Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಾಕ್ ಡೌನ್ ವಿಫಲತೆಗೆ ದ.ಕ. ಜಿಲ್ಲಾಡಳಿತದ...

ಲಾಕ್ ಡೌನ್ ವಿಫಲತೆಗೆ ದ.ಕ. ಜಿಲ್ಲಾಡಳಿತದ ತಪ್ಪು ನಡೆಗಳೇ ನೇರ ಕಾರಣ : ಡಿವೈಎಫ್ಐ

ವಾರ್ತಾಭಾರತಿವಾರ್ತಾಭಾರತಿ31 March 2020 4:33 PM IST
share
ಲಾಕ್ ಡೌನ್ ವಿಫಲತೆಗೆ ದ.ಕ. ಜಿಲ್ಲಾಡಳಿತದ ತಪ್ಪು ನಡೆಗಳೇ ನೇರ ಕಾರಣ : ಡಿವೈಎಫ್ಐ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ ಲಾಕ್ ಡೌನ್ ಸಂಬಂಧಿಸಿ ತೆಗೆದುಕೊಳ್ಳುತ್ತಿರುವ ಪ್ರಾಯೋಗಿಕವಲ್ಲದ, ದೂರದೃಷ್ಟಿಯಿಲ್ಲದ ಕ್ರಮಗಳು ಜನ ಜೀವನದ ಮೇಲೆ, ಕೊರೋನ ವೈರಸ್ ತಡೆಯುವ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ನಾಗರಿಕರಲ್ಲಿ ಹತಾಷೆಗೆ ಕಾರಣವಾಗುತ್ತಿದೆ. ಜಿಲ್ಲಾಡಳಿತದ ಇಂತಹ ತಪ್ಪಾದ, ಏಕಮುಖ, ಸರ್ವಾಧಿಕಾರಿ ಕ್ರಮಗಳನ್ನು ಡಿವೈಎಫ್ಐ ತೀವ್ರವಾಗಿ ಖಂಡಿಸುತ್ತದೆ ಹಾಗೂ ರಾಜ್ಯ, ಕೇಂದ್ರ ಸರಕಾರದ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸುವಂತೆ ಆಗ್ರಹಿಸುತ್ತದೆ ಎಂದು ಡಿವೈಎಫ್ಐ ಕರ್ನಾಟಕ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

