Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮುದಾಯ ಸೋಂಕು ಹರಡುವಿಕೆ ತಡೆಗೆ...

ಸಮುದಾಯ ಸೋಂಕು ಹರಡುವಿಕೆ ತಡೆಗೆ ಹೆಚ್ಚೆಚ್ಚು ಜನರ ತಪಾಸಣೆಯೇ ಏಕೈಕ ಮಾರ್ಗ

ಕೊರೋನ ವೈರಸ್

ವಾರ್ತಾಭಾರತಿವಾರ್ತಾಭಾರತಿ6 April 2020 10:24 PM IST
share
ಸಮುದಾಯ ಸೋಂಕು ಹರಡುವಿಕೆ ತಡೆಗೆ ಹೆಚ್ಚೆಚ್ಚು ಜನರ ತಪಾಸಣೆಯೇ ಏಕೈಕ ಮಾರ್ಗ

ಹೊಸದಿಲ್ಲಿ,ಎ.6: ಕೊರೋನ ವೈರಸ್‌ನ ಸಮುದಾಯ ಹರಡುವಿಕೆಯನ್ನು ತಡೆಯಲು ಹೆಚ್ಚೆಚ್ಚು ಜನರನ್ನು ತಪಾಸಣೆಗೊಳಪಡಿಸುವುದು ಹೆಚ್ಚು ಪರಿಣಾಮಕಾರಿಯಾದ ಮಾರ್ಗವಾಗುತ್ತದೆ ಎನ್ನುತ್ತಾರೆ ಬ್ರೂಕಿಂಗ್ಸ್ ಇಂಡಿಯಾದ ಸಂಶೋಧನಾ ನಿರ್ದೇಶಕಿ ಹಾಗೂ ಪ್ರಧಾನಿಯವರ ಆರ್ಥಿಕ ಸಲಹಾ ಮಂಡಳಿಯ ಮಾಜಿ ಸದಸ್ಯೆ ಶಮಿಕಾ ರವಿ.

 ‘ಔಟ್‌ ಲುಕ್’ ಮ್ಯಾಗಝಿನ್‌ಗೆ ನೀಡಿರುವ ಸಂದರ್ಶನದಲ್ಲಿ ಕೊರೋನ ವೈರಸ್ ಪಿಡುಗು,ಸಮುದಾಯ ಪ್ರಸರಣ ಮತ್ತು 21 ದಿನಗಳ ದೇಶವ್ಯಾಪಿ ಲಾಕ್‌ಡೌನ್ ಬಗ್ಗೆ ಮಾತನಾಡಿರುವ ಶಮಿಕಾ, ನಾವಿನ್ನೂ ಕೊರೋನ ವೈರಸ್ ಬೆಳವಣಿಗೆಯ ಹಂತದಲ್ಲಿದ್ದೇವೆ. ಮಾ.23ರವರೆಗೆ ಪ್ರತಿ ಮೂರು ದಿನಗಳಿಗೆ ಪ್ರಕರಣಗಳು ಇಮ್ಮಡಿಯಾಗುತ್ತಿದ್ದರೆ ಅದರ ಬಳಿಕ ಐದು ದಿನಗಳನ್ನು ತೆಗೆದುಕೊಳ್ಳುತ್ತಿದೆ. ಪ್ರಕರಣಗಳು ಹೆಚ್ಚುವ ಗತಿ ಈಗ ಸ್ವಲ್ಪ ಕಡಿಮೆಯಾಗಿದೆ, ನಿಜ. ಆದರೆ ಈಗಲೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ ಎನ್ನುವುದನ್ನು ನಾವು ಗಮನಿಸಬೇಕು. ಸರಕಾರವು ಕೈಗೊಂಡ ದೇಶವ್ಯಾಪಿ ಲಾಕ್‌ಡೌನ್ ಮತ್ತು ಇತರ ಹಲವಾರು ಕ್ರಮಗಳು ಏರಿಕೆ ದರ ಇಳಿಯಲು ಕಾರಣವಾಗಿರಬಹುದು. ಆದರೆ ಬೆಳವಣಿಗೆಯ ದರವನ್ನು ಖಚಿತಪಡಿಸಿಕೊಳ್ಳಲು ಇನ್ನೂ ಏಳು ದಿನಗಳ ಕಾಲ ನಾವು ಕಾಯಬೇಕಾಗುತ್ತದೆ ಎಂದಿದ್ದಾರೆ.

