Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಥಳಾಂತರವಾಗದ ಹಣ್ಣು-ತರಕಾರಿ ಸಗಟು...

ಸ್ಥಳಾಂತರವಾಗದ ಹಣ್ಣು-ತರಕಾರಿ ಸಗಟು ವ್ಯಾಪಾರ: ಬೈಕಂಪಾಡಿಯ ಎಪಿಎಂಸಿ ಖಾಲಿ ಖಾಲಿ

ಎ.14ರವರೆಗೆ ವ್ಯಾಪಾರ ಸ್ಥಗಿತಗೊಳಿಸಲು ವ್ಯಾಪಾರಸ್ಥರ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ3 April 2020 1:08 PM IST
share
ಸ್ಥಳಾಂತರವಾಗದ ಹಣ್ಣು-ತರಕಾರಿ ಸಗಟು ವ್ಯಾಪಾರ: ಬೈಕಂಪಾಡಿಯ ಎಪಿಎಂಸಿ ಖಾಲಿ ಖಾಲಿ

ಮಂಗಳೂರು, ಎ.3: ಕಳೆದ ಎರಡು ದಿನಗಳ ಹಿಂದೆ, ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯಲ್ಲಿ ರಾತ್ರಿ 11ರಿಂದ 4 ಗಂಟೆಯವರೆಗೆ ಸಗಟು ವ್ಯಾಪಾರಸ್ಥರು ರಿಟೇಲ್ ವ್ಯಾಪಾರಸ್ಥರಿಗೆ ತರಕಾರಿ ಹಾಗೂ ಹಣ್ಣು ಹಂಪಲು ಮಾರಾಟಕ್ಕೆ ಅವಕಾಶವನ್ನು ಜಿಲ್ಲಾಡಳಿತ ಕಲ್ಪಿಸಿತ್ತು. ಆದರೆ ಬುಧವಾರ ರಾತ್ರಿ ಸೆಂಟ್ರಲ್ ಮಾರುಕಟ್ಟೆಯಲ್ಲಿ ಖರೀದಿಗಾಗಿ ವ್ಯಾಪಾರಸ್ಥರು ಅಧಿಕ ಸಂಖ್ಯೆಯಲ್ಲಿ ಸೇರಿದ್ದ ಕಾರಣ ಮುಂಜಾಗೃತಾ ಕ್ರಮವಾಗಿ ಹಣ್ಣು ಹಾಗೂ ತರಕಾರಿ ಸಗಟು ವ್ಯಾಪಾರವನ್ನು ಬೈಕಂಪಾಡಿಯ ಎಪಿಎಂಸಿಗೆ ಜಿಲ್ಲಾಧಿಕಾರಿ ಸ್ಥಳಾಂತರಿಸಿ ಆದೇಶಿಸಿದ್ದರು.

ಆದರೆ ಇಂದು ಸಗಟು ವ್ಯಾಪಾರಸ್ಥರು ಅಲ್ಲಿ ಯಾವುದೇ ವ್ಯವಹಾರ- ವ್ಯಾಪಾರವನ್ನು ಆರಂಭಿಸಿಲ್ಲ. ಯಾವುದೇ ರೀತಿಯ ಚಟುವಟಿಕೆಗಳು ಅಲ್ಲಿ ಇನ್ನೂ ಆರಂಭವಾಗಿಲ್ಲ. ಅಲ್ಲಿ ಸೂಕ್ತ ವ್ಯವಸ್ಥೆ ಇಲ್ಲದಿರುವುದು ಹಾಗೂ ಅದು ನಗರಕ್ಕೆ ಸಾಕಷ್ಟು ದೂರವಿರುವುದರಿಂದ ಅಲ್ಲಿಗೆ ರಿಟೇಲ್ ವ್ಯಾಪಾರಸ್ಥರು ಬರಲಾರರು ಎಂಬ ಕಾರಣಕ್ಕೆ ಸಗಟು ವ್ಯಾಪಾರಸ್ಥರು ಸದ್ಯ ಅಲ್ಲಿ ವ್ಯಾಪಾರಕ್ಕೆ ಹಿಂದೇಟು ಹಾಕಿದ್ದಾರೆ.

