Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರಿನಲ್ಲಿ ಒಟ್ಟು 12 ಮಂದಿಗೆ ಕೊರೋನ...

ಮೈಸೂರಿನಲ್ಲಿ ಒಟ್ಟು 12 ಮಂದಿಗೆ ಕೊರೋನ ಸೋಂಕು ದೃಢ

ವಾರ್ತಾಭಾರತಿವಾರ್ತಾಭಾರತಿ30 March 2020 6:50 PM IST
share
ಮೈಸೂರಿನಲ್ಲಿ ಒಟ್ಟು 12 ಮಂದಿಗೆ ಕೊರೋನ ಸೋಂಕು ದೃಢ

ಮೈಸೂರು,ಮಾ.30: ಮೈಸೂರು ಜಿಲ್ಲೆಯಲ್ಲಿ ಒಟ್ಟು 12 ಜನರಿಗೆ ಕೊರೋನ ಸೋಂಕು ದೃಡ ಪಟ್ಟಿದೆ ಎಂದು  ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.

ನಗರದ ಜಿ.ಪಂ ಕಚೇರಿಯಲ್ಲಿ ಸೋಮವಾರ ವೀಡಿಯೋ ಕಾನ್ಫರೆನ್ಸ್ ಮೂಲಕ  ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಾಸಕರುಗಳು ಮತ್ತು ಅಧಿಕಾರಿಗಳೊಂದಿಗೆ ಕೊರೋನ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದು ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ 8 ಜನರಿಗೆ ಕೋರೋನ ಸೋಂಕು ತಗುಲಿತ್ತು, ಇದೀಗ ಮತ್ತೆ ನಾಲ್ಕು ಮಂದಿಯ ರಕ್ತ ಪರೀಕ್ಷೆ ಪಾಸಿಟಿವ್ ಬಂದಿರುವುದರಿಂದ ಒಟ್ಟು 12 ಜನರು ಕೊರೋನ ಸೋಂಕಿಗೆ ಒಳಪಟ್ಟಿದ್ದು, ಇಬ್ಬರು ವಿದೇಶದಿಂದ ಬಂದವರು ಬಿಟ್ಟರೆ ಉಳಿದ ಹತ್ತು ಮಂದಿ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಂಪನಿಯವರು ಎಂದು ಹೇಳಿದರು.

12 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರೆಲ್ಲರೂ ಆರೋಗ್ಯವಾಗಿದ್ದಾರೆ. ಕೆ.ಆರ್.ಎಸ್ ರಸ್ತೆಯಲ್ಲಿರುವ ನೂತನ ಜಿಲ್ಲಾಸ್ಪತ್ರೆ ಕೋವಿಡ್-29 ಆಸ್ಪತ್ರೆಗೆ ಅವರೆಲ್ಲರನ್ನು ಸ್ಥಳಾಂತರ ಮಾಡಲಾಗುವುದು‌. ಈಗ 6 ಮಂದಿಯನ್ನು ಶಿಫ್ಟ್ ಮಾಡಲಾಗಿದ್ದು, ಸಂಜೆ ವೇಳೆಗೆ ಇನ್ನು 6 ಮಂದಿಯನ್ನು ಶಿಫ್ಟ್ ಮಾಡಲಾಗುವುದು ಎಂದು ಹೇಳಿದರು.

ಮೈಸೂರಿನಲ್ಲಿ ಕೋವಿಡ್- 19 ಅನ್ನು ತೊಲಗಿಸಲು ಜಿಲ್ಲಾಡಳಿತ ಎಲ್ಲರ ಸಹಕಾರದೊಂದಿಗೆ ಬಹಳ ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡುಸಿದರು.

