Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಲಿಕುಳ ನಿಸರ್ಗಧಾಮದ ಪ್ರಾಣಿಗಳಿಗೂ...

ಪಿಲಿಕುಳ ನಿಸರ್ಗಧಾಮದ ಪ್ರಾಣಿಗಳಿಗೂ ತಟ್ಟಿದ ಲಾಕ್‌ಡೌನ್ ಬಿಸಿ!

ವಾರ್ತಾಭಾರತಿವಾರ್ತಾಭಾರತಿ7 April 2020 1:08 PM IST
share
ಪಿಲಿಕುಳ ನಿಸರ್ಗಧಾಮದ ಪ್ರಾಣಿಗಳಿಗೂ ತಟ್ಟಿದ ಲಾಕ್‌ಡೌನ್ ಬಿಸಿ!

ಮಂಗಳೂರು, ಎ.7: ಕೊರೋನ ಭೀತಿಯ ಹಿನ್ನೆಲೆಯಲ್ಲಿ ಹೇರಲಾಗಿರುವ ಲಾಕ್‌ಡೌನ್ ಬಸಿ ಇದೀಗ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದ ಪ್ರಾಣಿಗಳಿಗೂ ತಟ್ಟಿದೆ. ಇಲ್ಲಿನ ಪ್ರಾಣಿಗಳ ಮಾಂಸಾಹಾರಕ್ಕೂ ಕೊರತೆ ಉಂಟಾಗಿದೆ. ಮಾಂಸ ಸಿಗದ ಕಾರಣ ಸದ್ಯ ಪ್ರಾಣಿಗಳಿಗೆ ಕೋಳಿ ಮಾಂಸವನ್ನು ಹಾಕಲಾಗುತ್ತಿದೆ. ಆದರೆ, ಆರೋಗ್ಯದ ಹಿತದೃಷ್ಟಿಯಿಂದ ಹುಲಿ, ಸಿಂಹ, ಚಿರತೆಗಳಿಗೆ ಮಾಂಸದ ಬದಲು ಕೋಳಿ ಮಾಂಸ ನೀಡುವುದು ಸರಿಯಲ್ಲ ಎಂದೂ ಹೇಳಲಾಗುತ್ತದೆ.

ಪಿಲಿಕುಳದ ಉದ್ಯಾನವನದಲ್ಲಿ ಸುಮಾರು 100ಕ್ಕೂ ಅಧಿಕ ಜಾತಿಯ 1200ರಷ್ಟು ಪ್ರಾಣಿ-ಪಕ್ಷಿಗಳಿವೆ. ಇದರಲ್ಲಿ 13 ಹುಲಿ, 4 ಸಿಂಹ, 12 ಚಿರತೆ, 2 ಕರಡಿ, ಕಾಡುಬೆಕ್ಕು, ಚಿರತೆ ಬೆಕ್ಕು ಸೇರಿದಂತೆ ಹಲವು ಮಾಂಸಾಹಾರಿ ಪ್ರಾಣಿಗಳಿವೆ. ನಿತ್ಯ ಇವುಗಳಿಗೆ ಸುಮಾರು 150 ಕೆಜಿಗಿಂತಲೂ ಅಧಿಕ ವಿವಿಧ ರೀತಿಯ ಮಾಂಸ, ಸುಮಾರು 50 ಕೆಜಿ ಕೋಳಿ ಮಾಂಸ ಅಗತ್ಯವಿದೆ. ಇದರಲ್ಲಿ ಪ್ರತೀ ಹುಲಿಗೆ ದಿನಕ್ಕೆ 8ರಿಂದ 10 ಕಿಲೋ ಮಾಂಸ ಅಗತ್ಯವಿದೆ. ಇದನ್ನು ಪ್ರತೀದಿನ ಪಿಲಿಕುಳ ಆಡಳಿತ ಮಂಡಳಿಯು ಟೆಂಡರ್ ಮೂಲಕ ಖರೀದಿಸುತ್ತಿತ್ತು. ಆದರೆ ಸದ್ಯ ಮಾಂಸದ ಕೊರತೆ ಇರುವ ಕಾರಣ, ಕೋಳಿ ಮಾಂಸವನ್ನು ನೀಡಲಾಗುತ್ತಿದೆ. ಹೊರಜಿಲ್ಲೆಗಳ ಕೋಳಿಗಳಲ್ಲಿ ಹಕ್ಕಿಜ್ವರ ಇತ್ತು ಎಂಬ ಕಾರಣದಿಂದ ಅದನ್ನು ನಿಲ್ಲಿಸಲಾಗಿದೆ. ಸದ್ಯ ಸ್ಥಳೀಯವಾಗಿ ಸುಮಾರು 150ಕ್ಕೂ ಅಧಿಕ ಕೆಜಿ ಕೋಳಿ ಮಾಂಸವನ್ನೇ ಪ್ರಾಣಿಗಳಿಗೆ ಹಾಕಲಾಗುತ್ತಿದೆ. ಸಸ್ಯಹಾರ ಸ್ವೀಕರಿಸುವ ಪ್ರಾಣಿಗಳ ಆಹಾರಕ್ಕೆ ಸದ್ಯ ಸಮಸ್ಯೆ ಇಲ್ಲ. 5 ಎಕರೆ ಜಾಗದಲ್ಲಿ ಹುಲ್ಲು ಬೆಳೆದಿರುವ ಕಾರಣದಿಂದ ಹಾಗೂ ಸಸ್ಯಾಹಾರಿಗಳು ತಿನ್ನುವ ಆಹಾರ ಲಭಿಸುತ್ತಿದೆ.

ಪಿಲಿಕುಳದ ಬಹುತೇಕ ವಿಭಾಗಗಳು ಹಾಗೂ ಮೃಗಾಲಯಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಬಂದ್ ಆಗಿವೆ. ಆದರೆ, ಮೃಗಾಲಯದಲ್ಲಿರುವ ಪ್ರಾಣಿಗಳ ಉಪಚಾರಕ್ಕಾಗಿ ನಿತ್ಯ 20ಕ್ಕೂ ಅಧಿಕ ಸಿಬಂದಿ, ವೈದ್ಯರು ನಿತ್ಯ ಕೆಲಸ ಮಾಡುತ್ತಿದ್ದಾರೆ. ಸಿಬ್ಬಂದಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಮಾಡಲಾಗಿದೆ.

ಪಿಲಿಕುಳದಲ್ಲಿ ಸುಮಾರು 300ರಷ್ಟು ಹಕ್ಕಿಗಳಿವೆ. ಇವುಗಳಲ್ಲಿ ಹಲವು ಹಕ್ಕಿಗಳಿಗೆ ಮೀನು ಅಗತ್ಯವಿದೆ. ಆದರೆ, ಸದ್ಯ ಮಂಗಳೂರು ಬಂದರಿನಿಂದ ಮೀನು ಕೂಡ ಲಭ್ಯವಾಗದೆ ಹಕ್ಕಿಗಳಿಗೆ ತೊಂದರೆಯಾಗಿದೆ. ಈಗಾಗಲೇ ತರಿಸಲಾಗಿರುವ ಮೀನು ಮುಂದಿನ 4-5 ದಿನಕ್ಕೆ ಸಾಕಾಗಬಹುದು. ಮುಂದೇನು ಮಾಡುವುದು ಎಂಬ ಚಿಂತೆ ಆಡಳಿತ ಮಂಡಳಿಯದ್ದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X