Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಪಡಿತರ...

ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಪಡಿತರ ವಿತರಣೆ: ಸಚಿವ ಕೋಟ

ವಾರ್ತಾಭಾರತಿವಾರ್ತಾಭಾರತಿ31 March 2020 8:09 PM IST
share
ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಪಡಿತರ ವಿತರಣೆ: ಸಚಿವ ಕೋಟ

ಉಡುಪಿ, ಮಾ.31: ಕೊರೋನಾ ಭೀತಿಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಎ.1ರಿಂದ ಪಡಿತರ ವಿತರಣೆ ಆರಂಭವಾಗಲಿದ್ದು, ಎರಡು ತಿಂಗಳ ಪಡಿತರ ವನ್ನು ಒಂದೇ ಬಾರಿಗೆ ವಿತರಿಸಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳ ಲಾಗಿದೆ ಎಂದು ರಾಜ್ಯದ ಬಂದರು, ಮೀನುಗಾರಿಕೆ ಹಾಗೂ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕೊರೋನಾ ನಿಯಂತ್ರಣ ಸಂಬಂಧ ಉಡುಪಿ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಕುರಿತ ಮಾಹಿತಿ ಯನ್ನು ಅವರು ಮಾಧ್ಯಮದವರಿಗೆ ನೀಡಿದರು.

ಜಿಲ್ಲೆಯ 292 ಸಹಕಾರಿ ಸಂಘಗಳ ಮೂಲಕ ರಾಜ್ಯ ಸರಕಾರದಿಂದ ಏಳು ಕೆ.ಜಿ. ಮತ್ತು ಕೇಂದ್ರ ಸರಕಾರದಿಂದ ಐದು ಕೆ.ಜಿ. ಅಕ್ಕಿಯನ್ನು ವಿತರಿಸುವ ಕಾರ್ಯ ಮಾಡಲಾಗುವುದು. ಅಲ್ಲಿ ಕೂಡ ಸಾಮಾಜಿಕ ಅಂತರವನ್ನು ಕಾಪಾಡ ಲಾಗುವುದು. ದಿನಕ್ಕೆ ನಿಗದಿತ ಸಂಖ್ಯೆಯ ಜನರಿಗೆ ಮಾತ್ರ ಪಡಿತರವನ್ನು ವಿತರಿಸಲಾಗುವುದು ಎಂದರು.

ಜಿಲ್ಲೆಯಲ್ಲಿರುವ ಅಂತ್ಯೋದಯ, ಬಿಪಿಎಲ್ ಮತ್ತು ಆಹಾರ ಪಡೆಯಲು ನೊಂದಾಯಿಸಿರುವ ಎಪಿಲ್ ಕಾರ್ಡ್‌ದಾರರಿಗೆ ಸರಕಾರದ ಸೂಚನೆಯಂತೆ, ಎರಡು ತಿಂಗಳ ಪಡಿತರವನ್ನು ವಿತರಿಸಲಾಗುತ್ತದೆ. ಪಡಿತರ ಪಡೆಯಲು ಒಟಿಪಿ ಸಂಖ್ಯೆಯನ್ನು ಕಡ್ಡಾಯಗೊಳಿಸದೇ, ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿಕೊಂಡು ವಿತರಿಸಲಾಗುವುದು. ಇದರ ಉಸ್ತುವಾರಿಯನ್ನು ಆಯಾ ತಾಲೂಕಿನ ತಹಶೀಲ್ದಾರು ವಹಿಸಿಕೊಳ್ಳಲಿರುವರು ಎಂದರು.

ಜಿಲ್ಲೆಯಲ್ಲಿ ದಿನಕ್ಕೆ 1250 ಮಂದಿ ಕೂಲಿಕಾರ್ಮಿಕರು, ನಿರಾಶ್ರಿತರು, ಭಿಕ್ಷುಕರಿಗೆ ಊಟವನ್ನು ನೀಡಲಾಗುತ್ತಿದೆ. ಸುಮಾರು 3850 ಮಂದಿ ಕಾರ್ಮಿಕ ರಿಗೆ ದಾನಿಗಳ ನೆರವಿನೊಂದಿಗೆ ಆಹಾರದ ಕಿಟ್‌ಗಳನ್ನು ವಿತರಿಸಲಾಗಿದೆ. ಕೃಷಿಗೆ ತೊಂದರೆ ಆಗದಂತೆ ಕಟಾವು ಯಂತ್ರ, ಟ್ಯಾಕ್ಟರ್ ಸಂಚರಿಸಲು ಅಡ್ಡಿಪಡಿಸದಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಶಾಲೆಗಳಲ್ಲಿ ಉಳಿದಿರುವ ಬಿಸಿಯೂಟದ ಅಕ್ಕಿಯನ್ನು ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಅಂಗನವಾಡಿಯಲ್ಲಿ ಉಳಿದಿರುವ ಪೌಷ್ಠಿಕ ಆಹಾರಗಳನ್ನು ಗರ್ಭಿಣಿ ಮತ್ತು ಬಾಣಂತಿಯರ ಮನೆಗೆಳಿಗೆ ತಲುಪಿಸುವ ವ್ಯವಸ್ಥೆ ಮಾಡ ಲಾಗುತ್ತದೆ ಎಂದ ಅವರು, ಜಿಲ್ಲೆಯಲ್ಲಿ ಸಾರ್ವಜನಿ ಕರಿಗೆ ದಿನಸಿ ವಸ್ತುಗಳ ಖರೀದಿಗೆ ನಿಗದಿ ಪಡಿಸಿರುವ ಸಮಯದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ, ಜಿಪಂ ಅಧ್ಯಕ್ಷ ದಿನಕರ ಬಾಬು, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಪ್ರೀತಿ ಗೆಹ್ಲೋಟ್, ಎಸ್ಪಿ ವಿಷ್ಣುವರ್ಧನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಲ್ಯಾಬ್ ಬಗ್ಗೆ ಸಿಎಂ ಜೊತೆ ಚರ್ಚೆ 

ಜಿಲ್ಲೆಯಲ್ಲಿ ಕೊರೋನ ಪತ್ತೆ ಹಚ್ಚುವ ಲ್ಯಾಬ್ ತೆರೆಯಲು ಎಲ್ಲಾ ಅಗತ್ಯ ಮೂಲಭೂತ ಸೌಲಭ್ಯಗಳಿದ್ದು, ಕೂಡಲೇ ಲ್ಯಾಬ್‌ಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಸಚಿವ ಕೋಟ ತಿಳಿಸಿದರು.

ಸಾಂಪ್ರದಾಯಿಕ ಮೀನುಗಾರಿಕೆಗೆ ಅನುಮತಿ ನೀಡುವ ಕುರಿತು ಅಧಿಕಾರಿ ಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಎಲ್ಲರು ಮನೆಯಲ್ಲಿಯೇ ಉಳಿದುಕೊಂಡು ಸಹಕಾರ ನೀಡು ವುದು ಉತ್ತಮ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X