Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಾಕ್‍ಡೌನ್ ಎಫೆಕ್ಟ್:...

ಲಾಕ್‍ಡೌನ್ ಎಫೆಕ್ಟ್: ಕಾರ್ಮಿಕರು-ನಿರಾಶ್ರಿತರಿಗೆ ನಿತ್ಯ ತೊಡುವ ಬಟ್ಟೆಗಳ ಸಮಸ್ಯೆ

ವಾರ್ತಾಭಾರತಿವಾರ್ತಾಭಾರತಿ4 April 2020 11:05 PM IST
share

ಬೆಂಗಳೂರು, ಎ.4: ಲಾಕ್‍ಡೌನ್ ಪರಿಣಾಮದಿಂದ ತುತ್ತು ಅನ್ನಕ್ಕೂ ಪರಿತಪಿಸಿ ಬಿಬಿಎಂಪಿ ಆರಂಭಿಸಿರುವ ಕೇಂದ್ರಗಳಲ್ಲಿ ನೆಲೆಸಿರುವ ವಲಸೆ ಕಾರ್ಮಿಕರು-ನಿರಾಶ್ರಿತರಿಗೆ ನಿತ್ಯ ತೊಡುವ ಬಟ್ಟೆಗಳ ಸಮಸ್ಯೆ ಎದುರಾಗಿದೆ.

ಹರಿದ ಚಿಂದಿಯಾಗಿರುವ ತೊಟ್ಟ ಬಟ್ಟೆಯಲ್ಲೇ ದಿನ ದೂಡುವಂತಾಗಿದೆ. ಲೌಕ್‍ಡೌನ್ ಕಾರ್ಮಿಕರು ಹಾಗೂ ನಿರಾಶ್ರಿತರ ಮೇಲೆ ನೇರ ಪರಿಣಾಮ ಬೀರಿದ್ದು, ಅಂದು ದುಡಿದ ಹಣದಲ್ಲೇ ಜೀವನ ಸಾಗಿಸುತ್ತಿದ್ದವರ ಬದುಕು ಸಂಪೂರ್ಣ ಬೀದಿಗೆ ಬಂದಿತ್ತು. ಒಪ್ಪೊತ್ತಿನ ಊಟಕ್ಕೂ ಪರಿತಪಿಸಬೇಕಾಗಿತ್ತು. ಇದೀಗ ಬಿಬಿಎಂಪಿ ಹಾಗೂ ಜಿಲ್ಲಾಡಳಿತ 200ಕ್ಕೂ ಹೆಚ್ಚು ತಾತ್ಕಾಲಿಕವಾಗಿ ಆಶ್ರಯ ಕೇಂದ್ರಗಳನ್ನು ಆರಂಭಿಸಿ ಅವರೆಲ್ಲರಿಗೂ ವಸತಿ ವ್ಯವಸ್ಥೆ ಕಲ್ಪಿಸಿದ್ದು, ಅಲ್ಲಿ ಉಪಾಹಾರ, ಎರಡೊತ್ತು ಆಹಾರ ಕಲ್ಪಿಸಲಾಗುತ್ತಿದೆ.

ಕಳೆದ ಮಾ.25ರಂದು ಆರಂಭವಾದ ಈ ಕೇಂದ್ರದಲ್ಲಿ ಸುಮಾರು ನಿರಾಶ್ರಿತರಿಗೆ ಆಶ್ರಯ ನೀಡಲಾಗಿದ್ದು, ಸ್ಥಳೀಯ ಸಂಘ-ಸಂಸ್ಥೆಗಳು ನಿತ್ಯವೂ ಆಹಾರ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದಾರೆ.

ಮಾ.29ರಿಂದ ವಲಸೆ ಹಾಗೂ ಕೂಲಿ ಕಾರ್ಮಿಕರಿಗೂ ಕೇಂದ್ರಗಳನ್ನು ಆರಂಭಿಸಲಾಗಿದ್ದು, 200 ಕೇಂದ್ರಗಳಲ್ಲಿ 20 ಸಾವಿರಕ್ಕೂ ಅಧಿಕ ಕಾರ್ಮಿಕರು ಹಾಗೂ ನಿರಾಶ್ರಿತರಿ ಆಶ್ರಯ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಆಶ್ರಯ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಸ್ಕಾನ್‍ನ ಅಕ್ಷಯ ಪಾತ್ರೆಯಿಂದ ಉಪಾಹಾರ ಹಾಗೂ ಊಟದ ವ್ಯವಸ್ಥೆ ಮಾಡಲಾಗುತ್ತಿದೆ.

ಆಶ್ರಯ ಮತ್ತು ಆಹಾರದೊಂದಿಗೆ ಸ್ವಚ್ಛತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಬಿಬಿಎಂಪಿ ಒಂದು ಟವೆಲ್, ಬಟ್ಟೆ ಹಾಗೂ ಮೈ ಸಾಬೂನು, ಟೂತ್ ಪೇಸ್ಟ್, ಬ್ರಶ್ ಇರುವ ಕಿಟ್ ನೀಡುತ್ತಿದೆ. ಆದರೆ ಆಶ್ರಯ ಪಡೆದ ಕಾರ್ಮಿಕರಿಗೆ ದಿನನಿತ್ಯ ಧರಿಸುವ ಬಟ್ಟೆಗಳದ್ದೇ ಸಮಸ್ಯೆಯಾಗಿ ಪರಿಣಮಿಸಿದ್ದು, ದಿನ ಕಳೆದಂತೆ ಇದು ಮತ್ತಷ್ಟು ಹೆಚ್ಚಲಿದೆ.

