Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ವಿರುದ್ಧದ ಹೋರಾಟದಲ್ಲಿ ಇಡೀ...

ಕೊರೋನ ವಿರುದ್ಧದ ಹೋರಾಟದಲ್ಲಿ ಇಡೀ ದೇಶಕ್ಕೆ ಮಾದರಿಯಾದ ನಗರವಿದು...

ಇಲ್ಲಿ ಕೈಗೊಂಡ ಕ್ರಮಗಳಿಗೆ ಕೇಂದ್ರ ಸರಕಾರದಿಂದ ಮೆಚ್ಚುಗೆ

ವಾರ್ತಾಭಾರತಿವಾರ್ತಾಭಾರತಿ7 April 2020 4:12 PM IST
share
ಕೊರೋನ ವಿರುದ್ಧದ ಹೋರಾಟದಲ್ಲಿ ಇಡೀ ದೇಶಕ್ಕೆ ಮಾದರಿಯಾದ ನಗರವಿದು...

ಜೈಪುರ್: ರಾಜಸ್ಥಾನದ ಭಿಲ್ವಾರ ಎಂಬಲ್ಲಿ ಮಾರ್ಚ್ 19ರಂದು 27 ಕೊರೋನ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದ ನಂತರ ಕೊರೋನ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಅಲ್ಲಿ ಕೈಗೊಳ್ಳಲಾಗಿರುವ ಕಠಿಣ ಕ್ರಮಗಳನ್ನು ಕೇಂದ್ರ ಸರಕಾರ ಕೂಡ  ಮಾನ್ಯ ಮಾಡಿದೆ. ಸದ್ಯದಲ್ಲಿಯೇ ಇದೇ ಮಾದರಿಯನ್ನು ಇತರೆಡೆಗಳಲ್ಲಿ ಅನುಸರಿಸುವ ಸಾಧ್ಯತೆಯೂ ಇದೆ.

ರವಿವಾರ ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಜತೆಗೆ ನಡೆಸಿದ ವೀಡಿಯೋ ಕಾನ್ಫರೆನ್ಸಿನಲ್ಲೂ ಭಿಲ್ವಾರ ಮಾದರಿಯನ್ನು ಉಲ್ಲೇಖಿಸಿದ್ದರು.

ಜವುಳಿ ನಗರಿಯಾಗಿರುವ ಭಿಲ್ವಾರದಲ್ಲಿನ ಕೋವಿಡ್-19 ನಿಯಂತ್ರಣಾ ಕಾರ್ಯದ ಮುಂದಾಳತ್ವ ವಹಿಸಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ರೋಹಿತ್ ಕುಮಾರ್ ಸಿಂಗ್  ಹಾಗೂ ಜಿಲ್ಲಾ ಕಲೆಕ್ಟರ್ ರಾಜೇಂದ್ರ ಭಟ್ಟ್  ಅವರು ತಿಳಿಸಿದಂತೆ ನಗರದಲ್ಲಿ  ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಕೊರೋನ ಪಾಸಿಟಿವ್ ಆದ 14 ದಿನಗಳಲ್ಲಿ 28 ಲಕ್ಷ ಜನರ ತಪಾಸಣೆಯನ್ನು ಆರೋಗ್ಯ ಇಲಾಖೆಯ ತಂಡಗಳು ಕೈಗೊಂಡಿದ್ದವು. ಇವರ ಪೈಕಿ 2,816 ಜನರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದರೆ, 27 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಇಲ್ಲಿಯ ತನಕ ಎರಡು ಕೊರೋನ ಸಾವುಗಳು ದಾಖಲಾಗಿವೆ.

ವೈದ್ಯರೊಬ್ಬರು ಮೊದಲ ಕೊರೋನ ರೋಗಿಯಾಗಿದ್ದರಿಂದ ಅತ್ಯಂತ ಮುಂಜಾಗರೂಕತೆಯಿಂದ ಹೆಜ್ಜೆಯಿರಿಸಿದ್ದ ಆಡಳಿತ ಮೊದಲ ಹಂತದಲ್ಲಿ ನಗರದಲ್ಲಿ ಸೆಕ್ಷನ್ 144 ಅನ್ವಯ ಕರ್ಫ್ಯೂ ಹೇರಿತ್ತು. ಅಗತ್ಯ ಸೇವೆಗಳು ಆಗ ಲಭ್ಯವಿದ್ದವು. ನಂತರ ಸಂಪೂರ್ಣ ಲಾಕ್‍ಡೌನ್ ಘೋಷಿಸಿ  ನಗರದ ಗಡಿಯನ್ನು ಹಾಗೂ ಜಿಲ್ಲೆಯ ಗಡಿಯನ್ನು ಮುಚ್ಚಲಾಯಿತು. ರೈಲು, ರಸ್ತೆ ಸಂಚಾರ ಬಂದ್ ಮಾಡಲಾಯಿತು. ಕೋವಿಡ್-19 ಕ್ಲಸ್ಟರ್  ಮ್ಯಾಪಿಂಗ್ ನಡೆಸಿ ಆರು ಪ್ರದೇಶಗಳನ್ನು ಗುರುತಿಸಿ  ಶಂಕಿತ ಪ್ರಕರಣಗಳಲ್ಲಿ ಸತತ ತಪಾಸಣೆಗೆ ವಿಶೇಷ ತಂಡಗಳನ್ನು ನಿಯೋಜಿಸಲಾಗಿತ್ತು. ಈ ತಂಡಗಳಿಗೆ ವಿಶೇಷ  ತರಬೇತಿಯನ್ನೂ ನೀಡಲಾಗಿತ್ತು,. ನಗರದಲ್ಲಿ 24 ಗಂಟೆ ಕಾರ್ಯಾಚರಿಸುವ ವಾರ್ ರೂಂ, ವಿಶೇಷ ಸ್ಕ್ರೀನಿಂಗ್ ಹಾಗೂ ತಪಾಸಣಾ ಕೇಂದ್ರವನ್ನೂ ಆರಂಭಿಸಲಾಗಿತ್ತು. ಸುಮಾರು 2000 ತಂಡಗಳು 28 ಲಕ್ಷ ನಿವಾಸಿಗಳ ತಪಾಸಣೆ ನಡೆಸಿತ್ತು.

ಇಲ್ಲಿ ಕಳೆದ ಶನಿವಾರ ದಾಖಲಾದ ಒಂದು ಕೊರೋನ ಪ್ರಕರಣ ಹೊರತುಪಡಿಸಿ ಕಳೆದೆರಡು ದಿನಗಳಲ್ಲಿ ಯಾವುದೇ ಹೊಸ ಪ್ರಕರಣ  ದಾಖಲಾಗಿಲ್ಲ.  ಕೊರೋನ ಹರಡುವಿಕೆಯನ್ನು ತಡೆಗಟ್ಟುವ ಯತ್ನವನ್ನು ಅಧಿಕಾರಿಗಳು ಮುಂದುವರಿಸುತ್ತಲೇ ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X