ಹೋಂ ಕ್ವಾರಂಟೈನ್ ಗಳು ಹೊರ ಬಂದರೆ ಕಠಿಣ ಕ್ರಮ: ಹೋಂ ಕ್ವಾರಂಟೈನ್ ಗಳು ಮನೆಯಲ್ಲಿ ಇರದೆ ಹೊರಗೆ ಬಂದು ಓಡಾಡುತಿದ್ದಾರೆ ಎಂಬ ಮಾಹಿತಿ ಇದೆ. ಮಾನವೀಯ ದೃಷ್ಟಿಯಿಂದ ಇಷ್ಟು ದಿನ ಸುಮ್ಮನಿದ್ದೆವು. ಇಂದಿನಿಂದ ಯಾರೇ ಹೋಂ ಕ್ವಾರಂಟೈನ್ ಗಳು ಹೊರ ಓಡಾಡುವುದು ಕಂಡು ಬಂದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವ ವಿ.ಸೋಮಣ್ಣ ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 2537 ಹೋಂ ಕ್ವಾರಂಟೈನ್ ಗಳಿದ್ದು ಅದರಲ್ಲಿ 821 ಮಂದಿ 14 ದಿನ ಮುಗಿಸಿ ಅವರೆಲ್ಲರ ರಕ್ತದ ಮಾದರಿ ನೆಗೆಟಿವ್ ವಂದಿರುವುದು ಸಂತೋಷ ತಂದಿದೆ. ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಉಳಿದಿರುವ 1447 ಮಂದಿ ಹೋಂ ಕ್ವಾರಂಟೈನ್ ಗಳ ರಕ್ತ ಪರೀಕ್ಷೆಯೂ ನೆಗೆಟಿವ್ ಬರಲಿ ಎಂದು ದೇವರಲ್ಲಿ ಬೇಡಿಕೊಂಡರು.

ಹೋಂ ಕ್ವಾರಂಟೈನ್ ಗಳ ಮೇಲೆ ಹೆಚ್ಚು ನಿಗಾವಹಿಸಲಾಗಿದ್ದು ಪ್ರತಿ ಹತ್ತು ಜನರಿಗೊಂದು ಮನೆಯಂತೆ ಓರ್ವ ಪೊಲೀಸ್ ಕಾನ್ಸ್ ಟೇಬಲ್ ನೇಮಿಸಲು ಚಿಂತಿಸಲಾಗಿದ್ದು, ಇಂದು ರಾತ್ರಿಯಿಂದಲೇ ಈ ಕಾರ್ಯ ಜಾರಿಗೆ ಬರಲಿದೆ. ಕ್ವಾರಂಟೈನ್ ನಲ್ಲಿರುವವರಿಗೆ ಬೇಕಾಗುವ ಆಹಾರ ಪದಾರ್ಥ ಗಳನ್ನು ಆಯಾ ತಾಲ್ಲೂಕು ಆಡಳಿತ ಮತ್ತು ಅಧಿಕಾರಿಗಳು ಪೂರೈಸಲಿದ್ದಾರೆ ಎಂದು ಹೇಳಿದರು.

ನಂಜನಗೂಡು ನಿಷೇಧಿತ ಪ್ರದೇಶ: ಸಚಿವ ವಿ.ಸೋಮಣ್ಣ

ನಂಜನಗೂಡಿನ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವವಹಿಸುತಿದ್ದವರೇ ಹೆಚ್ಚು ಹೋಂ ಕ್ವಾರಂಟೈನ್ ಗಳಾಗಿದ್ದು, ನಂಜನಗೂಡನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ ಎಂದು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಷ್ಣ ತಿಳಿಸಿದರು.

ಖಾಸಗಿ ಕಂಪನಿಯ ನೌಕರರೇ  ಹೆಚ್ಚು ಕೊರೋನಾ ಪಾಸಿಟಿವ್ ಹೊಂದಿದ್ದಾರೆ. ಹಾಗಾಗಿ  ಅವರ ಹತ್ತಿರದ ವ್ಯಕ್ತಿಗಳನ್ನು ಗುರುತಿಸಿ ಹೋಂ ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಆದ್ಸರಿಂದ ನಂಜನಗೂಡನ್ನು ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X