Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ: ವೆಚ್ಚ ಸರಿದೂಗಿಸಲು ಉದ್ಯೋಗಿಗಳ...

ಕೊರೋನ: ವೆಚ್ಚ ಸರಿದೂಗಿಸಲು ಉದ್ಯೋಗಿಗಳ ಶೇ.60 ವೇತನ ಕಡಿತಕ್ಕೆ ಮುಂದಾಗಿವೆ ಈ ರಾಜ್ಯಗಳು

ವಾರ್ತಾಭಾರತಿವಾರ್ತಾಭಾರತಿ31 March 2020 5:04 PM IST
share
ಕೊರೋನ: ವೆಚ್ಚ ಸರಿದೂಗಿಸಲು ಉದ್ಯೋಗಿಗಳ ಶೇ.60 ವೇತನ ಕಡಿತಕ್ಕೆ ಮುಂದಾಗಿವೆ ಈ ರಾಜ್ಯಗಳು

ಹೊಸದಿಲ್ಲಿ: ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹಾಗೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಕಾರಗಳು ಮಾಡಬೇಕಾಗಿರುವ ಖರ್ಚುವೆಚ್ಚಗಳನ್ನು ಸರಿದೂಗಿಸಲು ಮಹಾರಾಷ್ಟ್ರ ಮತ್ತು ತೆಲಂಗಾಣ ಸರಕಾರಗಳು ತಮ್ಮ ಮುಖ್ಯಮಂತ್ರಿ, ಸಚಿವರು ಹಾಗೂ ಸರಕಾರಿ ಉದ್ಯೋಗಿಗಳ ವೇತನ ಕಡಿತ ಮಾಡಲು ನಿರ್ಧರಿಸಿವೆ.

"ಮುಖ್ಯಮಂತ್ರಿ, ರಾಜ್ಯ ಸಚಿವರು, ಶಾಸಕರು, ರಾಜ್ಯ ನಿಗಮಗಳ ಅಧ್ಯಕ್ಷರು, ಸ್ಥಳೀಯಾಡಳಿತಗಳ ಪ್ರತಿನಿಧಿಗಳ ವೇತನದಲ್ಲಿ ಶೇ.75ರಷ್ಟು ಕಡಿತವಾಗಲಿದೆ'' ಎಂದು ತೆಲಂಗಾಣ ಸಿಎಂ ಕೆ ಸಿ ರಾವ್ ಹೇಳಿದ್ದಾರೆ.

ಉಳಿದಂತೆ ರಾಜ್ಯದ ಆಡಳಿತಾತ್ಮಕ, ಪೊಲೀಸ್ ಹಾಗೂ ವಿದೇಶಾಂಗ ಸೇವೆಗಳ ಅಧಿಕಾರಿಗಳು ಹಾಗೂ ಇತರ ಕೇಂದ್ರ ಸರಕಾರಿ ಅಧಿಕಾರಿಗಳ ವೇತನಗಳಲ್ಲಿ ಶೇ. 60ರಷ್ಟು ಕಡಿತವಾಗಲಿದೆ. ಎಲ್ಲಾ ಇತರ ಸರಕಾರಿ ಉದ್ಯೋಗಿಗಳ ವೇತನ ಶೇ. 50ರಷ್ಟು  ಕಡಿತಗೊಳ್ಳಲಿದೆ. ಉಳಿದಂತೆ ನಾಲ್ಕನೇ ದರ್ಜೆ ನೌಕರರು, ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರ ವೇತನಗಳಲ್ಲಿ ಶೇ. 10ರಷ್ಟು ಕಡಿತ ಮಾಡಲಾಗುವುದು'' ಎಂದು ರಾವ್ ತಿಳಿಸಿದ್ದಾರೆ.

ಲಾಕ್‍ಡೌನ್‍ ನಿಂದಾಗಿ ತೆಲಂಗಾಣ ಕಂದಾಯ ಇಲಾಖೆ 12,000 ಕೋಟಿ ರೂ. ನಷ್ಟ ಅನುಭವಿಸಲಿದೆ ಎಂದು ಅವರು ಈ ಹಿಂದೆಯೇ ತಿಳಿಸಿದ್ದರು.

ಮಹಾರಾಷ್ಟ್ರದಲ್ಲಿ ಸಿಎಂ ಹಾಗೂ ಇತರ ಶಾಸಕರ ವೇತನಗಳಲ್ಲಿ ಶೇ 60ರಷ್ಟು ಕಡಿತ ಮಾಡಲಾಗುವುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ. ಎ ಮತ್ತು ಬಿ ದರ್ಜೆಯ ಅಧಿಕಾರಿಗಳ ವೇತನದಲ್ಲಿ ಶೇ 50ರಷ್ಟು ಕಡಿತವಾಗಲಿದ್ದರೆ, ಡಿ ದರ್ಜೆ ಉದ್ಯೋಗಿಗಳ ವೇತನದಲ್ಲಿ ಕಡಿತವಿರುವುದಿಲ್ಲ ಎಂದು ಸಿಎಂ ತಿಳಿಸಿದ್ದಾರೆ. ಈ ಕಡಿತ ಕೇವಲ ಮಾರ್ಚ್ ತಿಂಗಳ ವೇತನಕ್ಕೆ ಅನ್ವಯಿಸುತ್ತದೆ ಎಂದು ಮಹಾರಾಷ್ಟ್ರ ವಿತ್ತ ಸಚಿವ ಅಜಿತ್ ಪವಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X