Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್‌ಡೌನ್ ಪರಿಣಾಮ: ಹೂಗಳಿಗೆ ಕುಸಿದ...

ಲಾಕ್‌ಡೌನ್ ಪರಿಣಾಮ: ಹೂಗಳಿಗೆ ಕುಸಿದ ಬೇಡಿಕೆ, ದನಗಳ ಮೇವಾಗಿ ಬಳಕೆ

ರೈತರು ಕಂಗಾಲು

ವಾರ್ತಾಭಾರತಿವಾರ್ತಾಭಾರತಿ1 April 2020 11:01 PM IST
share
ಲಾಕ್‌ಡೌನ್ ಪರಿಣಾಮ: ಹೂಗಳಿಗೆ ಕುಸಿದ ಬೇಡಿಕೆ, ದನಗಳ ಮೇವಾಗಿ ಬಳಕೆ

ಚಂಡೀಗಢ, ಎ.1: ಮದುವೆ ಹಾಗೂ ಇನ್ನಿತರ ಶುಭ ಸಮಾರಂಭಗಳಲ್ಲಿ ಅಲಂಕಾರಕ್ಕೆ ಬಳಸಲಾಗುವ ಮಾರಿಗೋಲ್ಡ್, ಮಲ್ಲಿಗೆ, ಲಿಲ್ಲಿ ಹೂ, ಗುಲಾಬಿ ಇತ್ಯಾದಿ ಹೂಗಳಿಗೆ ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ವಿಪರೀತ ಬೇಡಿಕೆ ಇರುತ್ತದೆ. ಆದರೆ ಈಗ ಕೊರೊನ ವೈರಸ್ ಕಾರಣದಿಂದ ಇವುಗಳನ್ನು ಕೇಳುವವರೇ ಇಲ್ಲವಾಗಿದ್ದು ಹೂ ಬೆಳೆವ ರೈತರು ತಲೆಯ ಮೇಲೆ ಕೈ ಇಟ್ಟುಕೊಳ್ಳುವಂತಾಗಿದೆ.

ಬಹುತೇಕ ಹೂ ಬೆಳೆಗಾರರು ತಾವು ಬೆಳೆದ ಹೂಗಳನ್ನು ದನಗಳಿಗೆ ಮೇವಾಗಿ ಬಳಸುತ್ತಿದ್ದಾರೆ. ಕೊರೊನ ವೈರಸ್ ಲಾಕ್‌ಡೌನ್ ಕಾರಣದಿಂದ ದೇಶದೆಲ್ಲೆಡೆ ಹೂವಿನ ಮಾರುಕಟ್ಟೆಯೂ ಬಂದ್ ಆಗಿದೆ. ಜಾನುವಾರುಗಳ ಮೇವಿಗೂ ಕೊರತೆಯಾಗಿರುವುದರಿಂದ ಹೈನುಗಾರರು ಇದೀಗ ಮೇವಿಗೆ ಪರ್ಯಾಯವಾಗಿ ಹೂವುಗಳನ್ನು ಬಳಸುತ್ತಿದ್ದಾರೆ.

ದೇವರಿಗೆ ಅಲಂಕಾರ ಮಾಡಲು ಈ ಹೂಗಳನ್ನು ಬಳಸಲಾಗುತ್ತಿತ್ತು. ವಿಪರೀತ ಬೇಡಿಕೆಯೂ ಇತ್ತು. ಆದರೆ ಈಗ ಬೇಡಿಕೆ ಕುಸಿದಿದೆ. ಬೇಡಿಕೆ ಇದ್ದರೂ ಪೂರೈಸಲು ಆಗುತ್ತಿಲ್ಲ. ಆದ್ದರಿಂದ ಅನಿವಾರ್ಯವಾಗಿ ರಸ್ತೆಯಲ್ಲಿ ಚೆಲ್ಲುವಂತಾಗಿದೆ. ಆದರೆ ಈಗ ಜಾನುವಾರುಗಳಿಗೆ ಮೇವು ಉಣ್ಣಿಸಲು ಗ್ರಾಮಸ್ಥರು ಇದನ್ನು ಉಪಯೋಗಿಸುತ್ತಿದ್ದಾರೆ. ಹೂವು ಬೆಳೆದು ಮಾರುವುದನ್ನೇ ಜೀವನೋಪಾಯ ಮಾಡಿಕೊಂಡಿರುವ ನಮಗೆ ಇದೊಂದು ಮಾರಕ ಆಘಾತವಾಗಿದೆ ಎಂದು ಜಿಂದ್ ಜಿಲ್ಲೆಯ ಹೂವಿನ ಕೃಷಿಕ ಸುಖ್‌ದೇವ್ ಅಳಲು ತೋಡಿಕೊಂಡಿದ್ದಾರೆ.

