Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ಭೀತಿ ನಡುವೆಯೂ ಬಿಬಿಎಂಪಿಯ ಪೌರ...

ಕೊರೋನ ಭೀತಿ ನಡುವೆಯೂ ಬಿಬಿಎಂಪಿಯ ಪೌರ ಕಾರ್ಮಿಕರಿಗಿಲ್ಲ ಆರೋಗ್ಯ ಭದ್ರತೆ !

-ಸಮೀರ್ ದಳಸನೂರು-ಸಮೀರ್ ದಳಸನೂರು1 April 2020 11:10 PM IST
share
ಕೊರೋನ ಭೀತಿ ನಡುವೆಯೂ ಬಿಬಿಎಂಪಿಯ ಪೌರ ಕಾರ್ಮಿಕರಿಗಿಲ್ಲ ಆರೋಗ್ಯ ಭದ್ರತೆ !

ಬೆಂಗಳೂರು, ಎ.1: ಕೊರೋನ ವೈರಸ್ ಜೀವ ಭಯದ ವಾತಾವರಣ ಸೃಷ್ಟಿ ಮಾಡಿದ್ದು, ಎಲ್ಲೆಡೆ ಲಾಕ್‍ಡೌನ್ ಆದೇಶ ಪಾಲನೆ ಆಗುತ್ತಿದೆ. ಅದರ ನಡುವೆಯೂ ಕೊರೋನ ಸೈನಿಕರೆಂದೇ ಪಾತ್ರರಾಗಿರುವ ಬಿಬಿಎಂಪಿಯ ಪೌರ ಕಾರ್ಮಿಕರು ಮಾತ್ರ ಸ್ವಚ್ಛತೆಯೇ ನಮ್ಮ ಉಸಿರು ಎಂಬ ಉದ್ದೇಶದಡಿ ಎಂದಿನಂತೆ ವಿವಿಧೆಡೆ ತೆರಳಿ ಕಸ, ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಮಾದರಿಯಾದರೂ, ಅವರಿಗೆ ಸೂಕ್ತ ರಕ್ಷಣೆ ಇಲ್ಲದೆ, ಅನಾರೋಗ್ಯಕರ ವಾತಾವರಣಕ್ಕೆ ನೂಕುವಂತೆ ಮಾಡಲಾಗಿದೆ.

ನಿತ್ಯ ಸ್ವಚ್ಛತಾ ಕಾರ್ಯಕ್ಕೆ ತೆರಳುವ ಮುನ್ನ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಕೊಡಬೇಕಾದ ಆರೋಗ್ಯ ಕವಚ ಇತರ ಅವಶ್ಯಕ ವಸ್ತು ಸಲಕರಣೆಗಳನ್ನು ಅವರಿಗೆ ಕೊಡುತ್ತಿಲ್ಲ. ಹೀಗಾಗಿ ಇಲ್ಲಿನ ಬಿಬಿಎಂಪಿ ಪೌರ ಕಾರ್ಮಿಕರ ಆರೋಗ್ಯಕ್ಕೆ ಯಾವುದೇ ಭದ್ರತೆ ಇಲ್ಲದಂತಾಗಿದೆ. ನಿಯಮದ ಪ್ರಕಾರ ಎಲ್ಲ ಕಾರ್ಮಿಕರಿಗೆ ಬೂಟು, ಕೈ ಕವಸುಗಳು ಮತ್ತು ಮಾಸ್ಕ್ ಗಳು ಕಡ್ಡಾಯವಾಗಿ ನೀಡುವುದು ಬಿಬಿಎಂಪಿಯ ಕರ್ತವ್ಯ. ಅಷ್ಟೇ ಅಲ್ಲದೆ, ಕೊರೋನ ವೈರಸ್‍ನಿಂದ ಮತ್ತಷ್ಟು ಭದ್ರತೆ ನೀಡುವುದು ಪ್ರಮುಖವಾಗಿದೆ. ಆದರೆ ಇವೆಲ್ಲ ನಿಯಮಗಳು ಗಾಳಿಗೆ ತೂರಿ ರಕ್ಷಣಾ ಕವಚಗಳು ನೀಡದೆ ಪೌರ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಾರೆ ಎಂದು ಪೌರ ಕಾರ್ಮಿಕರ ಮುಖಂಡರು ಆರೋಪಿಸಿದ್ದಾರೆ.

