ಶಾ, ಗೃಹ ಸಚಿವ
ವಲಸೆ ಕಾರ್ಮಿಕರ ವಿರುದ್ಧ ಲಾಠಿ ಬೀಸುತ್ತಿರುವ ಪೊಲೀಸರು ನಿಮ್ಮ ಬದ್ಧತೆಯನ್ನು ಎತ್ತಿ ಹಿಡಿದಿದ್ದಾರೆ.

share
ಪಿ.ಎ.ರೈ
ಪಿ.ಎ.ರೈ
Next Story
X