Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ‘ಲಾಕ್‌ಡೌನ್’: ಒಂದು ಸಲಹೆ

‘ಲಾಕ್‌ಡೌನ್’: ಒಂದು ಸಲಹೆ

ರಘುನಂದನ, ಬೆಂಗಳೂರುರಘುನಂದನ, ಬೆಂಗಳೂರು5 April 2020 10:54 PM IST
share

ಮಾನ್ಯರೇ,

ಕೋವಿಡ್-19 ಮಾರಿ ಹರಡುತ್ತಿರುವ ಈ ದಿನಗಳಲ್ಲಿ ಎಲ್ಲ ರಾಜ್ಯ ಸರಕಾರಗಳೂ ವಲಸೆ ಕಾರ್ಮಿಕರು ಮುಂತಾದವರಿಗೆ ಊಟದ ವ್ಯವಸ್ಥೆ ಮಾಡುತ್ತಿವೆಯಷ್ಟೆ. ಅದಕ್ಕಾಗಿ, ಅವುಗಳು ಪ್ರಾಯಶಃ ದೊಡ್ಡ ದೊಡ್ಡ ಅಡಿಗೆ ಮನೆಗಳನ್ನು ಹುಟ್ಟುಹಾಕಬೇಕು; ಗುತ್ತಿಗೆದಾರರನ್ನು ಗೊತ್ತು ಮಾಡಿಕೊಳ್ಳಬೇಕು. ಅದಕ್ಕೆ ಬದಲಾಗಿ, ಆ ಸರಕಾರಗಳು ಸದ್ಯ ಲಾಕ್‌ಡೌನ್ ಆಣತಿಯಿಂದಾಗಿ ಮುಚ್ಚಿರುವ ಹೊಟೇಲುಗಳ ಪೈಕಿ ಆಯ್ದ ಕೆಲವು ಹೊಟೇಲುಗಳ ಮಾಲಕರುಗಳ ಜೊತೆ ಮಾತನಾಡಿ, ಆ ಹೊಟೇಲುಗಳಲ್ಲಿ ಈಗಾಗಲೇ ಇರುವ ಅಡಿಗೆಮನೆ ಸೌಕರ್ಯ ಹಾಗೂ ಅಲ್ಲಿನ ಸಿಬ್ಬಂದಿಯ ಸೇವೆಯನ್ನು ಬಳಸಿ, ಅಲ್ಲೆಲ್ಲ ಅಡಿಗೆಯಾಗುವಂತೆ ಮಾಡಬಹುದಲ್ಲವೇ? ಆ ಹೊಟೇಲುಗಳು ಸಾರ್ವಜನಿಕರಿಗೆ ತೆರೆದಿರಬಾರದು. ಸರಕಾರವು ತಮಗೆ ಒಪ್ಪಿಸಿರುವ ಕೆಲಸವನ್ನು ಮುಚ್ಚಿದ ಬಾಗಿಲ ಹಿಂದೆ ಮಾಡಬೇಕು ಮತ್ತು ತಾವು ತಯಾರಿಸಿದ ಊಟಕ್ಕೆ ತಗುಲಿದ ಅಸಲಿ ಖರ್ಚಿನ ಬಾಬ್ತನ್ನು ಮಾತ್ರ ಸರಕಾರದಿಂದ ಪಡೆಯಬೇಕು. ಆ ಊಟವನ್ನು ಸರಕಾರಿ ಸಿಬ್ಬಂದಿಯೇ ಆ ಸುತ್ತಮುತ್ತಲಿನ, ಅದಾಗಲೇ ನಿಖರವಾಗಿ ಗೊತ್ತು ಮಾಡಿಕೊಂಡ, ಲೇಬರ್ ಕ್ಯಾಂಪುಗಳಲ್ಲಿ ವಾಸಮಾಡುವವರಿಗೆ ಮತ್ತು ಅಂತಹ ಊಟದ ಅಗತ್ಯವಿರುವ ಬೇರೆಯವರಿಗೆ ತಲುಪಿಸಬೇಕು. ಇಂತಹದ್ದನ್ನು ಆಯಾ ರಾಜ್ಯ ಸರಕಾರವು ತನ್ನ ರಾಜ್ಯದ ಹೊಟೇಲು ಮಾಲಕರ ಸಂಘಗಳು ಹಾಗೂ ಹೊಟೇಲು ಕೆಲಸಗಾರರ ಸಂಘಗಳೊಡನೆ ಸಮಾಲೋಚಿಸಿ ಮಾಡಬಹುದು. ಇದು ವಿಕೇಂದ್ರೀಕರಣದ ಮಾರ್ಗ; ಈಗಾಗಲೇ ಇರುವ ಮೂಲಸೌಕರ್ಯವನ್ನು ಸದುಪಯೋಗಪಡಿಸಿಕೊಳ್ಳುವ ಮಾರ್ಗ.

share
ರಘುನಂದನ, ಬೆಂಗಳೂರು
ರಘುನಂದನ, ಬೆಂಗಳೂರು
Next Story
X