Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಭೀತಿ: ಪಾಂಡವಪುರದಲ್ಲಿ 20ಕ್ಕೂ...

ಕೊರೋನ ಭೀತಿ: ಪಾಂಡವಪುರದಲ್ಲಿ 20ಕ್ಕೂ ಹೆಚ್ಚು ಹಂದಿ ಸಾಕಣೆ ಗುಡಿಸಲುಗಳ ನೆಲಸಮ

ವಾರ್ತಾಭಾರತಿವಾರ್ತಾಭಾರತಿ1 April 2020 10:42 PM IST
share
ಕೊರೋನ ಭೀತಿ: ಪಾಂಡವಪುರದಲ್ಲಿ 20ಕ್ಕೂ ಹೆಚ್ಚು ಹಂದಿ ಸಾಕಣೆ ಗುಡಿಸಲುಗಳ ನೆಲಸಮ

ಪಾಂಡವಪುರ: ಮಹಾಮಾರಿ ಕೊರೋನ ವೈರಸ್ ಹರಡಬಹುದೆಂಬ ಭೀತಿಯಿಂದ ಸುಮಾರು 20ಕ್ಕೂ ಹೆಚ್ಚು ಹಂದಿ ಸಾಕಣೆ ಮಾಡುತ್ತಿದ್ದ ಗುಡಿಸಲುಗಳನ್ನು ತಾಲೂಕು ಆಡಳಿತ ನೆಲಸಮ ಮಾಡಿದ ಘಟನೆ ತಾಲೂಕಿನ ತಿರುಮಲಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದ್ದು, ಹಂದಿ ಸಾಕಣೆ ಮಾಡುತ್ತಿದ್ದ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯಲ್ಲಿ ನೂರಾರು ಹಂದಿಗಳು ತಮ್ಮ ಮರಿಗಳ ಸಮೇತ ದಿಕ್ಕಾಪಾಲಾಗಿ ಓಡಿ ಹೋಗಿದ್ದು, 20ಕ್ಕೂ ಹೆಚ್ಚು ಗುಡಿಸಲುಗಳನ್ನು ನೆಲಸಮ ಮಾಡಲಾಗಿದೆ. ಯಾವುದೇ ಮುನ್ಸೂಚನೆ ನೀಡದೆ ತಾಲೂಕು ಆಡಳಿತ ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದ್ದು, ಹಂದಿ ಸಾಕಣೆದಾರರು ಕಂಗಾಲಾಗಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿರುಮಲಾಪುರ ಗ್ರಾಮದಲ್ಲಿ ಸುಮಾರು 150 ಕುಟುಂಬಗಳು ವಾಸವಿದ್ದು, ಎಲ್ಲರೂ ತಮ್ಮ ಜೀವನೋಪಾಯಕ್ಕೆ ವಿಶ್ವೇಶ್ವರಯ್ಯ ನಾಲೆಯ ಏರಿ ಮೇಲೆ ಪುಟ್ಟ ಪುಟ್ಟ ಗುಡಿಸಲುಗಳನ್ನು ಹಾಕಿಕೊಂಡು ಹಲವಾರು ವರ್ಷಗಳಿಂದ ಹಂದಿ ಸಾಕಣೆ ಮಾಡುತ್ತಿದ್ದರು. ಹಂದಿ ಸಾಕಲು ಹತ್ತಾರು ಕಡೆ ಸಂಘ ಸಂಸ್ಥೆಗಳಲ್ಲಿ ಮತ್ತು ಬ್ಯಾಂಕುಗಳಲ್ಲಿ ಸಾಲ ಪಡೆದಿದ್ದಾರೆ. ಅಲ್ಲದೇ ತಮ್ಮಗಳ ಜೀವನೋಪಾಯಕ್ಕೆ ಹಂದಿ ಸಾಕಣೆಯನ್ನೇ ಅವಲಂಬಿಸಿದ್ದು, ತಾಲೂಕು ಆಡಳಿತ ಯಾವುದೇ ನೊಟೀಸ್ ನೀಡದೆ ಏಕಾಏಕಿ ಜೆಸಿಬಿ ಮೂಲಕ ಗುಡಿಸಲು ತೆರವು ಮಾಡಿದ್ದರಿಂದ ಹಂದಿಗಳು ದಿಕ್ಕಾಪಾಲಾಗಿ ಓಡಿವೆ, ಜತೆಗೆ ಗುಡಿಸಲುಗಳನ್ನು ನೆಲಸಮ ಮಾಡಿದ್ದರಿಂದ ಸಾಕಣೆದಾರರಿಗೆ ಲಕ್ಷಾಂತರ ರೂ. ನಷ್ಟ ಉಂಟಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಮುಖಂಡ ವಿಜಯಕುಮಾರ್ ಮಾತನಾಡಿ, ಹಂದಿ ಸಾಕಣೆ ಮಾಡುವುದನ್ನು ಏಕಾಏಕಿ ತೆರವುಗೊಳಿಸುವಂತಿಲ್ಲ. ಇದನ್ನೆ ನಂಬಿ ಬದುಕುತ್ತಿರುವ ಜನರಿಗೆ ಬೇರೆ ಸ್ಥಳವನ್ನು ತೋರಿಸಿ ಬಳಿಕ ತೆರವು ಮಾಡುವಂತೆ ಹೈ ಕೋರ್ಟ್ ನಿರ್ದೇಶನ ನೀಡಿದೆ. ಅಧಿಕಾರಿಗಳು ಯಾವುದೇ ನೊಟೀಸ್ ನೀಡದೆ ತೆರವುಗೊಳಿಸಿದ್ದರಿಂದ ಇದನ್ನೆ ನಂಬಿ ಬದುಕುತ್ತಿರುವ ಜನರಿಗೆ ಲಕ್ಷಾಂತರ ರೂ. ನಷ್ಟವಾಗಿದೆ. ಸರ್ಕಾರ ಕೂಡಲೇ ಅವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಕಾಲುವೆಗೆ ಹಂದಿಗಳ ಮಲವನ್ನು ಬಿಡಲಾಗುತ್ತಿತ್ತು
ತಿರುಮಲಾಪುರ ಗ್ರಾಮದ ಮೂಲಕ ಹರಿಯುವ ವಿಶ್ವೇಶ್ವರಯ್ಯ ನಾಲೆಗೆ ಈ ಭಾಗದಲ್ಲಿ ಹಂದಿ ಸಾಕಣೆ ಮಾಡುತ್ತಿದ್ದವರು ಹಂದಿಗಳ ಮಲವನ್ನು ಕಾಲುವೆಗೆ ಬಿಡುತ್ತಿದ್ದರು. ಇದರಿಂದ ನೀರು ಕಲುಷಿತವಾಗಿ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಟರಿಣಾಮ ಬೀರುತ್ತಿತ್ತು. ಈ ಬಗ್ಗೆ ಪಂಚಾಯತ್ ಮೂಲಕ ಹಂದಿ ಸಾಕಣೆದಾರರಿಗೆ ನೋಟೀಸ್ ಸಹ ನೀಡಲಾಗಿತ್ತು. ಆದರೂ ಹಂದಿಗಳ ಮಲವನ್ನು ನೀರಿಗೆ ಬಿಡುವುದನ್ನು ನಿಲ್ಲಿಸದ ಕಾರಣ ಗುಡಿಸಲು ತೆರವು ಮಾಡಲಾಗಿದೆ.
-ಪ್ರಮೋದ್ ಎಸ್. ಪಾಟೀಲ್, ತಹಶೀಲ್ದಾರ್, ಪಾಂಡವಪುರ

