Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೊಲೀಸ್ ಸಿಬ್ಬಂದಿಗೆ ಕಟ್ಟುನಿಟ್ಟಿನ...

ಪೊಲೀಸ್ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ

ವಾರ್ತಾಭಾರತಿವಾರ್ತಾಭಾರತಿ30 March 2020 2:21 PM IST
share
ಪೊಲೀಸ್ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ

ಬೆಂಗಳೂರು, ಮಾ.30: ನಾಗರಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ, ನಿನ್ನೆ ಹಿಡಿದಿರುವ ವಾಹನಗಳನ್ನು ಬಿಟ್ಟು ಕಳುಹಿಸಿ, ನಾಳೆಯಿಂದ ಜಪ್ತಿ ಮಾಡುವ ವಾಹನಗಳನ್ನು ಲಾಕ್ ಡೌನ್ ಮುಗಿಯುವವರೆಗೂ ಬಿಡಬೇಡಿ ಎನ್ನುವುದು ಸೇರಿದಂತೆ ಕೊರೋನ ಸುರಕ್ಷೆಗಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ನಗರ ಪೊಲೀಸರಿಗೆ 15 ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.

ಇಂದು ಬೆಳಗ್ಗೆ ವೈರ್ ಲೆಸ್ ನಲ್ಲಿ ಸಂದೇಶ ನೀಡಿರುವ ಪೊಲೀಸ್ ಆಯುಕ್ತರು, ಪ್ರತಿಯೊಂದು ಸೂಚನೆಯನ್ನು ಸ್ಪಷ್ಟವಾಗಿ ವಿವರಿಸಿದ್ದಾರೆ. ಜೊತೆ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ್ದು, ಮುಂದೆಯೂ ಇದನ್ನೇ ಮುಂದುವರಿಸಬೇಕು ಹಾಗೂ ತಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಆಯುಕ್ತರು ಸೂಚನೆ ನೀಡಿದ್ದಾರೆ.

ಪೊಲೀಸ್ ಆಯುಕ್ತರ ಸೂಚನೆಗಳು

1. ಹಾಲು, ಪೇಪರ್, ತರಕಾರಿ ಸರಬರಾಜು ಮತ್ತು ಎಟಿಎಂಗೆ ಹಣ ತುಂಬುವ ವಾಹನಗಳಿಗೆ ಅಡ್ಡಿ ಇಲ್ಲದಂತೆ ವ್ಯವಸ್ಥೆ ಮಾಡಬೇಕು.

2. ತರಕಾರಿ, ದಿನ, ಹಣ್ಣು ಮತ್ತು ದಿನನಿತ್ಯದ ಅಂಗಡಿಗಳಲ್ಲಿ ಸಾಮಾಜಿಕ ಅಂತರವ ನ್ನು ನಿರ್ವಹಣೆ ಮಾಡಲು ಸಿಮೇಸುಣ್ಣದಲ್ಲಿ ವೃತ್ತ ಬರೆಯದೆ, ಪೈಂಟಿಂಗ್ ಮಾಡಿಸಬೇಕು ಹಾಗೂ ಅದು ಪಾಲನೆಯಾಗುವಂತೆ ನೋಡಿಕೊಳ್ಳಬೇಕು.

3. ಎಲ್ಲ ಠಾಣೆಗಳಲ್ಲಿ ಸಾರ್ವಜನಿಕ ಸಂಪರ್ಕ ಶಾಖೆಗಳನ್ನು ಸ್ಥಾಪಿಸಿ ಹಿರಿಯ ಎಎಸ್ ಐ ಹಂತದ ಅಧಿಕಾರಿಗಳನ್ನು ನಿಯೋಜಿಸಬೇಕು, ಜನ ಸಮಸ್ಯೆ ಹೇಳಿಕೊಂಡು ಬಂದಾಗ ಅವರೊಂದಿಗೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು, ಕೂರಿಸಿ ಸಮಸ್ಯೆ ಕೇಳಬೇಕು. ಕೆಳಹಂತದಲ್ಲಿ ಸಮಸ್ಯೆ ಬಗೆ ಹರಿಯದಿದ್ದರೆ ಎಸಿಪಿ, ಡಿಸಿಪಿಗಳ ಗಮನಕ್ಕೆ ತಂದು ಪರಿಹಾರ ದೊರಕಿಸಬೇಕು. ಸಮಸ್ಯೆ ತಂದವರೊಂದಿಗೆ ಒರಟಾಗಿ ನಡೆದುಕೊಳ್ಳುವುದು, ಅವಮಾನ ಮಾಡುವುದು, ಬೈಯುವುದನ್ನು ಮಾಡಬಾರದು.

