Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಾದ್ಯಂತ ಗುಡುಗು-ಸಿಡಿಲು...

ಉಡುಪಿ ಜಿಲ್ಲೆಯಾದ್ಯಂತ ಗುಡುಗು-ಸಿಡಿಲು ಸಹಿತ ಭಾರೀ ಮಳೆ

ಸೆಕೆ, ಏರುತ್ತಿರುವ ತಾಪಮಾನಕ್ಕೆ ತಾತ್ಕಾಲಿಕ ಪರಿಹಾರ

ವಾರ್ತಾಭಾರತಿವಾರ್ತಾಭಾರತಿ7 April 2020 9:53 PM IST
share
ಉಡುಪಿ ಜಿಲ್ಲೆಯಾದ್ಯಂತ ಗುಡುಗು-ಸಿಡಿಲು ಸಹಿತ ಭಾರೀ ಮಳೆ

ಉಡುಪಿ, ಎ.7: ನೋವೆಲ್ ಕೊರೋನ ವೈರಸ್ ತಂದಿಟ್ಟಿರುವ ಲಾಕ್‌ಡೌನ್ ಹಾಗೂ ಅದಕ್ಕೆ ಸಂಬಂಧಿಸಿದ ಸಂಕಷ್ಟಗಳ ನಡುವೆ ಜಿಲ್ಲೆಯಲ್ಲಿ ಏರುತ್ತಿರುವ ಬೇಸಿಗೆಯ ತಾಪಮಾನ ಹಾಗೂ ಸಹಿಸಲಸಾಧ್ಯ ಸೆಕೆಗೆ ತಾತ್ಕಾಲಿಕ ಪರಿಹಾರವಾಗಿ ಇಂದು ಜಿಲ್ಲೆಯಾದ್ಯಂತ ಭಾರೀ ಮಳೆ, ಗುಡುಗು-ಸಿಡಿಲು ಸಹಿತ ಸುರಿದು ತಂಪಿನ ಸಿಂಚನವೆರಚಿತು.

ಉಡುಪಿ ಆಸುಪಾಸು ಸೇರಿದಂತೆ ಹಲವೆಡೆ ಇಂದು ಮುಂಜಾನೆ ಸಾಧಾರಣ ಮಳೆ ಸುರಿದಿದ್ದರೆ, ಅಪರಾಹ್ನ 2:30ರ ಬಳಿಕ ಭಾರೀ ಮಳೆ ಜಿಲ್ಲೆಯಾದ್ಯಂತ ಸುರಿಯತೊಡಗಿತು. ಹೆಬ್ರಿ, ಕಾರ್ಕಳ ಆಸುಪಾಸಿನಲ್ಲಿ ಅಪರಾಹ್ನದ ವೇಳೆ ಮಳೆ ಸುರಿದರೆ, ಉಡುಪಿ, ಬ್ರಹ್ಮಾವರ, ಸಾಸ್ತಾನ, ಕೋಟ, ಕುಂದಾಪುರ, ಬೈಂದೂರು, ಸಿದ್ಧಾಪುರ, ಶಂಕರನಾರಾಯಣ, ಕಾಪು, ಪಡುಬಿದ್ರಿ ಸೇರಿದಂತೆ ಜಿಲ್ಲೆಯಾದ್ಯಂತ ಸಂಜೆಯ ವೇಳೆಗೆ ಧಾರಾಕಾರ ಮಳೆಯು ಸಿಡಿಲು ಸಹಿತ ಸುರಿಯಿತು.

ಹೆಬ್ರಿ ತಾಲೂಕಿನ ವಿವಿದೆಡೆ ಮತ್ತು ಅಜೆಕಾರು,ಕಡ್ತಲ,ಎಳ್ಳಾರೆ ಪರಿಸರದಲ್ಲಿ ಅಪರಾಹ್ನ 2:20ರಿಂದ ಅರ್ಧಗಂಟೆ ಹೊತ್ತು ಸಿಡಿಲು ಸಹಿತ ತುಂತುರು ಮಳೆಯಾಗಿದೆ. ಶಿವಪುರ, ಹೆಬ್ರಿ ಮುದ್ರಾಡಿ, ವರಂಗ ಮುನಿಯಾಲು ಪರಿಸರದಲ್ಲಿ ಸಹ ಒಳ್ಳೆ ಮಳೆಯಾದ ವರದಿ ಬಂದಿದೆ. ಉಡುಪಿಯಲ್ಲಿ ಮಳೆಗಿಂತಲೂ ಸಿಡಿಲಿಗೆ ಜನ ಬೆದರುವಂತಾಯಿತು.

