Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನ ವಿರುದ್ಧದ ಕ್ರಮಗಳು ಅಸಮಾನತೆಗಳಿಗೆ...

ಕೊರೋನ ವಿರುದ್ಧದ ಕ್ರಮಗಳು ಅಸಮಾನತೆಗಳಿಗೆ ಕಾರಣವಾಗಬಾರದು: ವಲಸೆ ಕಾರ್ಮಿಕರ ಬವಣೆ ಕುರಿತು ವಿಶ್ವಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ3 April 2020 10:55 PM IST
share
ಕೊರೋನ ವಿರುದ್ಧದ ಕ್ರಮಗಳು ಅಸಮಾನತೆಗಳಿಗೆ ಕಾರಣವಾಗಬಾರದು: ವಲಸೆ ಕಾರ್ಮಿಕರ ಬವಣೆ ಕುರಿತು ವಿಶ್ವಸಂಸ್ಥೆ

ವಿಶ್ವಸಂಸ್ಥೆ, ಎ.3: ಕೊರೋನ ವೈರಸ್ ಸೋಂಕು ಹರಡುವುದನ್ನು ತಡೆಯಲು ದೇಶಾದ್ಯಂತ 21 ದಿನಗಳ ಲಾಕ್‌ಡೌನ್ ಹೇರಿದ ಬಳಿಕ ಭಾರತದಲ್ಲಿ ವಲಸೆ ಕಾರ್ಮಿಕರ ಸಾಮೂಹಿಕ ನಿರ್ಗಮನದ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ರಾಯಭಾರಿ ಮಿಶೆಲ್ ಬ್ಯಾಚೆಲೆಟ್ ಅವರು ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಕಾರ್ಮಿಕರ ಬವಣೆಯನ್ನು ಕಂಡು ತನಗೆ ನೋವುಂಟಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತದ ಬೃಹತ್ ಜನಸಂಖ್ಯೆ ಮತ್ತು ಅದರ ಸಾಂದ್ರತೆಯನ್ನು ಪರಿಗಣಿಸಿದರೆ ದೇಶದಲ್ಲಿ ಲಾಕ್‌ಡೌನ್ ನಿರ್ವಹಣೆ ಮತ್ತು ಅನುಷ್ಠಾನ ಭಾರೀ ಸವಾಲು ಆಗಿದೆ. ಇದು ಕೊರೋನ ವೈರಸ್ ಹರಡುವಿಕೆಯನ್ನು ತಡೆಯುತ್ತದೆ ಎಂದು ನಾವು ಆಶಿಸಿದ್ದೇವೆ ಎಂದು ಹೇಳಿಕೆಯೊಂದರಲ್ಲಿ ತಿಳಿಸಿರುವ ಬ್ಯಾಚೆಲೆಟ್,ಆದರೆ ಕೊರೋನ ವೈರಸ್ ವಿರುದ್ಧದ ಕ್ರಮಗಳು ನಿಷ್ಪಕ್ಷಪಾತವಾಗಿ ಅನ್ವಯವಾಗುವಂತೆ ಹಾಗೂ ಈಗಿರುವ ಅಸಮಾನತೆಗಳು ಮತ್ತು ದೌರ್ಬಲ್ಯಗಳನ್ನು ಇನ್ನಷ್ಟು ಹೆಚ್ಚಿಸದಂತೆ ನೋಡಿಕೊಳ್ಳುವುದು ಸರಕಾರದ ಪಾಲಿಗೆ ಅನಿವಾರ್ಯವಾಗಿದೆ ಎಂದಿದ್ದಾರೆ.

ವಲಸಿಗರ ನಿರ್ಗಮನ ಕುರಿತು ತನ್ನ ತೀರ್ಪಿನಲ್ಲಿ ಸರ್ವೋಚ್ಚ ನ್ಯಾಯಾಲಯವು ಎಲ್ಲ ಕಾರ್ಮಿಕರಿಗೆ ಆಹಾರ,ನೀರು ಮತ್ತು ವಸತಿ ಒದಗಿಸುವಂತೆ ಸರಕಾರಕ್ಕೆ ನೀಡಿರುವ ನಿರ್ದೇಶವು ಈ ವಲಸೆ ಕಾರ್ಮಿಕರ ಸುರಕ್ಷತೆ ಮತ್ತು ಹಕ್ಕುಗಳನ್ನು ಖಚಿತಪಡಿಸುವಲ್ಲಿ ಪರಿಣಾಮಕಾರಿ ಪಾತ್ರ ವಹಿಸಲಿದೆ ಎಂದಿರುವ ಅವರು,ಇಂತಹ ಹೆಚ್ಚಿನವರ ಬದುಕುಗಳು ದಿಢೀರ‌ನೆ ಸಂಕಷ್ಟದ ಸುಳಿಯಲ್ಲಿ ಸಿಲುಕಿವೆ ಮತ್ತು ಅವರು ಅತ್ಯಂತ ಅನಿಶ್ಚಿತ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿದ್ದಾರೆ.

ಲಾಕ್‌ಡೌನ್ ಸಂದರ್ಭದಲ್ಲಿ ಜನರ ಅನುಕೂಲಕ್ಕಾಗಿ ಬೃಹತ್ ಪ್ರಮಾಣದಲ್ಲಿ ಆಹಾರ ಸಾಮಗ್ರಿಗಳ ವಿತರಣೆ,ನೌಕರರಿಗೆ ರಜಾದಿನಗಳಲ್ಲಿ ವೇತನ ನೀಡುವಂತೆ ಎಲ್ಲ ಉದ್ಯೋಗದಾತರಿಗೆ ನಿರ್ದೇಶ ಇತ್ಯಾದಿ ಮಹತ್ವದ ಕ್ರಮಗಳನ್ನು ಸರಕಾರವು ತೆಗೆದುಕೊಂಡಿದೆಯಾದರೂ,ಮಾನವ ದುರಂತವು ನಮ್ಮ ಕಣ್ಣೆದುರಿಗೇ ಬಿಚ್ಚಿಕೊಳ್ಳುವುದು ಮುಂದುವರಿದಿರುವುದರಿಂದ ಇನ್ನಷ್ಟು ಕ್ರಮಗಳು ಅಗತ್ಯವಾಗಿವೆ ಎಂದು ಬ್ಯಾಚೆಲೆಟ್ ಹೇಳಿದ್ದಾರೆ. ಆರ್ಥಿಕ ಸಂಕಷ್ಟ ಮತ್ತು ಸಾಂಕ್ರಾಮಿಕ ಪಿಡುಗಿನ ದುಷ್ಪರಿಣಾಮ ಕ್ಕೊಳಗಾಗಿರುವ ವಲಸಿಗ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ವಿಶೇಷ ಕ್ರಮಗಳನ್ನು ರೂಪಿಸುವಂತೆ ಭಾರತವನ್ನು ಆಗ್ರಹಿಸಿರುವ ಅವರು,ಜನರಿಗೆ ಪರಿಹಾರಗಳನ್ನೊದಗಿಸಲು ಸರಕಾರವು ನಾಗರಿಕ ಸಮಾಜದೊಂದಿಗೆ ಸೇರಿ ಶ್ರಮಿಸಬೇಕು ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X