ರಾಜ್ಯಾದ್ಯಂತ ನಡೆಯುತ್ತಿರುವ ಲಾಕ್ ಡೌನ್ ನಿಯಮಗಳಿಗೆ ವಿರುದ್ಧವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತತ ಮೂರು ದಿನಗಳ ಕಾಲ ಪೂರ್ಣ ಪ್ರಮಾಣದ ಬಂದ್ ಘೋಷಿಸಿ, ಅಗತ್ಯ ವಸ್ತುಗಳ ಅಭಾವ ಸೃಷ್ಟಿ ಮಾಡಿ, ನಾಲ್ಕನೇ ದಿನ ಅಲ್ಪ ಅವಧಿಗೆ ದಿನಸಿ ಅಂಗಡಿಗಳನ್ನು, ಮಾರು ಕಟ್ಟೆಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟಿರುವುದು ದೊಡ್ಡ ಪ್ರಮಾಣದ ಜನ ಜಂಗುಳಿಗೆ ಕಾರಣವಾಗಿದೆ. ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಲಾಕ್ ಡೌನ್ ಉದ್ದೇಶ ದಯನೀಯ ವೈಫಲ್ಯ ಕಾಣುವಂತಾಗಿದೆ. ಲಾಕ್ ಡೌನ್ ಉದ್ದೇಶ ಜನ ಗುಂಪು ಸೇರದಂತೆ, ಬೆರೆಯದಂತೆ ತಡೆಯುವುದು. ಆದರೆ ಸತತ ಮೂರು ದಿನಗಳ ಬಂದ್, ಮುಂದೆ  ಆಹಾರ ಸಾಮಾಗ್ರಿಗಳ ಲಭ್ಯತೆಯ ಅನಿಶ್ಚಿತತೆ ಜನರು ಅಂಗಡಿ, ಮಾರುಕಟ್ಟೆಗಳಿಗೆ ಮುಗಿ ಬೀಳುವಂತೆ ಮಾಡುತ್ತಿದೆ. ಆನ್ ಲೈನ್ ವ್ಯಾಪಾರಿಗಳ ಮೂಲಕ, ಸ್ಥಳೀಯ ಅಂಗಡಿಗಳಿಂದ ವಾಟ್ಸಪ್ ಸಂದೇಶಗಳ ಮೂಲಕ ಅಗತ್ಯ ವಸ್ತುಗಳನ್ನು ಮನೆ ಮನೆ ತಲುಪಿಸುವ ಕುರಿತು ಜಿಲ್ಲಾಡಳಿತ ಪ್ರಕಟನೆ ನೀಡಿದ್ದರೂ ಕಾರ್ಯಸಾಧುವಾದ ಯೋಜನೆಗಳನ್ನು ರೂಪಿಸಿರುವುದು ಕಂಡು ಬರುತ್ತಿಲ್ಲ. ಬೀದಿಬದಿ ವ್ಯಾಪಾರಸ್ಥರನ್ನು ವಾರ್ಡ್ ವಾರು ತರಕಾರಿ, ಹಣ್ಣುಹಂಪಲು ಮನೆ ಮನೆ ವಿತರಿಸುವಂತೆ ವಿಶೇಷ ಸಭೆ ನಡೆಸಿ ತೀರ್ಮಾನಿಸಿದ್ದರೂ, ಆಡಳಿತ ಪಕ್ಷದ ಜನಪ್ರತಿನಿಧಿಗಳ ಒತ್ತಡಕ್ಕೆ ಬಲಿ ಬಿದ್ದು ಅದನ್ನು ಏಕಾಏಕಿ ಕೈ ಬಿಟ್ಟಿರುವುದು ಜಿಲ್ಲಾಡಳಿತ ದೂರದೃಷ್ಟಿ ಇಟ್ಟು ಕೆಲಸ ಮಾಡುತ್ತಿಲ್ಲ, ರಾಜಕೀಯ ಒತ್ತಡಕ್ಕೆ ತಲೆಬಾಗುತ್ತಿದೆ ಎಂಬುದನ್ನು ತೋರಿಸುತ್ತದೆ. ವಲಸೆ ಕಾರ್ಮಿಕರಿಗೆ, ನಿರ್ಗತಿಕರಿಗೆ ಆಹಾರ ಸರಬರಾಜಿನಲ್ಲೂ ವೈಫಲ್ಯ ಎದ್ದು ಕಾಣುತ್ತಿದೆ. ಇದು ಜನಸಾಮಾನ್ಯರಲ್ಲಿ ಹತಾಷೆಗೆ ಕಾರಣವಾಗುತ್ತಿದೆ.

ಲಾಕ್ ಡೌನ್, ಸಾಮಾಜಿಕ ಅಂತರ ಕಾಪಾಡುವಿಕೆ ಯಶಸ್ವಿಯಾಗಬೇಕಾದರೆ, ಜಿಲ್ಲಾಡಳಿತ ರಾಜಕೀಯ ಒತ್ತಡ ಮೀರಿ ಕೆಲಸ ಮಾಡಬೇಕು. ಸಾಧ್ಯವಾದರೆ ಕೇಂದ್ರ ಮಾರುಕಟ್ಟೆಗಳನ್ನು ವಿಶಾಲವಾದ ತೆರೆದ ಮೈದಾನಗಳಿಗೆ ಸ್ಥಳಾಂತರಿಸಬೇಕು. ದಿನ ಬಳಕೆಯ ಅಂಗಡಿಗಳನ್ನು ಇಡೀ ದಿನ ಹೆಚ್ವಿನ ಅವಧಿಗೆ ತೆರೆದಿಡುವುದು, ಅದೇ ಸಂದರ್ಭ ಪರ್ಯಾಯವಾಗಿ ಆನ್ ಲೈನ್ ಮೂಲಕ ಮನೆ ಮನೆಗೆ ದಿನಬಳಕೆ ವಸ್ತುಗಳು ತಲುಪುವ ಯೋಜನೆ ರೂಪಿಸುವುದು, ಇದು ಮಾರುಕಟ್ಟೆ, ಅಂಗಡಿಗಳ ಮೇಲೆ ಜನರ ಅವಲಂಬನೆ ಕಡಿಯಾಗುವಂತೆ ಮಾಡುತ್ತದೆ.  ಇದರ ಹೊರತು ಮತ್ತಷ್ಟು ದಿನಗಳ ಸಂಪೂರ್ಣ ಬಂದ್ ಗೆ ಮುಂದಾದರೆ ಇನ್ನಷ್ಟು ಅವ್ಯವಸ್ಥೆ, ಗಂಭೀರ ಸ್ಥಿತಿ ಉದ್ಭವವಾಗಲಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X