‘‘ಎಪಿಎಂಸಿಗೆ ನಮ್ಮ ವ್ಯಾಪಾರವನ್ನು ಸ್ಥಳಾಂತರಿಸುವ ಆಲೋಚನೆ ಅಥವಾ ತರಾತುರಿ ಇಲ್ಲ. ಸದ್ಯ ನಾವು ಅಲ್ಲಿಗೆ ಹೋಗದಿರಲು ನಿರ್ಧರಿಸಿದ್ದೇವೆ. ಈ ಬಗ್ಗೆ ಇಂದು ಮಧ್ಯಾಹ್ನ 1 ಗಂಟೆಗೆ ಮತ್ತೆ ಸ್ಥಳೀಯ ಶಾಸಕರನ್ನು ಒಳಗೊಂಡು ವ್ಯಾಪಾರಸ್ಥರ ಸಭೆ ಕರೆಯಲಾಗಿದೆ. ಸಗಟು ವ್ಯಾಪಾರಸ್ಥರು ಸದ್ಯ ಅಲ್ಲಿಗೆ ವ್ಯಾಪಾರ ಸ್ಥಳಾಂತರಿಸದೆ, ಪ್ರಧಾನಿ ನರೇಂದ್ರ ಮೋದಿಯವರು ಕೊರೋನ ನಿಯಂತ್ರಣಕ್ಕೆ ಸಂಬಂಧಿಸಿ ಲಾಕ್‌ಡೌನ್ ಘೋಷಿಸಿದ್ದಾರೆ. ಅದಕ್ಕೆ ಬದ್ಧರಾಗಿ ಎ. 14ರವರವರೆಗೆ ಸದ್ಯ ನಾವು ವ್ಯಾಪಾರವನ್ನೇ ನಿಲ್ಲಿಸಿ ಮನೆಯಲ್ಲಿರಲು ನಿರ್ಧರಿಸಿದ್ದೇವೆ. ಸಭೆಯಲ್ಲಿ ಯಾವ ತೀರ್ಮಾನ ಆಗುತ್ತದೆ ನೋಡೋಣ’’ ಎಂದು ಸೆಂಟ್ರಲ್ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮುಹಮ್ಮದ್ ಕುಂಞಿ ವಾರ್ತಾಭಾರತಿ ಪ್ರತಿನಿಧಿಯ ಕರೆಗೆ ಪ್ರತಿಕ್ರಿಯಿಸಿದ್ದಾರೆ.

‘‘ಮಂಗಳೂರಿನಿಂದ ಬೈಕಂಪಾಡಿಗೆ ರಿಟೇಲ್ ವ್ಯಾಪಾರಸ್ಥರು ಬರಲು ಒಪ್ಪುವುದಿಲ್ಲ. ಅದು ಬಹಳಷ್ಟು ದೂರವಿರುವುದರಿಂದ ಅವರು ಅಲ್ಲಿಗೆ ಬರಲಾರರು. ಈ ಬಗ್ಗೆ ನಾವು ನಿನ್ನೆಯೇ ಸಂಬಂಧಪಟ್ಟವರಿಗೆ ತಿಳಿಸಿದ್ದೇವೆ. ಈ ಹಿಂದೆಯೂ ವ್ಯಾಪಾರವನ್ನು ಎಪಿಎಂಸಿಗೆ ಸ್ಥಳಾಂತರಿಸಲು ನಿರ್ಧರಿಸಲಾಗಿತ್ತು. ಆಗಲೂ ಯಾರೂ ಹೋಗಲು ಒಪ್ಪಿರಲಿಲ್ಲ. ಮುಖ್ಯವಾಗಿ ಅದು ಕೈಗಾರಿಕಾ ವಲಯ. ಆ ಪ್ರದೇಶ ಹಣ್ಣು ತರಕಾರಿ ತಾಜಾವಾಗಿ ಇರಿಸಲು ಸೂಕ್ತವಾದ ಪ್ರದೇಶ ಅಲ್ಲದಿರುವುದೂ ಇದಕ್ಕೊಂದು ಕಾರಣವಾಗಿದೆ. ಅದಕ್ಕಾಗಿ ನಾವು ನಮ್ಮ ಕಾರ್ಯವನ್ನೇ ಸ್ಥಗಿತಗೊಳಿಸುವುದಾಗಿ ಸಂದೇಶ ನೀಡಿದ್ದೇವೆ. ಈಗಾಗಲೇ ಇದ್ದ ತರಕಾರಿ, ಹಣ್ಣು ಹಂಪಲುಗಳನ್ನು ಮಾರಾಟ ಮಾಡಲಾಗಿದ್ದು, ಅದನ್ನು ರಿಟೇಲ್ ವ್ಯಾಪಾರಸ್ಥರು ಜನರಿಗೆ ತಲುಪಿಸುವ ಕಾರ್ಯ ಮಾಡಿದ್ದಾರೆಂಬುದು ನಮ್ಮ ಅನಿಸಿಕೆ’’ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X