Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾರಕೂರು: ವಲಸೆ ಕಾರ್ಮಿಕರಿಗೆ ಉಪಹಾರ...

ಬಾರಕೂರು: ವಲಸೆ ಕಾರ್ಮಿಕರಿಗೆ ಉಪಹಾರ ಹಂಚಿದ ಸಂಸದೆ

ವಾರ್ತಾಭಾರತಿವಾರ್ತಾಭಾರತಿ5 April 2020 9:00 PM IST
share
ಬಾರಕೂರು: ವಲಸೆ ಕಾರ್ಮಿಕರಿಗೆ ಉಪಹಾರ ಹಂಚಿದ ಸಂಸದೆ

ಬ್ರಹ್ಮಾವರ, ಎ.5: ಇಲ್ಲಿಗೆ ಸಮೀಪದ ಬಾರಕೂರು ರುಕ್ಮಿಣಿ ಶೆಡ್ತಿ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತೆರೆಯಲಾಗಿರುವ ಉತ್ತರ ಕರ್ನಾಟಕದ ವಲಸೆ ಕಾರ್ಮಿಕರ ನಿರಾಶ್ರಿತರ ಶಿಬಿರಕ್ಕೆ ರವಿವಾರ ಬೆಳಗ್ಗೆ ಭೇಟಿ ನೀಡಿದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅಲ್ಲಿರುವ 100ಕ್ಕೂ ಅಧಿಕ ಕಾರ್ಮಿಕರಿಗೆ ಬೆಳಗಿನ ಉಪಹಾರವನ್ನು ವಿತರಿಸಿದರು.

ಮಂಗಳೂರು ಭಾಗದಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಕರ್ನಾಟಕ ಭಾಗದ ಸುಮಾರು 375 ವಲಸೆ ಕಾರ್ಮಿಕರು ಜಿಲ್ಲೆಯಲ್ಲಿದ್ದು, ಇವರಲ್ಲಿ ಕೆಲವರನ್ನು ಕಾಪು ಮತ್ತು ತೆಕ್ಕಟ್ಟೆಗೆ ಕಳುಹಿಸಿ, ಉಡುಪಿ ಜಿಲ್ಲಾಡಳಿತ, ಬ್ರಹ್ಮಾವರ ತಾಲೂಕು ಆಡಳಿತ ಹಾಗೂ ಬಾರಕೂರು ಭಾಗದ ದಾನಿಗಳ ನೆರವಿನಿಂದ ತಾತ್ಕಾಲಿಕವಾಗಿ ನೆಲೆ ನಿಂತ 123 ಮಂದಿಗೆ ಬಾರಕೂರಿನ ಕಾಲೇಜಿನಲ್ಲಿ ಪ್ರಾರಂಭಿಸಲಾದ ನಿರಾಶ್ರಿತ ಶಿಬಿರದಲ್ಲಿ ಆಶ್ರಯ ನೀಡಲಾಗಿದೆ.

ಈ ಸಂದರ್ಭದಲ್ಲಿ ಅಲ್ಲಿರುವ ಶಿಬಿರಾರ್ಥಿಗಳಿಗೆ ಧೈರ್ಯ ತುಂಬಿ ಮಾತನಾಡಿದ ಸಂಸದೆ, ಸರಕಾರದ ಆದೇಶ ಬರುವ ತನಕ ನಿಮ್ಮನ್ನು ಇಲ್ಲಿ ಇರಿಸಲಾಗುತ್ತದೆ ಆ ಬಳಿಕ ನಿಮ್ಮ ಊರಿಗೆ ತೆರಳಬಹುದು. ನಿಮಗೆ ಇಲ್ಲಿ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದೆ. ಆದರೆ ನೀವು ಗುರುತು ಪರಿಚಯ ಇಲ್ಲದವರು ನೀಡುವ ಯಾವುದೆ ಆಹಾರ ವಸ್ತುಗಳನ್ನು ಸ್ವೀಕರಿಸಬೇಡಿ ಎಂದು ನುಡಿದರು.

ಕಳೆದ 9 ದಿನದಿಂದ ಮಂದಾರ್ತಿ ಶ್ರೀದುರ್ಗಾ ಪರಮೇಶ್ವರೀ ದೇವಸ್ಥಾನ ದಿಂದ ಊಟ ವಿತರಣೆಯಾಗುತಿದ್ದರೆ, ಬಾರಕೂರು ಶಾಂತಾರಾಮ ಶೆಟ್ಟಿ ಅವರು ಎರಡು ಹೊತ್ತಿನ ಉಪಹಾರವನ್ನು ನೀಡುತಿದ್ದಾರೆ. ಇವರೊಂದಿಗೆ ಆಸುಪಾಸಿನ ಹಲವಾರು ದಾನಿಗಳು ಕೂಡಾ ಕೈ ಜೋಡಿಸಿದ್ದಾರೆ.

ಬ್ರಹ್ಮಾವರ ತಹಶೀಲ್ದಾರ ಕಿರಣ್‌ಗೌರಯ್ಯ, ಬಾರಕೂರು ಶಾಂತಾರಾಮ ಶೆಟ್ಟಿ, ದೇವದಾಸ್ ಹೊಸ್ಕೆರೆ, ಉಪತಹಶೀಲ್ದಾರ್ ದೇವರಾಜು, ಪೋಲೀಸ್ ಇಲಾಖೆ ಯ ಶಾಂತರಾಜು, ಕಂದಾಯ ನಿರೀಕ್ಷಕ ರಾದ ರಾಜು, ಶಿವಮಲ್ಲ, ಗ್ರಾಮ ಲೆಕ್ಕಿಗರಾದ ಗಿರೀಶ್ ಕುಮಾರ್, ಚೆಲುವ ರಾಜು, ಭೀಮರಾಜ್, ಜಯ ಶೆಟ್ಟಿ, ಅರುಣ್, ಶಿವರಾಜ್ ಕಟ್ಟಗಿ ಇನ್ನಿತರು ಉಪಸ್ಥಿತರಿದ್ದರು.

ಬ್ರಹ್ಮಾವರ ಭಾಗದಲ್ಲಿ ಕೂಡಾ ಹಲವು ದಾನಿಗಳು ಕೆಲವು ಕಡೆಯಲ್ಲಿ ನಮ್ಮ ಅರಿವಿಗೆ ಬಾರದೇ ಆಹಾರ ವಸ್ತುಗಳನ್ನು ನೀಡುತ್ತಿದ್ದಾರೆ. ಇದನ್ನು ತಾಲೂಕು ಆಡಳಿತದ ವ್ಯವಸ್ಥೆಯಲ್ಲಿ ನೀಡಬೇಕು. ಅದು ಹೊರತಾಗಿ ಯಾವೂದೆ ದಾನಿ ನೀಡಿದಲ್ಲಿ ಅಪರಾಧವಾಗುತ್ತದೆ ಹಾಗೂ ಆರೋಗ್ಯದ ವಿಷಯದಲ್ಲಿ ತೆಗೆದು ಕೊಂಡವರೇ ಹೊಣೆಗಾರರಾಗುತ್ತಾರೆ.

-ಕಿರಣ್ ಗೌರಯ್ಯ, ತಹಶೀಲ್ದಾರ ಬ್ರಹ್ಮಾವರ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X