ರೋಗಕ್ಕೆ ಜಾತಿ-ಧರ್ಮಗಳಿಲ್ಲ, ಒಂದಾಗಿರೋಣ: ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಎ.1: ರೋಗಕ್ಕೆ ಜಾತಿ-ಧರ್ಮಗಳಿಲ್ಲ. ಇದನ್ನು ಜಾತಿ-ಧರ್ಮದ ಪೂರ್ವಗ್ರಹಗಳಿಲ್ಲದೆಯೇ ಎದುರಿಸಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೋನ ವಿರುದ್ಧ ದೇಶ ಒಂದಾಗಿ ನಡೆಸುತ್ತಿರುವ ಹೋರಾಟಕ್ಕೆ ಕೆಲವರು ಜಾತಿ-ಧರ್ಮದ ಬಣ್ಣ ಹಚ್ಚಲು ಪ್ರಯತ್ನಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ. ಈ ಸಂಕಷ್ಟದ ಗಳಿಗೆಯಲ್ಲಿ ಒಂದಾಗಿರೋಣ, ಎಚ್ಚರವಾಗಿರೋಣ ಎಂದು ಮನವಿ ಮಾಡಿದ್ದಾರೆ.
ರೋಗಕ್ಕೆ ಜಾತಿ-ಧರ್ಮಗಳಿಲ್ಲ.
— Siddaramaiah (@siddaramaiah) April 1, 2020
ಇದನ್ನು ಜಾತಿ-ಧರ್ಮದ ಪೂರ್ವಗ್ರಹಗಳಿಲ್ಲದೆಯೇ ಎದುರಿಸಬೇಕು.
ಕೊರೊನಾ ವಿರುದ್ದ ದೇಶ ಒಂದಾಗಿನಡೆಸುತ್ತಿರುವ ಹೋರಾಟಕ್ಕೆ ಕೆಲವರು ಜಾತಿ-ಧರ್ಮದ ಬಣ್ಣ ಹಚ್ಚಲು ಪ್ರಯತ್ನಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ.
ಈ ಸಂಕಷ್ಟದ ಗಳಿಗೆಯಲ್ಲಿ ಒಂದಾಗಿರೋಣ, ಎಚ್ಚರವಾಗಿರೋಣ.#coronavirusindia
Next Story