'ಕಾಲುವೆ ಏರಿಯಲ್ಲಿ ಶುಚಿತ್ವ ಇರಲಿಲ್ಲ 
ತಿರುಮಲಪುರ ಗ್ರಾಮದಲ್ಲಿ ಹರಿಯುವ ವಿಶ್ವೇಶ್ವರಯ್ಯ ಕಾಲುವೆ ಏರಿ ಮೇಲೆ ಹಂದಿ ಸಾಕಣೆ ಮಾಡುತ್ತಿದ್ದು, ಸಾಕಣೆದಾರರು ಇಲ್ಲಿ ಶುಚಿತ್ವ ಕಾಪಾಡುತ್ತಿರಲಿಲ್ಲ. ಸತ್ತ ಕೋಳಿಯ ಕರುಳುಗಳನ್ನು ಮತ್ತು ಇನ್ನಿತರೆ ಗಲೀಜು ಪದಾರ್ಥಗಳನ್ನು ಹಂದಿಗಳಿಗೆ ತಿನ್ನಿಸಿ ಅದರ ಮಲವನ್ನು ಕಾಲುವೆಗೆ ಸುರಿಯುತ್ತಿದ್ದರು. ಇದರಿಂದ ಕೆಳಗಿನ ಭಾಗದ ಜನ ಮತ್ತು ಜಾನುವಾರುಗಳಿಗೆ ನೀರು ಬಳಕೆ ಮಾಡಲು ಆಗುತ್ತಿರಲಿಲ್ಲ. ಕಲುಷಿತ ನೀರಿನಿಂದ ರೋಗ ರುಜಿನಗಳು ಬರುತ್ತಿದ್ದವು. ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಹಂದಿ ಸಾಕಣೆ ಗುಡಿಸಲುಗಳನ್ನು ತೆರವು ಮಾಡಲಾಗಿದೆ'
-ಆರ್.ಪಿ. ಮಹೇಶ್, ತಾ.ಪಂ. ಕಾರ್ಯನಿರ್ವಣಾಧಿಕಾರಿ ಪಾಂಡವಪುರ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X