Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಸಡಿಲಗೊಂಡ ಲಾಕ್‍ಡೌನ್; ...

ಉಪ್ಪಿನಂಗಡಿ: ಸಡಿಲಗೊಂಡ ಲಾಕ್‍ಡೌನ್; ಖರೀದಿಗೆ ಮುಗಿಬಿದ್ದ ಜನತೆ

ವಾರ್ತಾಭಾರತಿವಾರ್ತಾಭಾರತಿ31 March 2020 2:59 PM IST
share
ಉಪ್ಪಿನಂಗಡಿ:  ಸಡಿಲಗೊಂಡ ಲಾಕ್‍ಡೌನ್;  ಖರೀದಿಗೆ ಮುಗಿಬಿದ್ದ ಜನತೆ

ಉಪ್ಪಿನಂಗಡಿ: ಕೊರೋನ ವೈರಸ್‍ನ ಹರಡುವಿಕೆ ತಡೆಗಟ್ಟಲು ದ.ಕ. ಜಿಲ್ಲೆಯಲ್ಲಿ ವಿಧಿಸಿದ್ದ ಕಟ್ಟುನಿಟ್ಟಿನ ಲಾಕ್‍ಡೌನನ್ನು ಮಂಗಳವಾರ ಸಡಿಲಿಸಿದ್ದು, ಉಪ್ಪಿನಂಗಡಿ ಪೇಟೆಯಲ್ಲಿ ಜನ ಜಾತ್ರೆಯೇ ಕಂಡು ಬಂತು. ಪೊಲೀಸರು, ಅಧಿಕಾರಿಗಳು ಜನರನ್ನು, ವಾಹನಗಳನ್ನು ನಿಯಂತ್ರಿಸುವುದರಲ್ಲೇ ಹೈರಾಣಾದರು.

ಕಟ್ಟುನಿಟ್ಟಿನ ಲಾಕ್‍ಡೌನ್‍ಅನ್ನು ಮಾ.31ರಂದು ಬೆಳಗ್ಗೆ 6ರಿಂದ 3ರವರೆಗೆ ಅಗತ್ಯ ಸಾಮಗ್ರಿ ಖರೀದಿಗಾಗಿ ಸಡಿಲಿಸಿದ್ದು, ಬೆಳಗ್ಗೆ ವರ್ತಕರು ಅಂಗಡಿ ಬಾಗಿಲು ತೆರೆಯುವ ಮೊದಲೇ ಜನರು ಅಂಗಡಿಯ ಮುಂದೆ ಮುಗಿ ಬಿದ್ದಿದ್ದರು. ಬಳಿಕವೂ ಜನ ಜಂಗುಳಿ ಹೆಚ್ಚುತ್ತಲೇ ಹೋಗಿದ್ದು, ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಖ್ಯೆ ಹೆಚ್ಚಳಗೊಂಡು ಟ್ರಾಫಿಕ್ ಜಾಮ್ ಉಂಟಾಯಿತು.

ಪ್ರತಿಯೋರ್ವರು ಮಾಸ್ಕ್ ಹಾಕಿಕೊಂಡು ಬರಬೇಕು. ಅಂಗಡಿಗಳ ಮುಂದೆ ಅಂತರ ಕಾಯ್ದುಕೊಂಡು ನಿಲ್ಲಬೇಕು ಎಂಬ ಸೂಚನೆಯನ್ನೇ ಜನ ಧಿಕ್ಕರಿಸಿದಂತಿತ್ತು. ತನಗೆಲ್ಲಿ ಸಾಮಗ್ರಿ ಸಿಗಲ್ವೋ ಎಂಬ ಭೀತಿಯಿಂದ ನೂಕು ನುಗ್ಗಲು ಅಂಗಡಿಗಳ ಮುಂದೆ ಕಂಡು ಬಂತು.

ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಪಡೆ ರಚಿಸಿ, ಅಲ್ಲಿನವರಿಗೆ ಬೇಕಾದ ದಿನ ನಿತ್ಯದ ಸಾಮಗ್ರಿಗಳನ್ನು ಮನೆ, ಮನೆಗೆ ತಲುಪಿಸುವ ಉತ್ತಮ ಯೋಜನೆಯನ್ನು ಉಪ್ಪಿನಂಗಡಿ ಗ್ರಾ.ಪಂ. ಹಾಕಿಕೊಂಡಿತ್ತು. ಆದರೆ ಇಂದು ಎಲ್ಲರಿಗೂ ಅತ್ಯವಶ್ಯಕ ವಸ್ತುಗಳ ಖರೀದಿಗೆ ಅವಕಾಶ ಕೊಟ್ಟಿದ್ದರಿಂದ ಇತರ ಹಳ್ಳಿಗಳವರು ಉಪ್ಪಿನಂಗಡಿ ಪೇಟೆಗೆ ಆಗಮಿಸಿದ್ದು, ಉಪ್ಪಿನಂಗಡಿ ಗ್ರಾ.ಪಂ. ಜನರೂ ಸಾಮಗ್ರಿ ಖರೀದಿಗೆ ಆಗಮಿಸಿದ್ದರು. ಇದರಿಂದ ಜನಜಂಗುಳಿ ಉಂಟಾಗಿ ಎಲ್ಲಾ ಏರುಪೇರಾಯಿತು. ಇದನ್ನು ಮನಗಂಡ ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷರಾದಿಯಾಗಿ, ಸದಸ್ಯರು, ಸಿಬ್ಬಂದಿ ಫೀಲ್ಡ್‍ಗಿಳಿದು ಜನರಿಗೆ ನಿಯಮ ಪಾಲಿಸುವಂತೆ ಧ್ವನಿವರ್ಧಕದ ಮೂಲಕ ಮನವಿ ಮಾಡಿದರಲ್ಲದೆ, ಗ್ರಾ.ಪಂ. ಈ ಮೊದಲೇ ತಿಳಿಸಿದ ಸಾಮಗ್ರಿಗಳನ್ನು ಮಾತ್ರ ವರ್ತಕರು ನೀಡಬೇಕೆಂದು ಸೂಚನೆ ನೀಡಿದರು.

