Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫುಕುಶಿಮಾ ತಲುಪಿದ ಒಲಿಂಪಿಕ್ಸ್ ಜ್ಯೋತಿ

ಫುಕುಶಿಮಾ ತಲುಪಿದ ಒಲಿಂಪಿಕ್ಸ್ ಜ್ಯೋತಿ

ವಾರ್ತಾಭಾರತಿವಾರ್ತಾಭಾರತಿ1 April 2020 11:42 PM IST
share
ಫುಕುಶಿಮಾ ತಲುಪಿದ ಒಲಿಂಪಿಕ್ಸ್ ಜ್ಯೋತಿ

ಫುಕುಶಿಮಾ, ಎ.1: ಟೋಕಿಯೊ 2020 ಒಲಿಂಪಿಕ್ಸ್ ಸಂಘಟಕರು ಬುಧವಾರ ಒಲಿಂಪಿಕ್ ಜ್ವಾಲೆಯನ್ನು ಫುಕುಶಿಮಾ ಸರಕಾರಕ್ಕೆ ಹಸ್ತಾಂತರಿಸಿದರು. ಕೊರೋನ ವೈರಸ್ ನಿಂದಾಗಿ ಏಕಾಏಕಿ ಕ್ರೀಡಾಕೂಟವನ್ನು ಒಂದು ವರ್ಷ ಮುಂದೂಡಲಾಗಿದ್ದು, ಪುಕುಶಿಮಾದಲ್ಲಿ ಒಂದು ತಿಂಗಳುಗಳ ಕಾಲ ಪ್ರದರ್ಶಿಸಲಾಗುವುದು.

ಫುಕುಶಿಮಾದ ಜೆ-ವಿಲೇಜ್ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಈ ಹಸ್ತಾಂತರ ಪ್ರಕ್ರಿಯೆ ನಡೆಯಿತು, ಇದನ್ನು ಮೂಲತಃ ಟಾರ್ಚ್ ರಿಲೇಯ ಪ್ರಾರಂಭದ ಹಂತವಾಗಿ ನಿಗದಿಪಡಿಸಲಾಗಿದೆ. ಟೋಕಿಯೊ 2020 ಸಿಒಒ ಯುಕಿಹಿಕೊ ನುನೊಮುರಾ ಮಾತ್ರ ಸಂಘಟನಾ ಸಮಿತಿ ಪರ ಉತ್ತರಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಕೊರೋನ ವೈರಸ್‌ನ್ನು ಜಯಿಸಿದ ನಂತರ ಟೋಕಿಯೊ 2020ರ ಒಲಿಂಪಿಕ್ಸ್ ನಡೆಯಲಿದೆ ಎಂದು ನುನೊಮುರಾ ಹೇಳಿದರು. ನಂತರ ನುನೊಮುರಾ ಒಲಿಂಪಿಕ್ಸ್ ಜ್ಯೋತಿಯನ್ನು ಫುಕುಶಿಮಾ ಮಕೋಟೊ ನೊಜಿಗೆ ಹಸ್ತಾಂತರಿಸಿದರು.

ಮುಂದಿನ ವರ್ಷ ಜೆ-ವಿಲೇಜ್‌ನಿಂದ ಒಲಿಂಪಿಕ್ಸ್ ಜ್ಯೋತಿಯ ನಿರ್ಗಮನವು ಯಾವುದೇ ತೊಂದರೆಗಳಿಲ್ಲದೆ ಸಾಗಲಿದೆ ಎಂದು ನಾನು ಬಲವಾಗಿ ನಂಬುತ್ತೇನೆ. ಇದು ಭರವಸೆಯ ಸಂಕೇತ - ನಾವು ಈಗ ಎದುರಿಸುತ್ತಿರುವ ಈ ಕೊರೋನ ವೈರಸ್ ರೋಗದಿಂದ ಜಪಾನ್ ಮಾತ್ರವಲ್ಲ ಇಡೀ ಜಗತ್ತು ಜಯಿಸಲಿದೆ ಎಂದು ನೊಜಿ ಹೇಳಿದರು.

ಟೋಕಿಯೊಗೆ ಸ್ಥಳಾಂತರಗೊಳ್ಳುವ ಮೊದಲು ಎಪ್ರಿಲ್ 30 ರ ವರೆಗೆ ಜ್ಯೋತಿಯು ಜೆ-ವಿಲೇಜ್‌ನಲ್ಲಿ ಪ್ರದರ್ಶನದಲ್ಲಿರುತ್ತದೆ. ಜಪಾನಿನ ರಾಜಧಾನಿಯಲ್ಲಿ ಅದನ್ನು ಎಲ್ಲಿ ಪ್ರದರ್ಶಿಸಲಾಗುವುದು ಎಂದು ಸಂಘಟಕರು ಇನ್ನೂ ನಿರ್ಧರಿಸಿಲ್ಲ.

ಕೊರೋನ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಕ್ರೀಡಾಕೂಟವನ್ನು ಮುಂದೂಡಲು ಒಪ್ಪುವ ಮೂಲಕ ಅಂತರ್‌ರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಮತ್ತು ಜಪಾನ್ ಸರಕಾರ ಕಳೆದ ವಾರ ವಿಶ್ವದ ಕ್ರೀಡಾಪಟುಗಳು ಮತ್ತು ಕ್ರೀಡಾ ಸಂಸ್ಥೆಗಳ ತೀವ್ರ ಒತ್ತಡಕ್ಕೆ ಮಣಿದಿತ್ತು. ಟೋಕಿಯೊ ಒಲಿಂಪಿಕ್ಸ್ ಈಗ ಜುಲೈ 23 ರಿಂದ ಆಗಸ್ಟ್ 8, 2021 ರವರೆಗೆ ನಿಗದಿಯಾಗಿದೆ.

121 ದಿನಗಳ ಕಾಲ ಒಲಿಂಪಿಕ್ಸ್ ಟಾರ್ಚ್ ರಿಲೇ ಜೆ-ವಿಲೇಜ್‌ನಿಂದ ಮಾರ್ಚ್ 26 ರಂದು ಪ್ರಾರಂಭವಾಗಲಿದೆ. ಜಪಾನ್‌ನಲ್ಲಿ 2011ರ ಭೂಕಂಪ ಮತ್ತು ಸುನಾಮಿಯ ನಂತರ ಜೆ-ವಿಲೇಜ್ ಪುನರ್‌ನಿರ್ಮಾಣದ ಸಂಕೇತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X