4. ಎಲ್ಲ ಠಾಣೆಗಳಲ್ಲಿ ಸಂಚಾರಿ ಮತ್ತು ಕಾನೂನು ಸುವ್ಯವಸ್ಥೆಯ ಪೊಲೀಸರು ರಸ್ತೆಗಳನ್ನು ಮುಚ್ಚಬೇಕು. ಜನ ಸಂಚರಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

5. ಇಂದು(ಸೋಮವಾರ) ಬೆಂಗಳೂರಿನಾದ್ಯಂದ 2008 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಅವರಿಗೆಲ್ಲ ಎಚ್ಚರಿಕೆ ಕೊಟ್ಟು ಕಳುಹಿಸಿ. ನಾಳೆಯಿಂದ ಸಂಚರಿಸುವ ವಾಹನಗಳನ್ನು ಲಾಕ್ ಡೌನ್ ಅವಧಿ ಮುಗಿಯುವವರೆಗೂ ಬಿಡಬೇಡಿ. ಎನ್ ಡಿ ಎಂ ಎ ಕಾಯ್ದೆಯಡಿ ಪ್ರಕರಣ ದಾಖಲಿಸುತ್ತೇವೆ ಎಂದು ತಿಳುವಳಿಕೆ ನೀಡಿ.

6. ತುರ್ತು ಸೇವೆಗಾಗಿ ಪೊಲೀಸ್ ಇಲಾಖೆಯಿಂದ ನೀಡಲಾಗಿರುವ ಪಾಸ್ ಗಳು ದುರುಪಯೋಗವಾಗುತ್ತಿವೆ. ಈ ಬಗ್ಗೆ ಹಿರಿಯ ಅಧಿಕಾರಿಗಳಾದ ಡಿಸಿಪಿಗಳು, ಎಸಿಪಿಗಳು ಗಮನಹರಿಸಬೇಕು. ದಾಕ್ಷಿಣ್ಯಕ್ಕಾಗಿ ಸಿಕ್ಕಾಪಟ್ಟೆ ಪಾಸ್ ಗಳನ್ನು ವಿತರಿಸಬಾರದು. ಊಟ ಸರಬರಾಜು, ದಿನಸಿ ಅಂಗಡಿಗಳಿಗೆ, ಗ್ರಾಮೀಣ ಭಾಗದಿಂದ ತರಕಾರಿ ತಂದು ಮಾರಾಟ ಮಾಡುವವರಿಗೆ ಮಾತ್ರ ಪಾಸ್ ಗಳನ್ನು ನೀಡಬೇಕು. ವಿತರಿಸಲಾಗಿರುವ ಪಾಸ್ ಗಳನ್ನು ಕಾಲ ಕಾಲಕ್ಕೆ ಪರಿಶೀಲನೆ ನಡೆಸಬೇಕು.

7. ಸಂಚಾರ ಮತ್ತು ಕಾನೂನು ಸುವ್ಯವಸ್ಥೆಯ ಪೊಲೀಸರು ಜೊತೆಯಲ್ಲಿ ಕೆಲಸ ಮಾಡಬೇಕು, ಸಾಧ್ಯವಾಗುವ ಕಡೆ ವಿಡಿಯೋ ರೆರ್ಕಾಡ್ ಮಾಡಬೇಕು.