ಅಹೀರ್ಕಾ ಗ್ರಾಮದಲ್ಲಿ ಪ್ರತೀ ವರ್ಷ ಒಂದು ಎಕ್ರೆ ಜಮೀನನ್ನು 50,000 ರೂ,ಗೆ ಲೀಸ್‌ಗೆ ಪಡೆದು ಸುಖ್‌ದೇವ್ ಅಲ್ಲಿ ಹೂವಿನ ಕೃಷಿ ಮಾಡುತ್ತಿದ್ದಾರೆ. ಪ್ರತೀ ವರ್ಷ ಎಲ್ಲಾ ಖರ್ಚು ತೆಗೆದು ಸುಮಾರು 30,000 ರೂ. ಲಾಭವಾಗುತ್ತದೆ. ಆದರೆ ಈ ವರ್ಷ ಲಾಕ್‌ಡೌನ್‌ನಿಂದ ಎಲ್ಲಾ ಶ್ರಮ ವ್ಯರ್ಥವಾಗಿದೆ. ಬೆಳೆ ಚೆನ್ನಾಗಿ ಬಂದರೂ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ ಎಂದವರು ಹೇಳಿದ್ದಾರೆ.

ಹರ್ಯಾಣದ ಜಿಂದ್ ಹಾಗೂ ಇತರ ಕೆಲವು ಜಿಲ್ಲೆಗಳು ಮಾರಿಗೋಲ್ಡ್, ಮಲ್ಲಿಗೆ, ಲಿಲಿ, ಗುಲಾಬಿ ಮತ್ತಿತರ ಹೂಗಳಿಗೆ ಹೆಸರಾಗಿದೆ. ರಾಜ್ಯದಲ್ಲಿ ಮಾತ್ರವಲ್ಲ ಪಂಜಾಬ್ ಹಾಗೂ ದಿಲ್ಲಿಯಲ್ಲೂ ಈ ಹೂಗಳಿಗೆ ವಿಪರೀತ ಬೇಡಿಕೆಯಿದೆ. ಹರ್ಯಾಣದಲ್ಲಿ ಬಹುತೇಕ ಹೂ ಬೆಳೆಗಾರರು ಸ್ವಂತ ಜಮೀನು ಹೊಂದಿರದಿದ್ದರೂ ಇತರ ಜಮೀನನ್ನು ಲೀಸ್‌ಗೆ ಪಡೆದು ಹೂ ಬೆಳೆಯುತ್ತಿದ್ದಾರೆ. ಲೀಸ್ ಮೊತ್ತ ಮುಂಗಡವಾಗಿ ನೀಡಬೇಕಿರುವುದರಿಂದ ಬಾಡಿಗೆ ವಿನಾಯಿತಿ ಸೌಲಭ್ಯ ಇವರಿಗೆ ಲಭಿಸುವುದಿಲ್ಲ.

ಪಂಜಾಬ್ ಮತ್ತು ಹರ್ಯಾಣದಲ್ಲಿ ಸಾಮಾನ್ಯವಾಗಿ ಗೋಧಿ ಬೆಳೆಯುತ್ತಾರೆ. ಆದರೆ ಭೂಮಿಯ ಫಲವತ್ತತೆ ಹೆಚ್ಚಬೇಕೆಂಬ ನಿಟ್ಟಿನಲ್ಲಿ ಸರಕಾರ ವೈವಿಧ್ಯಮಯ ಕೃಷಿಗೆ ಪ್ರೋತ್ಸಾಹ ನೀಡಿದೆ. ಆದ್ದರಿಂದ ನಾವು ಹೂವನ್ನು ಬೆಳೆಯಲು ಮುಂದಾಗಿದ್ದೇವೆ. ಪ್ರಧಾನ ಮಂತ್ರಿ ಹಾಗೂ ರಾಜ್ಯ ಸರಕಾರ ಹೂ ಬೆಳೆಗಾರರ ಸಮಸ್ಯೆಯನ್ನು ಅರಿತು ಅವರ ಹಿತಾಸಕ್ತಿ ರಕ್ಷಣೆಗೆ ಮುಂದಾಗಬೇಕು ಎಂದು ರಾಂಪಾಲ್ ಖಂಡೇಲಾ ಎಂಬ ರೈತ ಆಗ್ರಹಿಸಿದ್ದಾನೆ. ಹೂವಿನ ಮಾರುಕಟ್ಟೆಯಲ್ಲಿ ಅನಿಶ್ಚಿತತೆಯ ಪ್ರಮಾಣ ಹೆಚ್ಚಾಗಿರುವುದರಿಂದ ಮುಂದಿನ ದಿನದಲ್ಲಿ ರೈತರು ತರಕಾರಿ ಬೆಳೆಯಲು ನಿರ್ಧರಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X