Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸಂದೇಶದಲ್ಲಿ ‘9’ ಸಂಖ್ಯೆಯ...

ಮೋದಿ ಸಂದೇಶದಲ್ಲಿ ‘9’ ಸಂಖ್ಯೆಯ ಸಿದ್ಧಾಂತಕ್ಕೆ ತರೂರ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ3 April 2020 10:11 PM IST
share
ಮೋದಿ ಸಂದೇಶದಲ್ಲಿ ‘9’ ಸಂಖ್ಯೆಯ ಸಿದ್ಧಾಂತಕ್ಕೆ ತರೂರ್ ಟೀಕೆ

ಹೊಸದಿಲ್ಲಿ, ಎ.3: ಪ್ರಧಾನಿ ಮೋದಿ ಸಂದೇಶದ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಹಿಂದೂ ಧರ್ಮದಲ್ಲಿ 9 ಸಂಖ್ಯೆಗಿರುವ ಶುಭ ಅಂಶಗಳ ಬಗ್ಗೆ ಚರ್ಚೆಗಳು ಆರಂಭವಾಗಿರುವಂತೆಯೇ ಈ ಬಗ್ಗೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

“ಎಪ್ರಿಲ್ 5ರಂದು ರಾತ್ರಿ 9 ಗಂಟೆಗೆ, 9 ನಿಮಿಷ ದೀಪ ಉರಿಸಿ ಎಂದು ಪ್ರಧಾನಿ ಹೇಳಿದ್ದಾರೆ. ಎಪ್ರಿಲ್ ಎಂದರೆ ನಾಲ್ಕನೇ ತಿಂಗಳು. ನಾಲ್ಕನೇ ತಿಂಗಳಿನ ಐದನೇ ದಿನವನ್ನು ಕೂಡಿಸಿದರೆ 9 ಆಗುತ್ತದೆ. ರಾಮನವಮಿಯಂದು ಪ್ರಧಾನಿ ಮೋದಿ ಸಂದೇಶ ನೀಡಿದ್ದಾರೆ. ಇದು ಆಕಸ್ಮಿಕ ಘಟನೆಯಲ್ಲ. ಬಹುಷಃ ಅವರು ನಂಬರ್ 9 ಮತ್ತು ಹಿಂದು ಧರ್ಮದ ನಡುವೆ ಇರುವ ಶುಭ ಸಂಗತಿಗಳನ್ನು ಆಚರಣೆಗೆ ತರುತ್ತಿದ್ದಾರೆ. ಮತ್ತೆ ರಾಮನ ಬಳಿಗೆ ?( ಬ್ಯಾಕ್ ಟು ರಾಮ್ ಭರೋಸೆ ?)” ಎಂದು ತರೂರ್ ಟ್ವೀಟ್ ಮಾಡಿದ್ದಾರೆ.

ಅಲ್ಲದೆ ಪ್ರಧಾನಿಯವರ ಸಂದೇಶದ ಬಗ್ಗೆ ಟೀಕಿಸಿರುವ ತರೂರ್, “ಪ್ರಧಾನ ಶೋಮ್ಯಾನ್‌ರ ಸಂದೇಶವನ್ನು ಆಲಿಸಿದೆ. ಜನತೆ ಎದುರಿಸುತ್ತಿರುವ ನೋವು, ಸಂಕಷ್ಟ, ತೊಂದರೆ, ಆರ್ಥಿಕ ಸಮಸ್ಯೆಗಳಿಗೆ ಸಮಾಧಾನ ನೀಡುವ ಯಾವ ಅಂಶವೂ ಇದರಲ್ಲಿಲ್ಲ. ಲಾಕ್‌ಡೌನ್ ಬಳಿಕದ ಪರಿಸ್ಥಿತಿಯನ್ನು ನಿಭಾಯಿಸುವ ಕುರಿತ ಯಾವುದೇ ದೂರದೃಷ್ಟಿಯಿಲ್ಲ. ಇದು ಭಾರತದ ಫೊಟೊ-ಅಪ್(ಸುಯೋಗದ) ಪ್ರಧಾನಿ ಪ್ರದರ್ಶಿಸಿದ ಒಂದು ಒಳ್ಳೆಯ ಕ್ಷಣವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ತರೂರ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಹಲವರು, ರಾಮನವಮಿ ಎಂದರೆ ರಾಮ ಹುಟ್ಟಿದ 9ನೇ ದಿನ. ಅದು ಗುರುವಾರಕ್ಕೆ ಮುಗಿದಿದೆ. ಇವತ್ತು ಶುಕ್ರವಾರ ಎಂದು ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X