8. ನೋ ಲಾಠಿ ಬಂದೋಬಸ್ತ್ ಗೆ ಉತ್ತಮ ಪ್ರತಿಕ್ರಿಯೆ ಬಂದಿದೆ. ಸದ್ಯಕ್ಕೆ ಅದನ್ನೇ ಮುಂದುವರಿಸಿ, ಮುಂದೆ ನೋ ಲಾಠಿ ಬಂದೋಬಸ್ತನ್ನು ಪುನರ್ ಪರಿಶೀಲನೆ ಮಾಡುತ್ತೇನೆ. ಅಗತ್ಯ ಇದ್ದರೆ ಸೂಕ್ತ ನಿರ್ದೇಶನ ನೀಡುತ್ತೇನೆ.

9. ವಾಹನ ಜಪ್ತಿ ಮಾಡುವಾಗ ಅದನ್ನು ವಿಡಿಯೋ ದಾಖಲು ಮಾಡಬೇಕು

10. ಪಿಜಿಗಳಲ್ಲಿ (ಪೇಯಿಂಗ್ ಗೆಸ್ಟ್ ಹಾಸ್ಟೆಲ್) ಇರುವವರಿಗೆ ಹೆಚ್ಚು ದುಡ್ಡು ವಸೂಲಿ ಮಾಡಬಾರದು, ಅಲ್ಲೆ ಊಟದ ವ್ಯವಸ್ಥೆ ಮಾಡಬೇಕು. ಊಟ ಕೊಟ್ಟು ಹೊರಗೆ ಕಳುಹಿಸುವುದು, ಪಿಜಿ ಬಾಗಿಲು ಹಾಕುತ್ತೇನೆ ಎಂದು ಬೆದರಿಸುವುದನ್ನು ಮಾಡಬಾರದು. ಕೆಲವು ಪಿಜಿಗಳಲ್ಲಿ ತೊಂದರೆ ಕೊಡುತ್ತಿರುವುದು ಕಂಡು ಬಂದಿದೆ, ಸ್ಥಳೀಯ ಪೊಲೀಸರು ಮತ್ತು ಬಿಬಿಎಂಪಿ ಅಧಿಕಾರಿಳು ಜೊತೆಯಾಗಿ ಹೋಗಿ ಎಚ್ಚರಿಕೆ ನೀಡಬೇಕು. ತಿಂಗಳ ಕೊನೆ ಬರುತ್ತಿದೆ. ಸರ್ಕಾರ ಸೂಚನೆ ನೀಡಿದೆ. ಹಾಗಾಗಿ ಮನೆ ಮಾಲಕರು ಬಾಡಿಗೆದಾರರಿಗೆ ತೊಂದರೆ ಕೊಡುವುದನ್ನು ಮಾಡದಂತೆ ಎಚ್ಚರಿಕೆ ನೀಡಬೇಕು.

11. ಈಗಾಗಲೇ ಸಂಚಾರಿ ಪೊಲೀಸರು ಮೂರು ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಸಿಬ್ಬಂದಿಗಳಿಗೂ ಮೂರು ಶಿಫ್ಟ್ ನಲ್ಲಿ ಕೆಲಸ ಮಾಡುವಂತೆ ವ್ಯವಸ್ಥೆ ಮಾಡಬೇಕು. ಕೆಲಸದ ವೇಳೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಈಗ ಹನ್ನೆರೆಡು ಗಂಟೆ ಕೆಲಸ ಮಾಡುತ್ತಿದ್ದಾರೆ ಅವರಿಗೆ ವಿಶ್ರಾಂತಿ ಸಿಗುವಂತೆ ಕ್ರಮ ಕೈಗೊಳ್ಳಬೇಕು.

