Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವ ಆರೋಗ್ಯ ಸಂಸ್ಥೆಯಿಂದ ಚೀನಾ ಪರ...

ವಿಶ್ವ ಆರೋಗ್ಯ ಸಂಸ್ಥೆಯಿಂದ ಚೀನಾ ಪರ ಧೋರಣೆ ಅಮೆರಿಕದ ದೇಣಿಗೆ ನಿಲ್ಲಿಸುತ್ತೇವೆ: ಟ್ರಂಪ್

ವಾರ್ತಾಭಾರತಿವಾರ್ತಾಭಾರತಿ8 April 2020 11:10 PM IST
share
ವಿಶ್ವ ಆರೋಗ್ಯ ಸಂಸ್ಥೆಯಿಂದ ಚೀನಾ ಪರ ಧೋರಣೆ ಅಮೆರಿಕದ ದೇಣಿಗೆ ನಿಲ್ಲಿಸುತ್ತೇವೆ: ಟ್ರಂಪ್

ವಾಶಿಂಗ್ಟನ್, ಎ. 8: ನೋವೆಲ್-ಕೊರೋನ ವೈರಸ್ ಸಾಂಕ್ರಾಮಿಕದ ವಿಷಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)ಯು ಚೀನಾ ಪರ ಪಕ್ಷಪಾತ ಧೋರಣೆಯನ್ನು ಹೊಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಆರೋಪಿಸಿದ್ದಾರೆ ಹಾಗೂ ಅದಕ್ಕೆ ಅಮೆರಿಕ ನೀಡುತ್ತಿರುವ ದೇಣಿಗೆಯನ್ನು ತಡೆಹಿಡಿಯುವ ಬೆದರಿಕೆ ಹಾಕಿದ್ದಾರೆ.

ಅಮೆರಿಕವು ವಿಶ್ವ ಆರೋಗ್ಯ ಸಂಸ್ಥೆಯ ಅತಿ ದೊಡ್ಡ ಆರ್ಥಿಕ ಮೂಲವಾಗಿದೆ.

‘‘ವಿಶ್ವ ಆರೋಗ್ಯ ಸಂಸ್ಥೆಗೆ ಅಮೆರಿಕ ನೀಡುತ್ತಿರುವ ದೇಣಿಗೆಗೆ ನಾನು ಅತ್ಯಂತ ಶಕ್ತಿಶಾಲಿ ತಡೆಯನ್ನು ಹೇರುತ್ತೇನೆ’’ ಎಂದು ಇಲ್ಲಿನ ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್ ಹೇಳಿದರು.

‘‘ವಿಶ್ವ ಆರೋಗ್ಯ ಸಂಸ್ಥೆಗೆ ಮಾಡುತ್ತಿರುವ ಖರ್ಚನ್ನು ನಾವು ನಿಲ್ಲಿಸಲಿದ್ದೇವೆ’’ ಎಂದು ಟ್ರಂಪ್ ನುಡಿದರು. ‘‘ವಿಶ್ವ ಆರೋಗ್ಯ ಸಂಸ್ಥೆಯು ಚೀನಾದ ಪರವಾಗಿ ಕೆಲಸ ಮಾಡುತ್ತಿದೆ. ಅದು ಸರಿಯಲ್ಲ’’ ಎಂದರು. ‘‘ವಿಶ್ವ ಆರೋಗ್ಯ ಸಂಸ್ಥೆಯು ಯಾಕೆ ಇಂಥ ತಪ್ಪು ಶಿಫಾರಸು ಮಾಡಿತು?’’ ಎಂದು ಟ್ರಂಪ್ ಪ್ರಶ್ನಿಸಿದರು.

ನೋವೆಲ್-ಕೊರೋನ ವೈರಸ್ ಸಾಂಕ್ರಾಮಿಕವು ಚೀನಾದಲ್ಲಿ ಹುಟ್ಟಿ ಈಗ ಜಗತ್ತಿನೆಲ್ಲೆಡೆ ಹಬ್ಬಿದೆ. ವೈರಸ್ ಹರಡುವುದನ್ನು ತಡೆಯಲು ಅಂತರ್‌ರಾಷ್ಟ್ರೀಯ ಪ್ರಯಾಣವನ್ನು ನಿರ್ಬಂಧಿಸುವ ಅಗತ್ಯವಿಲ್ಲ ಎಂಬುದಾಗಿ ವಿಶ್ವ ಆರೋಗ್ಯ ಸಂಸ್ಥೆಯು ಆರಂಭದಲ್ಲಿ ಶಿಫಾರಸು ಮಾಡಿತ್ತು.

ಈ ಶಿಫಾರಸಿಗೆ ಪ್ರತಿಕ್ರಿಯೆಯಾಗಿ ಟ್ರಂಪ್ ಮೇಲಿನ ಹೇಳಿಕೆಯನ್ನು ನೀಡಿದ್ದಾರೆ ಎಂದು ಭಾವಿಸಲಾಗಿದೆ.

‘‘ಅದೃಷ್ಟವಶಾತ್, ನಮ್ಮ ಗಡಿಯನ್ನು ಚೀನಾಕ್ಕೆ ತೆರೆಯುವಂತೆ ಅವರು ಮಾಡಿದ ಸಲಹೆಯನ್ನು ನಾನು ಆರಂಭದಲ್ಲೇ ತಿರಸ್ಕರಿಸಿದೆ’’ ಎಂದರು.

ನೂತನ-ಕೊರೋನ ವೈರಸ್ ಸಾಂಕ್ರಾಮಿಕವನ್ನು ಚೀನಾ ನಿಭಾಯಿಸಿದ ಬಗ್ಗೆ ಅಮೆರಿಕದಲ್ಲಿ, ಅದರಲ್ಲೂ ಮುಖ್ಯವಾಗಿ ಟ್ರಂಪ್‌ರ ರಿಪಬ್ಲಿಕನ್ ಪಕ್ಷದ ಅನುಯಾಯಿಗಳಲ್ಲಿ ಅತೃಪ್ತಿಯಿದೆ.

ಆರಂಭದಲ್ಲಿ ನಿರ್ಲಕ್ಷಿಸಿದ್ದ ಟ್ರಂಪ್

ಆದರೆ, ಆರಂಭದಲ್ಲಿ ಕೊರೋನ ವೈರಸನ್ನು ನಿರ್ಲಕ್ಷಿಸಿರುವುದಕ್ಕಾಗಿ ಸ್ವತಃ ಟ್ರಂಪ್ ಟೀಕೆಯನ್ನು ಎದುರಿಸುತ್ತಿದ್ದಾರೆ. ಇದೊಂದು ಸಾಮಾನ್ಯ ಜ್ವರ ಹಾಗೂ ಅಮೆರಿಕದಲ್ಲಿ ಅದು ನಿಯಂತ್ರಣದಲ್ಲಿದೆ ಎಂದು ಹೇಳಿದ್ದರು. ಆದರೆ, ಬಳಿಕ, ಅದೊಂದು ರಾಷ್ಟ್ರೀಯ ವಿಪತ್ತು ಎಂಬುದಾಗಿ ಘೋಷಿಸಿದರು. ಅಲ್ಲಿ ಈ ರೋಗದಿಂದ ಮೃತಪಟ್ಟವರ ಸಂಖ್ಯೆ ಈಗ 13,000ವನ್ನು ತಲುಪಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X