Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಣ್ಣು ತರಕಾರಿ ಸಗಟು ವ್ಯಾಪಾರ: ಕೊನೆಗೂ...

ಹಣ್ಣು ತರಕಾರಿ ಸಗಟು ವ್ಯಾಪಾರ: ಕೊನೆಗೂ ಎಪಿಎಂಸಿಗೆ ಸ್ಥಳಾಂತರಕ್ಕೆ ವ್ಯಾಪಾರಸ್ಥರ ಸಮ್ಮತಿ

ವಾರ್ತಾಭಾರತಿವಾರ್ತಾಭಾರತಿ7 April 2020 4:52 PM IST
share

ಮಂಗಳೂರು, ಎ.7: ಕೊರೋನ ಸೋಂಕು ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳ ಗೊಂದಲದ ಬಳಿಕ ಕೊನೆಗೂ ಹಣ್ಣು ಮತ್ತು ತರಕಾರಿ ಸಗಟು ವ್ಯಾಪಾರಸ್ಥರು ತಮ್ಮ ವ್ಯವಹಾರವನ್ನು ಬೈಕಂಪಾಡಿಯ ಎಪಿಎಂಸಿಗೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ.

ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಅವರ ಮನವಿ ಮೇರೆಗೆ ಸದ್ಯದ ತುರ್ತು ಪರಿಸ್ಥಿತಿಯಲ್ಲಿ ಹಣ್ಣು ತರಕಾರಿ ಸಗಟು ವ್ಯಾಪಾರವನ್ನು ಎಪಿಎಂಸಿಗೆ ಸ್ಥಳಾಂತರಿಸಲು ನಿರ್ಧರಿಸಿದ್ದೇವೆ. ಇದೇ ವೇಳೆ ಇಂದು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರ ಜತೆ ಎಪಿಎಂಸಿಗೆ ಭೇಟಿ ನೀಡಿದ್ದು, ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ ಎಂದು ಸೆಂಟ್ರಲ್ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮುಹಮ್ಮದ್ ಮುಸ್ತಫಾ ತಿಳಿಸಿದ್ದಾರೆ.

ಸಂಸದರು ಹಾಗೂ ಶಾಸಕರ ಜತೆಗಿನ ಇಂದು ನಡೆದ ಸಭೆಯಲ್ಲಿ ಸಗಟು ವ್ಯಾಪಾರವನ್ನು ಎಪಿಎಂಸಿಗೆ ಸ್ಥಳಾಂತರಿಸಲು ವ್ಯಾಪಾರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಹಾಗಾಗಿ ನಾಳೆಯಿಂದ ಬಹುತೇಕ ಹಣ್ಣು ತರಕಾರಿಯ ಸಗಟು ವ್ಯಾಪಾರ ವ್ಯವಹಾರ ಎಪಿಎಂಸಿಯಲ್ಲಿ ನಡೆಯುವುದು ಖಚಿತವಾಗಿದೆ. ಅಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಾಗಿಯೂ ಶಾಸಕರು ಹಾಗೂ ಸಂಸದರು ತಿಳಿಸಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜನಾರ್ದನ ಸಾಲಿಯಾನ್ ತಿಳಿಸಿದ್ದಾರೆ.

ಎಪಿಎಂಸಿಯಲ್ಲಿಯೇ ತರಕಾರಿ- ಹಣ್ಣು ಖರೀದಿಗೆ ಸೂಚನೆ

ನಗರ ಪಾಲಿಕೆ ವ್ಯಾಪ್ತಿಯೊಳಗಿನ ಉದ್ದಿಮೆ ಪರವಾನಿಗೆ ಹೊಂದಿರುವ ಎಲ್ಲಾ ತರಕಾರಿ ಮತ್ತು ಹಣ್ಣು ಹಂಪಲು ಚಿಲ್ಲರೆ ವ್ಯಾಪಾರಸ್ಥರು ಬೈಕಂಪಾಡಿಯ ಎಪಿಎಂಸಿ ಯಾರ್ಡ್‌ನಲ್ಲಿ ತೆರೆದಿರುವ ಹಾಪ್‌ಕಾಮ್ಸ್‌ನಲ್ಲಿ ಅಥವಾ ಇತರ ಸಗಟು ವ್ಯಾಪಾರಿಗಳಿಂದ ಮಾತ್ರವೇ ತರಕಾರಿ ಮತ್ತು ಹಣ್ಣು ಹಂಪಲು ಖರೀದಿಸಬೇಕು ಎಂದು ಮನಪಾ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಸೂಚನೆ ನೀಡಿದ್ದಾರೆ.

ಉಳಿದ ಕಡೆ ಚಿಲ್ಲರೆ ವ್ಯಾಪಾರಸ್ಥರು ಖರೀದಿ ಮಾಡಿದ್ದಲ್ಲಿ ಅದನ್ನು ಅನಧಿಕೃತವೆಂದು ಪರಿಗಣಿಸಲಾಗುವುದು ಹಾಗೂ ಈ ಬಗ್ಗೆ ಪಾಲಿಕೆ ವತಿಯಿಂದ ನಡೆಸುವ ತಪಾಸಣೆ ಸಂದರ್ಭ ಎಪಿಎಂಸಿ ಯಾರ್ಡ್‌ನಿಂದ ಖರೀದಿಸಿರುವ ರಶೀದಿಯನ್ನು ಹಾಗೂ ನಿಗದಿತ ವಸ್ತುಗಳ ದಾಸ್ತಾನು ವಹಿಯನ್ನು ಹಾಜರುಪಡಿಸಬೇಕು. ಈ ನಿರ್ದೇಶನ ಉಲ್ಲಂಘಿಸಿದರೆ ಪಾಲಿಕೆ ವತಿಯಿಂದ ನೀಡಲಾಗಿರುವ ಉದ್ದಿಮೆ ಪರವಾನಿಗೆಯನ್ನು ಶಾಶ್ವತ ವಾಗಿ ರದ್ದುಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಸಾರ್ವಜನಿಕರಿಗೆ ಸರಕಾರ ನಿಗದಿಪಡಿಸಿರುವ ದರದಲ್ಲಿಯೇ ಅಗತ್ಯ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಪಾಲಿಕೆಯಿಂದ ನಿಗಾ ವಹಿಸಲಾಗುವುದು. ಜಿಲ್ಲಾಡಳಿತದ ವತಿಯಿಂದ ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಚಿಸಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ. ಜಿಲ್ಲೆಯ ನಾಗರಿಕರ ಸ್ವಚ್ಛತೆ, ಆರೋಗ್ಯ ರಕ್ಷಣೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹಣ್ಣು ತರಕಾರಿಗಳ ಖರೀದಿ ಪ್ರಮಾಣದ ಬಗ್ಗೆ ವ್ಯತ್ಯಾಸ/ ಕೋರಿಕೆಗಳಿದ್ದಲ್ಲಿ ಈ ಕೆಳಗಿನವರ ದೂರವಾಣಿ ಮೂಲಕ ಸಂಪರ್ಕಿಸಬಹುದು.

ಪ್ರವೀಣ್, ಸಹಾಯಕ ನಿರ್ದೇಶಕರು ತೋಟಗಾರಿಕೆ: 9449258204., ಎಚ್.ಆರ್. ನಾಯಕ್, ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ- 9448999226

share
ವಾರ್ತಾಭಾರತಿ
ವಾರ್ತಾಭಾರತಿ
Next Story
X