9 ಗಂಟೆಗೆ ಪಟಾಕಿ ಸಿಡಿಸಿದ ಜನರು: ಮನೆಯಲ್ಲಿ ಭಾರೀ ಬೆಂಕಿ ಅವಘಡ
ರಾಜಸ್ಥಾನ: ಪ್ರಧಾನಿ ನರೇಂದ್ರ ಮೋದಿಯವರು ಕೊರೋನ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸಲು ದೀಪ ಬೆಳಗಿಸುವಂತೆ ಕರೆ ನೀಡಿದ್ದರೆ, ಕೆಲವೆಡೆ ಜನರು ಪಟಾಕಿಗಳನ್ನು ಸಿಡಿಸಿದ್ದಾರೆ. ಇದೇ ರೀತಿ ಪಟಾಕಿ ಸಿಡಿಸಿದ ಪರಿಣಾಮ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿರುವ ಘಟನೆ ರಾಜಸ್ಥಾನದ ಜೈಪುರದ ವೈಶಾಲಿ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಪತ್ರಕರ್ತ ಮಹಿಮ್ ಪ್ರತಾಪ್ ಸಿಂಗ್ ಟ್ವೀಟ್ ಮಾಡಿದ್ದು, 9 ಗಂಟೆಗೆ ಪಟಾಕಿ ಸಿಡಿಸಿದ ಪರಿಣಾಮ ನನ್ನ ನೆರೆಮನೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದೆ", "ಇದೀಗ ಬೆಂಕಿ ನಂದಿಸಲಾಗಿದೆ. ಪಟಾಕಿ ಸಿಡಿಸಿದ್ದೇ ಇದಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಿಂದ ಯಾರಿಗೂ ಗಾಯಗಳಾಗಿಲ್ಲ" ಎಂದಿದ್ದಾರೆ.
Massive fire in a building in my neighborhood from bursting crackers for #9baje9mintues. Fire brigade just drove in. Hope everyone's safe. pic.twitter.com/NcyDxYdeFW
— Mahim Pratap Singh (@mayhempsingh) April 5, 2020
Next Story