ಅಧಿಕಾರಿಗಳಿಂದ ಅವಲೋಕನ: ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್ ಬಾಬು, ಡಿವೈಎಸ್ಪಿ ದಿನಕರ ಶೆಟ್ಟಿ, ಪುತ್ತೂರು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಉಪ್ಪಿನಂಗಡಿ ಹೋಬಳಿ ಕಂದಾಯ ನಿರೀಕ್ಷಕ ಸುನೀಲ್, ಗ್ರಾಮ ಕರಣಿಕ ಸುನೀಲ್ ಉಪ್ಪಿನಂಗಡಿಯಲ್ಲಿದ್ದು, ಪರಿಸ್ಥಿತಿಯ ಅವಲೋಕನ ನಡೆಸಿದರು.

ಗ್ರಾಹಕರ ಸಂಖ್ಯೆ ಹೆಚ್ಚಿದ್ದುದರಿಂದ ಅಂಗಡಿಗಳಲ್ಲಿ ಕೊನೆ ಕೊನೆಗೆ ಸಾಮಗ್ರಿಗಳ ಕೊರತೆ ಕಂಡು ಬಂತು. ತರಕಾರಿ ಅಂಗಡಿಗಳಲ್ಲಿ ಬಾಡಿದ್ದ ತರಕಾರಿಗಳೇ ಹೆಚ್ಚಿತ್ತು. ಯಾವಾಗಲೂ ಉತ್ತಮವಾಗಿರುವುದನ್ನೇ ಆರಿಸಿ ಕೊಂಡು ಹೋಗುತ್ತಿದ್ದ ಜನರು ಇಂದು ಮಾತ್ರ ಬಾಡಿ ಹೋಗಿದ್ದ ತರಕಾರಿಗಳನ್ನು ಕೂಡಾ ಜನರು ನೋಡದೇ ತೆಗೆದುಕೊಂಡು ಹೋಗುತ್ತಿದ್ದರು. ಆದ್ದರಿಂದ ತರಕಾರಿ, ಹಣ್ಣುಹಂಪಲುಗಳು ಖಾಲಿಯಾಗುವಂತಾಗಿತ್ತು.

ಠುಸ್ಸಾಯಿತೇ `ಲಾಕ್‍ಡೌನ್' ?

ದ.ಕ. ಜಿಲ್ಲೆಯಲ್ಲಿ ಈ ಮೊದಲು ಬೆಳಗ್ಗೆ 6ರಿಂದ 11ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. 11ರವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಅವಕಾಶ ನೀಡಿದ್ದಾಗ ಜನರು ಈ ಪರಿಯಾಗಿ ಬೀದಿಗಿಳಿಯುತ್ತಿರಲಿಲ್ಲ. ರಸ್ತೆಯಿಡೀ ಬಿಕೋ ಅನ್ನುತ್ತಿತ್ತು. ಅನಗತ್ಯ ತಿರುಗಾಡುವರನ್ನು ನಿಯಂತ್ರಿಸಲು ಪೊಲೀಸರಿಗೂ ಸುಲಭ ಸಾಧ್ಯವಾಗಿತ್ತು. 

ಆದರೆ ಬಳಿಕ ಲಾಕ್‍ಡೌನ್ ಅನ್ನು ಇನ್ನಷ್ಟು ಕಟ್ಟುನಿಟ್ಟಾಗಿಸಿ, ಸಂಪೂರ್ಣ ಮೆಡಿಕಲ್, ಹಾಲು ಹೊರತು ಪಡಿಸಿ ಇತರೆ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಯಿತು. ಮೆಡಿಕಲ್‍ಗಳು ಬಾಗಿಲು ತೆರೆದಿದ್ದವಾದರೂ, ಸರಿಯಾಗಿ ಹಾಲಿನ ಪೂರೈಕೆ ಆಗದ್ದರಿಂದ ಹಾಗೂ ಕೆಲವು ಹಾಲಿನಂಗಡಿಯವರು ಬಾಗಿಲು ತೆರೆಯದಿದ್ದದ್ದರಿಂದ ಹಾಲಿನ ಪೂರೈಕೆಯಲ್ಲೂ ವ್ಯತ್ಯಯ ಕಂಡು ಬಂದಿತ್ತು. ಮಾ.31ರಂದು  ಲಾಕ್‍ಡೌನ್ ಸಡಿಲಿಸಿ ಜನರಿಗೆ ಸಂಜೆ 3ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ್ದು, ಇನ್ನು ಮುಂದೆಯೂ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಬಹುದು ಎಂಬ ಭೀತಿಯಿಂದ ಎಲ್ಲೆಡೆಯೂ ನೂಕು ನುಗ್ಗಲು, ಜನಜಾತ್ರೆಯೇ ಕಂಡು ಬಂತು. ಇದರಿಂದ ಈವರೆಗಿನ ಲಾಕ್‍ಡೌನ್ ಒಂದೇ ದಿನದಲ್ಲಿ ಠುಸ್ಸಾದಂತಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿ ಬಂತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X