Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಯಲುಸೀಮೆ ಜಿಲ್ಲೆಗಳಿಗೆ...

ಬಯಲುಸೀಮೆ ಜಿಲ್ಲೆಗಳಿಗೆ ಸಾಲಮನ್ನಾ,ಪ್ಯಾಕೇಜ್ ನೀಡಿ: ವಿಧಾನಪರಿಷತ್ ಸದಸ್ಯ ಗೋವಿಂದರಾಜು

'ಲಾಕ್ ಡೌನ್‍ನಿಂದಾಗಿ ಸಂಕಷ್ಟದಲ್ಲಿ ರೈತರು,ಬಡ ವ್ಯಾಪಾರಿಗಳ ಬದುಕು'

ವಾರ್ತಾಭಾರತಿವಾರ್ತಾಭಾರತಿ8 April 2020 11:36 PM IST
share

ಕೋಲಾರ: ಕೋವಿಡ್-19 ಭಯಾನಕ ಸೋಂಕು ತಡೆಯಲು ಲಾಕ್ ಡೌನ್ ಘೋಷಿಸಿರುವುದರಿಂದ ಸಂಕಷ್ಟಕ್ಕೊಳಗಾಗಿರುವ ಬಯಲು ಸೀಮೆ ಜಿಲ್ಲೆಗಳ ರೈತರು, ಬೀದಿಬದಿ ಬಡ ವ್ಯಾಪಾರಿಗಳಿಗೆ ಸಾಲ ಮನ್ನಾ ಮತ್ತು ವಿಶೇಷ ಪರಿಹಾರ ಒದಗಿಸುವಂತೆ ವಿಧಾನಪರಿಷತ್ ಸದಸ್ಯ ಕೆ.ಗೋವಿಂದರಾಜು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. 

ಈ ಸಂಬಂಧ ಖುದ್ದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವ ಅವರು, ಇತಿಹಾಸದಲ್ಲೇ ಕಂಡರಿಯದ ಸಂಕಷ್ಟಕ್ಕೆ ರಾಜ್ಯದ ಬಹುತೇಕ ಜಿಲ್ಲೆಗಳ ರೈತರು ಒಳಗಾಗಿದ್ದಾರೆ, ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಯ ದುಷ್ಪರಿಣಾಮ ಬಡವರು,ಮಧ್ಯಮ ವರ್ಗದವರನ್ನು ತಲ್ಲಣಿಸುವಂತೆ ಮಾಡಿದೆ ಎಂದು ತಿಳಿಸಿದ್ದಾರೆ. 

ಬರಪೀಡಿತ ಜಿಲ್ಲೆಗಳಾದ ಕೋಲಾರ,ಚಿಕ್ಕಬಳ್ಳಾಪುರ,ಬೆಂಗಳೂರು ಗ್ರಾಮಾಂತರ,ರಾಮನಗರ ಮತ್ತಿತರ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಮಾವಿನ ಬೆಳೆಗೆ ಮುಂದಿನ ದಿನಗಳಲ್ಲಿ ವಹಿವಾಟು ಯಾವ ಸ್ಥಿತಿ ತಲುಪುತ್ತದೆ ಎಂಬ ಆತಂಕವೂ ಜನರನ್ನು ಕಾಡುತ್ತಿದೆ ಎಂದು ತಿಳಿಸಿದ್ದಾರೆ.

ಬರದ ಹಣೆಪಟ್ಟಿ ಕಟ್ಟಿಕೊಂಡಿರುವ ಈ ಜಿಲ್ಲೆಗಳಲ್ಲಿ ರೈತರು ಹಾಲು, ತರಕಾರಿ,ಹೂ,ಹಣ್ಣು, ರೇಷ್ಮೆ ಟಮೋಟೋ,ಮಾವಿಗೆ ಬೆಲೆ ಸಿಗದೇ ಸಂಕಷ್ಟ ಎದುರಿಸುತ್ತದ್ದಾರೆ, ಕೋವಿಡ್-19 ರಿಂದಾಗಿ ವಿದೇಶಗಳಿಗೆ ರಫ್ತು ಆಗದ ಕಾರಣ ರೈತರ ಪರಿಸ್ಥಿತಿ ಮತ್ತಷ್ಟು ಆತಂಕಕ್ಕೆ ಒಳಗಾಗಲಿದ್ದು, ಸರ್ಕಾರ ನೆರವಿಗೆ ಬರಬೇಕು ಎಂದು ಕೋರಿದ್ದಾರೆ.

ಲಾಕ್‍ಡೌನ್‍ನಿಂದಾಗಿ ಬೆಳೆದ ಬೆಳೆ ಕೊಳೆಯುತ್ತಿದೆ, ಕೆಲವು ರೈತರು ತೋಟದಲ್ಲೇ ನಾಶಪಡಿಸಿರುವ ನಿದರ್ಶನಗಳು ಇವೆ, ರೇಷ್ಮೆ ಗೂಡು ಖರೀದಿಸುವವರಿಲ್ಲದೇ ಗೂಡು ಬೆಳೆದ ರೈತರ ಬದುಕು ಅತಂತ್ರವಾಗಿದೆ, ಜತೆಗೆ ಉತ್ಪಾದನೆಯೂ ಶೇ.20ಕ್ಕೆ ಕುಸಿದಿದೆ ಎಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ವಿವರಿಸಿದ್ದಾರೆ. 

ಪಶು ಆಹಾರದ ಬೆಲೆ ಗಗನಕ್ಕೇರಿದ್ದು, ಹಸು ಸಾಕಾಣಿಕೆಯೂ ರೈತರಿಗೆ ಹೊರೆಯಾಗಿದೆ, ಹಾಲಿನ ಉತ್ಪಾದನೆ ಕುಸಿತಗೊಂಡಿರುವುದೇ ಇದಕ್ಕೆ ನಿದರ್ಶನ, ಇದರ ಜತೆಗೆ ಸಣ್ಣಪುಟ್ಟ ವ್ಯಾಪಾರಿಗಳ ಬದುಕು ಅಯೋಮಯವಾಗಿದೆ.

ಇದನ್ನೆಲ್ಲಾ ಗಮನಿಸಿ ಸರ್ಕಾರ ನೆರವಿಗೆ ಬರಬೇಕು, ಅವರ ಸಾಲ ಮನ್ನಾ ಮತ್ತು ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಅವರ ಬದುಕನ್ನು ರಕ್ಷಿಸಬೇಕು ಎಂದು ಮನವಿ ಮಾಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X