Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎಎಫ್‌ಸಿ ಏಶ್ಯನ್ ಕಪ್ 2027ಕ್ಕೆ ಭಾರತ...

ಎಎಫ್‌ಸಿ ಏಶ್ಯನ್ ಕಪ್ 2027ಕ್ಕೆ ಭಾರತ ಅಧಿಕೃತವಾಗಿ ಬಿಡ್ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ6 April 2020 3:37 PM IST
share
ಎಎಫ್‌ಸಿ ಏಶ್ಯನ್ ಕಪ್ 2027ಕ್ಕೆ ಭಾರತ ಅಧಿಕೃತವಾಗಿ ಬಿಡ್ ಸಲ್ಲಿಕೆ

ಹೊಸದಿಲ್ಲಿ, ಎ.5: ಎಎಫ್‌ಸಿ ಏಶ್ಯನ್ ಕಪ್ 2027ರ ಆತಿಥ್ಯವಹಿಸಲು ಭಾರತ ತನ್ನ ಎಲ್ಲ ಬಿಡ್ ದಾಖಲೆಗಳನ್ನು ಸಲ್ಲಿಸಿದೆ ಎಂದು ರಾಷ್ಟ್ರೀಯ ಒಕ್ಕೂಟದ ಅಧಿಕಾರಿಗಳು ರವಿವಾರ ದೃಢಪಡಿಸಿದ್ದಾರೆ.

ಒಂದು ವೇಳೆ ಭಾರತ ಬಿಡ್‌ನ್ನು ಗೆದ್ದುಕೊಂಡರೆ, ಮೊದಲ ಬಾರಿ ಕಾಂಟಿನೆಂಟಲ್ ಟೂರ್ನಿಯ ಆತಿಥ್ಯವಹಿಸಿಕೊಳ್ಳಲಿದೆ.

‘‘ನಾವು ಈಗಾಗಲೇ ಏಶ್ಯನ್ ಫುಟ್ಬಾಲ್ ಕಾನ್ಫಡರೇಶನ್‌ಗೆ(ಎಎಫ್‌ಸಿ)ನಮ್ಮ ಆಸಕ್ತಿಯ ಅಭಿವ್ಯಕ್ತಿಯನ್ನು ವ್ಯಕ್ತಪಡಿಸಿದ್ದೇವೆ’’ ಎಂದು ಅಖಿಲ ಭಾರತ ಫುಟ್ಬಾಲ್ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಕುಶಾಲ್ ದಾಸ್ ಪಿಟಿಐಗೆ ತಿಳಿಸಿದ್ದಾರೆ.

ಕೋವಿಡ್-19 ಸೋಂಕಿನ ಕಾರಣಕ್ಕೆ ಎಎಫ್‌ಸಿ ಇತ್ತೀಚೆಗೆ ಆಸಕ್ತಿಯ ಅಭಿವ್ಯಕ್ತಿಯನ್ನು ವ್ಯಕ್ತಪಡಿಸಲು ಇದ್ದ ಮಾರ್ಚ್ 31ನೇ ಅಂತಿಮ ಗಡುವನ್ನು ಮೂರು ತಿಂಗಳು ಅರ್ಥಾತ್ ಜೂ.30ರ ತನಕ ವಿಸ್ತರಿಸಿತ್ತು. ‘‘ಆದಷ್ಟು ಬೇಗನೆ ಟೂರ್ನಮೆಂಟ್‌ನ ಆತಿಥ್ಯವಹಿಸುವ ದೇಶದ ಹೆಸರನ್ನು ಘೋಷಣೆಯಾಗುವ ವಿಶ್ವಾಸ ಎಎಫ್‌ಸಿಗಿದೆ. ಈ ಮೂಲಕ ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಟೂರ್ನಿಯ ತಯಾರಿಗೆ ಹೆಚ್ಚಿ ನ ಸಮಯಾವಕಾಶ ಸಿಗುವ ಸಾಧ್ಯತೆಯಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆದ 2019ರ ಆವೃತ್ತಿಯ ಟೂರ್ನಿಯಲ್ಲಿ ತಂಡಗಳ ಸಂಖ್ಯೆ ಹೆಚ್ಚಿಸಲಾಗಿದ್ದು, ಇದರಲ್ಲಿ 24 ತಂಡಗಳು ಭಾಗವಹಿಸಿದ್ದವು’’ ಎಂದು ಎಎಫ್‌ಸಿ ತಿಳಿಸಿದೆ.