ಇದರಿಂದ ಕಳೆದ ಸುಮಾರು ಒಂದು ತಿಂಗಳ ಸೆಕೆಯಿಂದ ಬಸವಳಿದಿದ್ದ ಜಿಲ್ಲೆಯ ಜನತೆ ತಾತ್ಕಾಲಿಕವಾದರೂ ಸಮಾಧಾನದ ನಿಟ್ಟುಸಿರು ಬಿಡುವಂತಾ ಯಿತು. ಸಿಡಿಲು-ಗುಡುಗು ಪ್ರಾರಂಭಗೊಳ್ಳುತಿದ್ದಂತೆ ಹಲವು ಕಡೆಗಳಲ್ಲಿ ನಿರೀಕ್ಷೆಯಂತೆ ವಿದ್ಯುತ್ ಕೈಕೊಟ್ಟಿತು. ಮಳೆ ನಿಂತರೂ ವಿದ್ಯುತ್ ಬಾರದೇ ಉರಿಯಂಥ ಸೆಕೆ ಪ್ರಾರಂಭಗೊಂಡಾಗ ಜನ ಮಳೆಗೆ ಶಪಿಸುವಂತಾಯಿತು.

ಕಳೆದ ವರ್ಷ ಮುಂಗಾರು ಪೂರ್ವ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಹಲವು ವಿಧದಲ್ಲಿ ತೊಂದರೆ ಅನುಭವಿಸಿದ್ದ ಜಿಲ್ಲೆಯ ಜನತೆ, ಅದಕ್ಕಿಂತಲೂ ವಿಶೇಷವಾಗಿ ಜಿಲ್ಲೆಯ ಕೃಷಿಕರು ಈ ಬಾರಿ ಎಪ್ರಿಲ್ ತಿಂಗಳ ಮೊದಲ ವಾರದಲ್ಲೇ ಮಳೆ ಸುರಿದಿರುವುದರಿಂದ ಮಳೆಗಾಲವನ್ನು ಹೆಚ್ಚಿನ ನಿರೀಕ್ಷೆಗಳೊಂದಿಗೆ ಎದುರು ನೋಡುವಂತಾಗಿದೆ.

ಆದರೆ ಕಳೆದ ಎರಡು ವಾರಗಳಿಂದ ಇರುವ ಲಾಕ್‌ಡೌನ್‌ನೊಂದಿಗೆ ಇಂದು ಸುರಿದಿರುವ ಮಳೆಗೆ ಕೊರೋನ ವೈರಸ್ ಯಾವ ರೀತಿಯ ವರ್ತನೆ ತೋರಲಿದೆ ಎಂಬ ಕುತೂಹಲ ಎಲ್ಲರಿಗಿದೆ. ಕೆಲವೊಂದು ವೈರಸ್‌ಗಳು ಮಳೆಯಿಂದ ನಿಯಂತ್ರಣಕ್ಕೆ ಬರುವ ಕಾರಣ, ವಿಶ್ವದಾದ್ಯಂತ ತನ್ನ ಉಗ್ರ ರೂಪವನ್ನು ತೋರುತ್ತಿರುವ ಹೊಸ ವೈರಸ್ ಕೋವಿಡ್-19 ಸೋಂಕು ಮಳೆಯಿಂದ ಕಡಿಮೆಗೊಳ್ಳುವುದೇ ಅಥವಾ ತನ್ನ ಕಬಂಧ ಬಾಹುಗಳನ್ನು ಇನ್ನಷ್ಟು ವಿಸ್ತರಿಸುವುದೇ ಎಂಬುದನ್ನು ನೋಡಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X