Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನೌಪಚಾರಿಕ ವಲಯದಲ್ಲಿ ದುಡಿಯುವ 40 ಕೋಟಿ...

ಅನೌಪಚಾರಿಕ ವಲಯದಲ್ಲಿ ದುಡಿಯುವ 40 ಕೋಟಿ ಭಾರತೀಯರು ಬಡತನದ ಕೂಪಕ್ಕೆ: ವರದಿ

ಕೊರೋನ ವೈರಸ್, ಲಾಕ್‍ ಡೌನ್‍

ವಾರ್ತಾಭಾರತಿವಾರ್ತಾಭಾರತಿ8 April 2020 6:45 PM IST
share
ಅನೌಪಚಾರಿಕ ವಲಯದಲ್ಲಿ ದುಡಿಯುವ 40 ಕೋಟಿ ಭಾರತೀಯರು ಬಡತನದ ಕೂಪಕ್ಕೆ: ವರದಿ

ಹೊಸದಿಲ್ಲಿ,ಎ.8: ಕೊರೋನ ವೈರಸ್ ಬಿಕ್ಕಟ್ಟು ಅಸಂಘಟಿತ ಕ್ಷೇತ್ರಗಳಲ್ಲಿ ದುಡಿಯುತ್ತಿರುವ 40 ಕೋಟಿ ಭಾರತೀಯರನ್ನು ಇನ್ನಷ್ಟು ಬಡತನಕ್ಕೆ ತಳ್ಳಬಹುದು ಎಂದು ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್‌ಒ) ಮಂಗಳವಾರ ಬಿಡುಗಡೆಗೊಳಿಸಿದ ತನ್ನ ವರದಿಯಲ್ಲಿ ಆತಂಕವನ್ನು ವ್ಯಕ್ತಪಡಿಸಿದೆ.

ಈ ಸಾಂಕ್ರಾಮಿಕ ಪಿಡುಗು ವರ್ಷದ ಉತ್ತರಾರ್ಧದಲ್ಲಿ 19.5 ಪೂರ್ಣಕಾಲಿಕ ಉದ್ಯೋಗಗಳನ್ನು ನಷ್ಟಗೊಳಿಸುವ ಸಾಧ್ಯತೆಯಿದೆ ಮತ್ತು ಕೊರೋನ ವೈರಸ್ ದ್ವಿತೀಯ ಮಹಾಯುದ್ಧದ ನಂತರ ಅತ್ಯಂತ ಕೆಟ್ಟ ಜಾಗತಿಕ ಬಿಕ್ಕಟ್ಟು ಆಗಿದೆ ಎಂದು ಅದು ಹೇಳಿದೆ.

ಭಾರತದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ಅತ್ಯಂತ ಕಠಿಣವಾಗಿದೆ ಎಂದಿರುವ ವರದಿಯು,ಭಾರತದ ಶೇ.90ರಷ್ಟು ಕಾರ್ಮಿಕರು ಅಸಂಘಟಿತ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ. ಅಂಗಡಿಗಳು ಮತ್ತು ಉದ್ಯಮಗಳ ಮುಚ್ಚುವಿಕೆಯಿಂದಾಗಿ ಹಲವಾರು ಕಾರ್ಮಿಕರು ಅನಿವಾರ್ಯವಾಗಿ ತಮ್ಮ ಗ್ರಾಮಗಳಿಗೆ ಮರಳಿದ್ದಾರೆ ಎಂದಿದೆ.

‘75 ವರ್ಷಗಳಿಗೂ ಹೆಚ್ಚಿನ ಅವಧಿಯಲ್ಲಿ ಇದು ಅಂತರರಾಷ್ಟ್ರೀಯ ಸಹಕಾರಕ್ಕೆ ಅತ್ಯಂತ ದೊಡ್ಡ ಸತ್ವಪರೀಕ್ಷೆಯಾಗಿದೆ. ಒಂದು ದೇಶವು ವಿಫಲಗೊಂಡರೆ ನಾವೆಲ್ಲರೂ ವಿಫಲಗೊಳ್ಳುತ್ತೇವೆ. ನಮ್ಮ ಜಾಗತಿಕ ಸಮಾಜದ ವಿವಿಧ ವರ್ಗಗಳನ್ನು, ನಿರ್ದಿಷ್ಟವಾಗಿ ಅತ್ಯಂತ ದುರ್ಬಲರು ಮತ್ತು ಅಸಹಾಯಕ ಸ್ಥಿತಿಯಲ್ಲಿರುವವರಿಗೆ ನೆರವಾಗಲು ಮಾರ್ಗಗಳನ್ನು ನಾವು ಕಂಡುಕೊಳ್ಳಲೇಬೇಕು ’ಎಂದು ರೈಡರ್ ಹೇಳಿದ್ದಾರೆ.

ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ ಕಾರ್ಮಿಕರು ಸಾಮಾನ್ಯವಾಗಿ ಅಸಂಘಟಿತ ಕ್ಷೇತ್ರಗಳಲ್ಲಿ ದುಡಿಯುವುದು ಮಾತ್ರವಲ್ಲ,ಆರೋಗ್ಯ ಸೇವೆಗಳು ಮತ್ತು ಸಾಮಾಜಿಕ ರಕ್ಷಣೆಯನ್ನು ಪಡೆಯುವ ಅವಕಾಶಗಳೂ ಅವರಿಗೆ ಸೀಮಿತವಾಗಿವೆ ಎಂದಿರುವ ಐಎಲ್‌ಒ ವರದಿಯು,ಸರಕಾರಗಳು ಸೂಕ್ತ ನೀತಿಗಳನ್ನು ರೂಪಿಸದಿದ್ದರೆ ಕಾರ್ಮಿಕರು ಇನ್ನಷ್ಟು ಬಡತನಕ್ಕೆ ಸಿಲುಕುತ್ತಾರೆ ಮತ್ತು ಲಾಕ್‌ಡೌನ್‌ಗಳು ತೆರವುಗೊಂಡ ಬಳಿಕ ತಮ್ಮ ಜೀವನೋಪಾಯವನ್ನು ಪುನಃ ಗಳಿಸುವುದು ಅವರಿಗೆ ಸವಾಲು ಆಗಲಿದೆ ಎಂದು ಎಚ್ಚರಿಕೆಯನ್ನು ನೀಡಿದೆ.

 ಸರಕಾರಗಳು ನೀತಿ ಕ್ರಮಗಳ ಮೂಲಕ ಕಾರ್ಮಿಕರ ಜೀವನೋಪಾಯಗಳನ್ನು ರಕ್ಷಿಸುವ ಜೊತೆಗೆ,ಇರುವ ಉದ್ಯೋಗ ಗಳನ್ನು ಉಳಿಸಿಕೊಳ್ಳಲು ಮತ್ತು ಹೊಸ ಉದ್ಯೋಗಗಳನ್ನು ಸೃಷ್ಟಿಸಲು ಖಾಸಗಿ ಉದ್ಯಮಗಳನ್ನು ಉತ್ತೇಜಿಸಬೇಕು ಎಂದೂ ವರದಿಯು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X