ಎಎಫ್‌ಸಿ ಮುಂದಿನ ವರ್ಷದ ಆರಂಭದಲ್ಲಿ ಆತಿಥೇಯ ರಾಷ್ಟ್ರದ ಹೆಸರು ಘೋಷಣೆಯಾಗುವ ನಿರೀಕ್ಷೆಯಲ್ಲಿದೆ.

ಭಾರತವಲ್ಲದೆ ಸೌದಿ ಅರೇಬಿಯ 2027ರ ಏಶ್ಯನ್ ಕಪ್‌ಗೆ ಬಿಡ್ ಸಲ್ಲಿಸುವುದಾಗಿ ಘೋಷಿಸಿದೆ. ಸೌದಿ ಮೂರು ಬಾರಿ ಎಎಫ್‌ಸಿ ಪ್ರಶಸ್ತಿಯನ್ನು ಎತ್ತಿಹಿಡಿದಿದೆ. ಆದರೆ, ಈ ತನಕ ಟೂರ್ನಿಯ ಆತಿಥ್ಯವನ್ನು ವಹಿಸಿಕೊಂಡಿಲ್ಲ. 2023ರ ಎಎಫ್‌ಸಿ ಏಶ್ಯನ್ ಕಪ್ ಆತಿಥ್ಯಕ್ಕಾಗಿ ಭಾರತವು ಥಾಯ್ಲೆಂಡ್, ಇಂಡೋನೇಶ್ಯ ಹಾಗೂ ದಕ್ಷಿಣ ಕೊರಿಯಾದ ಜತೆಗೆ ಬಿಡ್ ಸಲ್ಲಿಸಿತ್ತು. ಆದರೆ 2018ರ ಅಕ್ಟೋಬರ್‌ನ ಆರಂಭದಲ್ಲಿ ಬಿಡ್‌ನಿಂದ ಹಿಂದೆ ಸರಿದಿತ್ತು. ಆ ನಂತರ ಥಾಯ್ಲೆಂಡ್ ಹಾಗೂ ದಕ್ಷಿಣ ಕೊರಿಯಾ ಕೂಡ ಹೊರ ನಡೆದವು. ಅಂತಿಮವಾಗಿ 2023ರ ಟೂರ್ನಮೆಂಟ್‌ನ ಆತಿಥ್ಯದ ಹಕ್ಕು ಚೀನಾದ ಪಾಲಾಗಿತ್ತು.

2023ರ ಮಹಿಳಾ ವಿಶ್ವಕಪ್‌ನ ಆತಿಥ್ಯವಹಿಸಿರುವ ದಕ್ಷಿಣ ಕೊರಿಯಾ ಪುರುಷರ 2027ರ ಎಎಫ್‌ಸಿ ಏಶ್ಯನ್ ಕಪ್ ಬಿಡ್ ಸಲ್ಲಿಸಿರುವ ಭಾರತದ ಹಾದಿ ಅನುಸರಿಸುವ ಸಾಧ್ಯತೆಯಿದೆ. ಚೀನಾ 2023ರ ಎಎಫ್‌ಸಿ ಕಪ್‌ನ್ನು 10 ನಗರಗಳಲ್ಲಿ ಆಯೋಜಿಸಲಿದೆ.

2017ರಲ್ಲಿ ಪುರುಷರ ಅಂಡರ್-17 ವಿಶ್ವಕಪ್‌ನ್ನು ಯಶಸ್ವಿಯಾಗಿ ಸಂಘಟಿಸಿದ್ದ ಭಾರತ ಈ ವರ್ಷದ ನವೆಂಬರ್‌ನಲ್ಲಿ ಅಂಡರ್-17 ಮಹಿಳಾ ವಿಶ್ವಕಪ್‌ನ ಆತಿಥ್ಯವಹಿಸಲು ಸಕಲ ರೀತಿಯಲ್ಲಿ ಸಜ್ಜಾಗಿತ್ತು. ಆದರೆ, ಕೋವಿಡ್-19ರ ಅಬ್ಬರದಿಂದಾಗಿ ಟೂರ್ನಿಯನ್ನು ಮುಂದೂಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X