  ಯುರೋಪ್, ಬ್ರಿಟನ್ ಮತ್ತು ಅಮೆರಿಕದಂತಹ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ತೀರ ಕಡಿಮೆಯಿದೆ. ಆ ರಾಷ್ಟ್ರಗಳು ನಿಜಕ್ಕೂ ನಿರ್ಬಂಧಗಳನ್ನು ಹೇರಿರಲಿಲ್ಲ ಅಥವಾ ಪ್ರಮುಖ ಬದಲಾವಣೆಗಳನ್ನು ತಂದಿರಲಿಲ್ಲ. ಆರಂಭದ ಹಂತದಲ್ಲಿ ಅವು ಕಾದು ನೋಡುವಲ್ಲಿಯೇ ಸಮಯ ವ್ಯರ್ಥಗೊಳಿಸಿದ್ದವು. ಆದರೆ ಭಾರತದಲ್ಲಿ ತಪಾಸಣೆಯ ಪ್ರಶ್ನೆ ಉದ್ಭವವಾಗುತ್ತದೆ. ಈಗ ನಾವು ಕೆಲವರನ್ನಷ್ಟೇ ಗುರಿಯಾಗಿಸಿಕೊಂಡು ಕೊರೋನ ವೈರಸ್ ತಪಾಸಣೆಯನ್ನು ನಡೆಸುತ್ತಿದ್ದೇವೆ. ಆರಂಭದ ಹಂತದಲ್ಲಿ ಇದು ಒಳ್ಳೆಯ ಪರಿಕಲ್ಪನೆ. ಭಾರತವು ಆರಂಭದಿಂದಲೇ ಪ್ರಮುಖ ಪ್ರಯತ್ನಗಳನ್ನು ಮಾಡಿದ್ದು ಒಟ್ಟಾರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲು ಕಾರಣವಾಗಿದೆ.

ಆದರೆ ಜನರು ಕ್ವಾರಂಟೈನ್‌ನ್ನು ಉಲ್ಲಂಘಿಸಿರುವ ಹಲವಾರು ನಿದರ್ಶನಗಳು ನಮ್ಮ ಮುಂದಿವೆ. ಸಮುದಾಯ ಸೋಂಕು ಹರಡುವಿಕೆಯನ್ನು ತಡೆಯಲು ನಾವು ಇನ್ನಷ್ಟು ಹೆಚ್ಚೆಚ್ಚು ಜನರನ್ನು ಯಾದ್ರಚ್ಛಿಕವಾಗಿ ತಪಾಸಣೆಗೆ ಒಳಪಡಿಸಬೆಕು. ಸೋಂಕು ಸಂಪೂರ್ಣವಾಗಿ ಹರಡಿದ ಬಳಿಕ ಇಂತಹ ತಪಾಸಣೆಗೆ ಯಾವುದೇ ಅರ್ಥವಿಲ್ಲ,ಏಕೆಂದರೆ ಪಿಡುಗನ್ನು ನಿರ್ವಹಿಸಲು ನಮ್ಮ ಬಳಿ ಅಗತ್ಯ ಆರೋಗ್ಯ ಮೂಲಸೌಕರ್ಯ ಗಳಿಲ್ಲ. ಹೀಗಾಗಿ ಈಗಲೇ ತಪಾಸಣೆಗಳನ್ನು ಹೆಚ್ಚಿಸುವುದು ಮಿತವ್ಯಯಕರ ಕ್ರಮವಾಗುತ್ತದೆ ಎಂದು ಶಮಿಕಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X