12. ಡಯಾಲಿಸ್, ಕಿಮೋಥೆರಪಿ, ಹೃದಯಾಘಾತ ಸೇರಿದಂತೆ ಇತರ ತುರ್ತು ಆರೋಗ್ಯ ಸಂದರ್ಭದಲ್ಲಿ ಹೊಯ್ಸಳ ವಾಹನಗಳು ಖುದ್ದಾಗಿ ಹೋಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಬೇಕು. ದೂರ ಇದ್ದರೆ, ಬದಲಿ ವಾಹನದ ವ್ಯವಸ್ಥೆ ಮಾಡಬೇಕು. ಆಸ್ಪತ್ರೆಗೆ ಬಿಟ್ಟು ಬರಬೇಕು. ಅಲ್ಲೇ ಕಾಯುತ್ತಾ ನಿಲ್ಲಬಾರದು.

13. ಮುಂಜಾನೆ ಚಡ್ಡಿ ಹಾಕಿಕೊಂಡು, ಶೂ ಹಾಕಿಕೊಂಡು ವಾಕಿಂಗ್ ಮಾಡುವವರಿಗೆ ಒಳ್ಳೆಯ ಮಾತಿನಲ್ಲಿ ಎಚ್ಚರಿಕೆ ಕೊಟ್ಟು ಕಳುಹಿಸಬೇಕು. ಮನೆ ಬಿಟ್ಟು ಯಾರು ಹೊರಗೆ ಬರದಂತೆ  ಸೂಚಿಸಬೇಕು.

14. ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಒಡಿಶಾ, ಪಶ್ಚಿಮ ಬಂಗಾಳ, ಈಶಾನ್ಯ ರಾಜ್ಯಗಳ ಜನ ಹಾಗೂ ಉತ್ತರ ಭಾಗದ ಜನ ಬಂದು ಸಮಸ್ಯೆ ಹೇಳಿಕೊಂಡರೆ ಸಮಾಧಾನದಿಂದ ಕೇಳಿ ಬಗೆಹರಿಸಬೇಕು. ಠಾಣೆ ಮಟ್ಟದಲ್ಲಿ ಸಾಧ್ಯವಾಗದಿದ್ದರೆ ಡಿಸಿಪಿಗಳ ಗಮನಕ್ಕೆ ತರಬೇಕು, ಅಲ್ಲೂ ಸಾಧ್ಯವಾಗದಿದ್ದರೆ ಪೊಲೀಸ್ ಆಯುಕ್ತರ ಗಮನಕ್ಕೆ ತರಬೇಕು.

15. ಸುಮಾರು ಜನ ದಾನ ಮಾಡಲು ಬರುತ್ತಾರೆ. ಅದನ್ನು ಗೌರವಯುತವಾಗಿ ಸ್ವೀಕರಿಸಿ ಕಳುಹಿಸಬೇಕು. ಅನಗತ್ಯವಾಗಿ ಫೋಟೋ ಸೆಷನ್ಸ್ ನಡೆಸಿ ಪ್ರಚಾರದ ಸರಕನ್ನಾಗಿ ಬಳಸಿಕೊಳ್ಳಲು ಅವಕಾಶ ಮಾಡಿಕೊಡಬಾರದು, ಗಾಂಭೀರ್ಯತೆ ಕಾಪಾಡಬೇಕು.

16. ಬಿಬಿಎಂಪಿ ಅಧಿಕಾರಿಗಳ ಸಂಪರ್ಕ ಮಾಡಿ ಸಿಎಆರ್, ಕೆಎಸ್‍ಆರ್ ಪಿ ಕ್ವಾಟ್ರಸ್‍ಗಳನ್ನು ಸ್ವಚ್ಚಗೊಳಿಸುವ ಕೆಲಸವನ್ನು ಮಾಡಿಸಬೇಕು.

ಸಿಬ್ಬಂದಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಇದೇ ರೀತಿ ತಾಳ್ಮೆಯಿಂದ ಕೆಲಸ ಮಾಡುವುದನ್ನು ಮುಂದುವರಿಸಬೇಕು. ಸಿಬ್ಬಂದಿಗೆ ದಾನಿಗಳಿಂದ ಸೋಂಕು ತಡೆಯುವ ಸಲಕರಣೆಗಳನ್ನು ಒದಗಿಸಬೇಕು ಎಂದು ಸೂಚನೆ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X