Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತಕ್ಕೆ ವೆಂಟಿಲೇಟರ್‌ಗಳ ಪೂರೈಕೆಗೆ...

ಭಾರತಕ್ಕೆ ವೆಂಟಿಲೇಟರ್‌ಗಳ ಪೂರೈಕೆಗೆ ಸಿದ್ಧ: ಚೀನಾ

ವಾರ್ತಾಭಾರತಿವಾರ್ತಾಭಾರತಿ2 April 2020 10:46 PM IST
share
ಭಾರತಕ್ಕೆ ವೆಂಟಿಲೇಟರ್‌ಗಳ ಪೂರೈಕೆಗೆ ಸಿದ್ಧ: ಚೀನಾ

ಹೊಸದಿಲ್ಲಿ, ಮಾ.21: ಆಂತರಿಕವಾಗಿಯೂ ಮತ್ತು ಭಾರತ ಸೇರಿದಂತೆ ಸಾಗರೋತ್ತರ ರಾಷ್ಟ್ರಗಳಲ್ಲಿ ಕೋವಿಡ್-19 ರೋಗಿಗಳಿಗೆ ವೆಂಟಿಲೇಟರ್‌ಗಳ ಪೂರೈಕೆಗಾಗಿ ತನಗೆ ಅಗಾಧ ಬೇಡಿಕೆಯಿದ್ದು, ಅವುಗಳನ್ನು ಪೂರೈಸಲು ತನ್ನ ತಯಾರಕರು ಸಂಪೂರ್ಣ ಸಾಮರ್ಥ್ಯದೊಂದಿಗೆ ಕೆಲಸ ಮಾಡುತ್ತಿದ್ದಾರೆ. ಆದರೆ ಈ ನಿಟ್ಟಿನಲ್ಲಿ ಇತರ ದೇಶಗಳ ನೆರವಿಗೆ ಧಾವಿಸಲು ತನಗೆ ತಕ್ಷಣವೇ ತನಗೆ ಸಾಧ್ಯವಾಗದು ಎಂದು ಅದು ಹೇಳಿದೆ.

ತಾನು ಉತ್ಪಾದಿಸುವ ವೆಂಟಿಲೇಟರ್‌ಗಳಿಗೆ ಅಗಾಧವಾದ ಬೇಡಿಕೆಯಿರುವ ಜೊತೆಗೆ, ತನ್ನ ದೇಶದಲ್ಲಿಯೂ ಹೊಸದಾಗಿ ಕೊರೋನ ವೈರಸ್ ಸೋಂಕು ಹರಡದಂತೆ ತಡೆಗಟ್ಟುವ ಒತ್ತಡನ್ನು ಕೂಡಾ ಎದುರಿಸುತ್ತಿರುವುದಾಗಿ ಚೀನಾ ಸರಕಾರ ತಿಳಿಸಿದೆ.

ಆದಾಗ್ಯೂ ತನ್ನ ಎಲ್ಲಾ ಸಾಮರ್ಥ್ಯವನ್ನು ಬಳಸಿಕೊಂಡು ಈ ಮಾರಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಬೆಂಬಲ ನೀಡುವುದಾಗಿ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನಿಂಗ್ ತಿಳಿಸಿದ್ದಾರೆ.

ಬೀಜಿಂಗ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ವೆಂಟಿಲೇಟರ್ ಹಾಗೂ ಮತ್ತಿತರ ಉಪಕರಣಗಳನ್ನು ಉತ್ಪಾದಿಸಲು ಚೀನಿ ತಯಾರಕರು ಹಗಳಿರುಳು ಪೂರ್ಣ ಪ್ರಮಾಣದ ಸಾಮರ್ಥ್ಯದೊಂದಿಗೆ ಕೆಲಸ ಮಾಡುತ್ತಿದ್ದಾರೆ. ನಾವು ಭಾರತ ಸೇರಿದಂತೆ ಇತರ ರಾಷ್ಟ್ರಗಳಿಗೆ ಇವುಗಳನ್ನು ಒದಗಿಸಬಲ್ಲೆವು’’ ಎಂದವರು ಹೇಳಿದ್ದಾರೆ.

ಆದರೆ ಈ ಸೋಂಕು ರೋಗ ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡಿರುವುದನ್ನು ಗಮನಿಸಿದಲ್ಲಿ ಅಷ್ಟೊಂದು ಬೃಹತ್ ಪ್ರಮಾಣದಲ್ಲಿ ವೆಂಟಿಲೇಟರ್‌ಗಳನ್ನು ಉತ್ಪಾದಿಸುವುದು ಸುಲಭವಲ್ಲ. ಹಾಗೆಯೆ ಎಲ್ಲಾ ಬೇಡಿಕೆಗಳನ್ನು ತಕ್ಷಣವೇ ಪೂರೈಸುವುದು ಕೂಡಾ ಅಸಾಧ್ಯವೆಂದು ವಕ್ತಾರರು ಹೇಳಿದರು.

‘‘ಜಾಗತಿಕ ಪೂರೈಕೆ ಸರಪಣಿಯು ಮುಕ್ತ,ಸ್ಥಿರ ಹಾಗೂ ಸುಭದ್ರವಾಗಿರುವದನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಎಲ್ಲಾ ದೇಶಗಳು ಜೊತೆಯಾಗಿ ಶ್ರಮಿಸಲಿವೆಯೆಂದು ನಾವು ಆಶಿಸುತ್ತೇವೆ. ಚುಟುಕಾಗಿ ಹೇಳುವುದಾದರೆ, ನಾವು ನಮಗೆ ಸಾಧ್ಯವಿರುವಷ್ಟು ಸಾಮರ್ಥ್ಯದೊಂದಿಗೆ ಭಾರತಕ್ಕೆ ನೆರವು ಹಾಗೂ ಬೆಂಬಲ ಮುಂದುವರಿಸಲು ಸಿದ್ಧರಿದ್ದೇವೆ ’’ ಎಂದು ಹುವಾ ಚುನಿಂಗ್ ತಿಳಿಸಿದ್ದಾರೆ.

ಕೊರೋನ ವೈರಸ್ ರೋಗಿಗಳು ತೀವ್ರವಾದ ಉಸಿರಾಟದ ತೊಂದರೆ ಅನುಭವಿಸುವುದರಿಂದ ಅವರನ್ನು ವೆಂಟಿಲೇಟರ್ ವ್ಯವಸ್ಥೆಯಲ್ಲಿರಿಸಬೇಕಾಗುತ್ತದೆ. ಭಾರತದಲ್ಲಿ ಈಗ ಕೇವಲ 40 ಸಾವಿರ ವೆಂಟಿಲೇಟರ್‌ಗಳು ಮಾತ್ರವೇ ಕಾರ್ಯನಿರ್ವಹಿಸುತ್ತವೆ. ಆದರೆ ಒಂದು ವೇಳೆ ಕೊರೋನ ವೈರಸ್ ಪೀಡಿತರ ಸಂಖ್ಯೆಯಲ್ಲಿ ಅಗಾಧ ಏರಿಕೆಯಾದಲ್ಲಿ , ದೇಶದಲ್ಲಿರುವ ವೆಂಟಿಲೇಟರ್‌ಗಳು ಎಷ್ಟು ಮಾತ್ರಕ್ಕೂ ಸಾಕಾಲಾಗರದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಈವರೆಗೆ 1195 ಕೊರೋನ ವೈರಸ್ ಪ್ರಕರಣಗಳು ವರದಿಯಾಗಿದ್ದು, ಕನಿಷ್ಠ 50 ಮಂದಿ ಈ ಸೋಂಕಿಗೆ ಬಲಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X