Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೀಮಾ-ಕೋರೆಗಾಂವ್ ಪ್ರಕರಣ: ಶರಣಾಗಲು...

ಭೀಮಾ-ಕೋರೆಗಾಂವ್ ಪ್ರಕರಣ: ಶರಣಾಗಲು ಸಮಯಾವಕಾಶ ಕೋರಿ ಸುಪ್ರೀಂ ಗೆ ನವ್ಲಾಖಾ, ತೇಲ್ತುಂಬ್ಡೆ ಮೊರೆ

ವಾರ್ತಾಭಾರತಿವಾರ್ತಾಭಾರತಿ8 April 2020 9:49 PM IST
share
ಭೀಮಾ-ಕೋರೆಗಾಂವ್ ಪ್ರಕರಣ: ಶರಣಾಗಲು ಸಮಯಾವಕಾಶ ಕೋರಿ ಸುಪ್ರೀಂ ಗೆ ನವ್ಲಾಖಾ, ತೇಲ್ತುಂಬ್ಡೆ ಮೊರೆ

ಹೊಸದಿಲ್ಲಿ,ಎ.8: ಕೊರೋನ ವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ಭೀಮಾ-ಕೋರೆಗಾಂವ್ ಪ್ರಕರಣದಲ್ಲಿ ತಾವು ಶರಣಾಗಲು ಸಮಯಾವಕಾಶ ನೀಡಬೇಕು ಎಂದು ಕೋರಿ ಸಾಮಾಜಿಕ ಹೋರಾಟಗಾರರಾದ ಗೌತಮ್ ನವ್ಲಾಖಾ ಮತ್ತು ಆನಂದ ತೇಲ್ತುಂಬ್ಡೆ ಅವರು ಸಲ್ಲಿಸಿರುವ ಅರ್ಜಿಯನ್ನು ಬುಧವಾರ ಕೈಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದೆ.

2018,ಜ.1ರಂದು ಪುಣೆ ಸಮೀಪದ ಭೀಮಾ-ಕೋರೆಗಾಂವ್ ಗ್ರಾಮದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇವರಿಬ್ಬರ ವಿರುದ್ಧ ಅಕ್ರಮ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಐಪಿಸಿಯ ವಿವಿಧ ಕಲಮ್‌ಗಳಡಿ ಆರೋಪಗಳನ್ನು ಹೊರಿಸಲಾಗಿದೆ. ಪುಣೆ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣದಲ್ಲಿ ನವ್ಲಾಖಾ ಮತ್ತು ತೇಲ್ತುಂಬ್ಡೆ ಅವರು ಮಾವೋವಾದಿಗಳ ಸಂಪರ್ಕ ಹೊಂದಿದ್ದಾ ರೆಂದು ಆರೋಪಿಸಲಾಗಿದ್ದು,ಬಳಿಕ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ಪ್ರಕರಣವನ್ನು ವಹಿಸಿಕೊಂಡಿದೆ.

ಮಾ.16ರಂದು ಅವರ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ್ದ ಸರ್ವೋಚ್ಚ ನ್ಯಾಯಾಲಯವು ಶರಣಾಗಲು ಎ.6ವರೆಗೆ ಸಮಯಾವಕಾಶ ನೀಡಿತ್ತು. ನವ್ಲಾಖಾ ಮತ್ತು ತೇಲ್ತುಂಬ್ಡ್ಡೆೆ ಅವರ ಅರ್ಜಿಯನ್ನು ವಿರೋಧಿಸಿದ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಅವರು,ಇದು ಕೇವಲ ವಿಳಂಬ ತಂತ್ರವಾಗಿದೆ,ಅವರಿಬ್ಬರ ವಿರುದ್ಧ ಗಂಭೀರ ಆರೋಪಗಳಿವೆ ಎಂದು ಹೇಳಿದರು.

ತನ್ನ ಕಕ್ಷಿದಾರರಿಗೆ 65 ವರ್ಷಕ್ಕೂ ಹೆಚ್ಚು ವಯಸ್ಸಾಗಿದ್ದು,ಈಗಾಗಲೇ ಕಾಯಿಲೆಗಳಿಂದ ಬಳಲುತ್ತಿದ್ದಾರೆ, ಹೀಗಾಗಿ ಅವರಿಗೆ ಶರಣಾಗಲು ಹೆಚ್ಚಿನ ಸಮಯಾವಕಾಶವನ್ನು ನೀಡಬೇಕು ಎಂದು ಹೇಳಿದ ನವ್ಲಾಖಾ ಮತ್ತು ತೇಲ್ತುಂಬ್ಡ್ಡೆ ಪರ ವಕೀಲರು,ಕೊರೋನ ವೈರಸ್ ಸೋಂಕು ವ್ಯಾಪಿಸಿರುವ ಈ ಸಂದರ್ಭದಲ್ಲಿ ಅವರನ್ನು ಜೈಲಿಗೆ ಕಳುಹಿಸುವುದು ಮರಣದಂಡನೆಗೆ ಸಮನಾಗುತ್ತದೆ ಎಂದು ನ್ಯಾಯಾಲಯಕ್ಕೆ ನಿವೇದಿಸಿಕೊಂಡರು.

ನವ್ಲಾಖಾ ಮತ್ತು ತೇಲ್ತುಂಬ್ಡ್ಡೆೆ ಅವರ ಬಂಧನವನ್ನು ವಿಳಂಬಿಸುವಂತೆ ಕಳೆದ ವಾರ ವಿಶ್ವಾದ್ಯಂತದ 5,000ಕ್ಕೂ ಅಧಿಕ ಜನರು ಮತ್ತು 150ಕ್ಕೂ ಅಧಿಕ ಸಂಸ್ಥೆಗಳು ಸಹ ಕೇಂದ್ರವನ್ನು ಆಗ್ರಹಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X