ದಾನಿಗಳಿಂದ ನಿರೀಕ್ಷೆ: ತೊಟ್ಟ ಬಟ್ಟೆಯಲ್ಲಿ ಬಂದು ಕೇಂದ್ರಗಳಲ್ಲಿ ಆಶ್ರಯ ಪಡೆದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಬೆಳಗ್ಗೆ ತೊಟ್ಟ ಬಟ್ಟೆಯನ್ನು ತೊಳೆದು ಹಾಕಿ ಒಣಗಿದ ಮೇಲೆ ಪುನಃ ಅವುಗಳನ್ನು ಧರಿಸಿ ದಿನ ಕಳೆಯುತ್ತಿದ್ದಾರೆ. ಮಹಿಳೆಯರ ಪಾಡಂತೂ ಹೇಳತೀರದು. ಮಕ್ಕಳಂತೂ ಮಾಸಿದ ಒಂದೇ ಬಟ್ಟೆಯಲ್ಲಿ ಇದ್ದಾರೆ. ಕೇಂದ್ರಗಳಿಗೆ ಸೇರುವ ಮುನ್ನ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಲಾಗಿದೆ. ಕೋವಿಡ್ 19 ಹಿನ್ನೆಲೆಯಲ್ಲಿ ಥರ್ಮಲ್ ಸ್ಕ್ಯಾನಿಂಗ್‍ಗೆ ಒಳಪಡಿಸಿ ಪ್ರತಿಯೊಬ್ಬರ ಮಾಹಿತಿ ಸಂಗ್ರಹಿಸಲಾಗಿದೆ.

ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ತೋರಬೇಕಾಗಿದೆ. ಹೀಗಾಗಿ ಆರೋಗ್ಯ ಇಲಾಖೆಯ ತಂಡ ರಚಿಸಿ ಕನಿಷ್ಠ ಎರಡು ದಿನಕ್ಕೊಮ್ಮೆಯಾದರೂ ಪ್ರತಿಯೊಂದು ಕೇಂದ್ರಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡುವ ಕಡೆಗೆ ಗಮನ ಹರಿಸಬೇಕಾಗಿದೆ.

ಅಗತ್ಯ ಸೌಲಭ್ಯ: ಆಶ್ರಯ ಕೇಂದ್ರಗಳಲ್ಲಿ ಪ್ರಮುಖವಾಗಿ ಅಂತರ ಕಾಯ್ದುಕೊಳ್ಳುವುದಕ್ಕೆ ಪ್ರಮುಖ ಒತ್ತು ನೀಡಲಾಗಿದೆ. ಕಾಲ ಕಾಲಕ್ಕೆ ಉಪಾಹಾರ, ಊಟವನ್ನು ಪ್ಯಾಕೆಟ್ ಮೂಲಕ ವಿತರಿಸಲಾಗುತ್ತಿದೆ. ಅಕ್ಕಿ ಬೇಳೆ, ಸಕ್ಕರೆ, ಉಪ್ಪಿನಕಾಯಿ, ಉಪ್ಪು, ತೆಂಗಿನಕಾಯಿ, ತರಕಾರಿ ಇತ್ಯಾದಿ ವಸ್ತುಗಳನ್ನು ನೀಡಲಾಗುತ್ತಿದೆ.

ಎಷ್ಟೋ ಜನ ಕಾರ್ಮಿಕರು ಬಂದರೂ ವಸತಿ ನೀಡುವಷ್ಟು ಬಿಬಿಎಂಪಿ ತಯಾರಿ ಮಾಡಿಕೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ 200 ಕೇಂದ್ರಗಳನ್ನು ಗುರುತಿಸಲಾಗಿದೆ. 20 ಸಾವಿರಕ್ಕೂ ಹೆಚ್ಚು ಜನರಿಗೆ ಆಶ್ರಯ ಕಲ್ಪಿಸಬಹುದಾಗಿದೆ. ಆಹಾರ, ಆರೋಗ್ಯ, ಆಶ್ರಯಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿ ಕೆಲಸ ಮಾಡುತ್ತಿದೆ.

-ಎಂ. ಲೋಕೇಶ, ಅಧೀಕ್ಷಕ ಅಭಿಯಂತರ, ಯೋಜನೆ ಮತ್ತು ಕೇಂದ್ರ

ಅನ್ನಕ್ಕಾಗಿ ಪರದಾಡುವ, ನಮ್ಮ ಊರಿಗೂ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಂತಹ ಸಂದರ್ಭದಲ್ಲಿ ಮೂರೊತ್ತು ಊಟ, ಇರಲು ಆಶ್ರಯ ಕೊಟ್ಟು ಇಡೀ ಕುಟುಂಬಕ್ಕೆ ಅನ್ನ ಹಾಕುತ್ತಿದ್ದಾರೆ. ಊರು ಸೇರಿದರೆ ಸಾಕು ಎನ್ನುವ ಕಾರಣಕ್ಕೆ ತೊಟ್ಟ ಬಟ್ಟೆಯಲ್ಲಿ ಬಂದಿದ್ದೇವೆ. ನನ್ನಂತೆಯೇ ಬಹಳಷ್ಟು ಜನ ಜೀವ ಉಳಿಸಿಕೊಂಡರೆ ಸಾಕು ಎನ್ನುವ ಭಯದಿಂದ ಬಂದಿದ್ದಾರೆ.

–ಕರಿಬಸಪ್ಪ, ಕಾರ್ಮಿಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X