ಮಾಸ್ಕ್ ಬೇಕು: ನಗರದಲ್ಲಿ ಇದೀಗ ಹೆಚ್ಚಾಗಿ ಬಿಸಿಲು ಇದೆ. ಇದರಿಂದ ಧೂಳು ಹೆಚ್ಚಾಗಿದ್ದು, ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಎನ್-95 ಮಾಸ್ಕ್ ನೀಡಬೇಕು ಎನ್ನುವುದು ನಮ್ಮ ಮೊದಲ ಬೇಡಿಕೆ. ಆದರೆ, ಸಾಮಾನ್ಯ ಮಾಸ್ಕ್ ಕೆಲವರಿಗೆ ಮಾತ್ರ ಧಕ್ಕಿದ್ದು, ಉಳಿದವರು ಬಟ್ಟೆಯನ್ನೇ ಮುಖಕ್ಕೆ ಕಟ್ಟಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಛಿಸದ ಪೌರ ಕಾರ್ಮಿಕರೊಬ್ಬರು ಅಳಲು ತೊಡಿಕೊಂಡರು.

ರಾಜ್ಯದೆಲ್ಲೆಡೆಯೂ ಸೌಲಭ್ಯ ಕಗ್ಗಂಟು: ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ಕಡೆಗಳಲ್ಲಿಯೂ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗೇನೂ ಇಲ್ಲ. ಒಂದೊಂದು ಕಡೆಯೂ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಲೇ ಇದೆ. ಬಳ್ಳಾರಿ, ಕಲಬುರ್ಗಿ, ಶಿವಮೊಗ್ಗ, ವಿಜಯಪುರ, ತುಮಕೂರು, ಬೆಳಗಾವಿ, ಮೈಸೂರು, ದಾವಣಗೆರೆಗಳಲ್ಲಿಯೂ ಪೌರ ಕಾರ್ಮಿಕರ ಸಮಸ್ಯೆ ಜೀವಂತವಾಗಿದೆ.

ಇನ್ನು ಕೊರೋನ ವೈರಸ್ ಹರಡುತ್ತಿದ್ದು, ಪೌರ ಕಾರ್ಮಿಕರಲ್ಲೂ ಮತ್ತಷ್ಟು ಆತಂಕ ಮನೆ ಮಾಡಿದೆ. ಆದರೆ, ಸರಕಾರ ಮತ್ತು ಬಿಬಿಎಂಪಿ ಮಾತ್ರ ಪೌರ ಕಾರ್ಮಿಕರ ತುರ್ತು ಅಗತ್ಯಗಳತ್ತ ಗಮನ ಹರಿಸುತ್ತಿಲ್ಲ. ಸೂಕ್ತ ರಕ್ಷಣೆಯನ್ನೂ ನೀಡುತ್ತಿಲ್ಲ. ಸ್ವಲ್ಪ ದನಿ ಎತ್ತರಿಸಿ ಮಾತನಾಡಿದರೆ ಕೆಲಸಕ್ಕೇ ಸಂಚಕಾರ ಎಂದು ಪೌರಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.

ಸೌಲಭ್ಯ ಕಡ್ಡಾಯ ?

ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರಿಗೆ ಸುಮಾರು 22 ಸೌಲಭ್ಯಗಳನ್ನು ಒದಗಿಸಬೇಕು. ವಿಶ್ರಾಂತಿ ಗೃಹ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಪ್ರಥಮ ಚಿಕಿತ್ಸಾ ಸೌಲಭ್ಯ, ಶುಚಿತ್ವ ಸೌಲಭ್ಯ, ಸಮವಸ್ತ್ರ, ಹ್ಯಾಂಡ್ ಗ್ಲೋವ್ಸ್, ಟೋಪಿ, ರಬ್ಬರ್ ಬೂಟುಗಳು, ಚಪ್ಪಲಿ, ಫಿನೈಲ್ ಮತ್ತು ಬ್ಲೀಚಿಂಗ್ ಪೌಡರನ್ನು ಪಾಲಿಕೆಯಿಂದ ಒದಗಿಸಬೇಕು.

ನಮಗೂ ಭಯ ಇದೆ

ಕೊರೋನ ಸೋಂಕು ಸಂಬಂಧ ನಮ್ಮ ಬಡಾವಣೆ ಮತ್ತು ಮನೆಗಳಲ್ಲೂ ಆತಂಕ ಇದೆ. ಅನೇಕರು ತಾವು ಕೆಲಸಕ್ಕೆ ಹೋಗಬೇಡಿ ಎಂದು ಹೇಳುತ್ತಾರೆ. ಆದರೆ, ಸ್ವಚ್ಛತೆ ದೃಷ್ಟಿಯಿಂದ ನಾವು ಬೀದಿಗೆ ಬರುತ್ತೇವೆ. ಸರಕಾರ ನಮಗೆ ರಕ್ಷಣೆ ನೀಡಬೇಕು. ಜೊತೆಗೆ ಆರೋಗ್ಯ ವಿಮೆ ಘೋಷಿಸಬೇಕು ಎಂದು ಹೆಸರು ಹೇಳು ಇಚ್ಛಿಸದ ಪೌರ ಕಾರ್ಮಿಕರು ಆಗ್ರಹಿಸಿದ್ದಾರೆ.

share
-ಸಮೀರ್ ದಳಸನೂರು
-ಸಮೀರ್ ದಳಸನೂರು
Next Story
X