Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ಹೆಸರಿನಲ್ಲಿ ಬ್ಯಾಂಕ್ ಖಾತೆಯ ಹಣ...

ಕೊರೋನ ಹೆಸರಿನಲ್ಲಿ ಬ್ಯಾಂಕ್ ಖಾತೆಯ ಹಣ ದೋಚುತ್ತಿರುವ ಅನಾಮಿಕರು: ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ9 April 2020 6:16 PM IST
share
ಕೊರೋನ ಹೆಸರಿನಲ್ಲಿ ಬ್ಯಾಂಕ್ ಖಾತೆಯ ಹಣ ದೋಚುತ್ತಿರುವ ಅನಾಮಿಕರು: ಎಚ್ಚರಿಕೆ

ಉಡುಪಿ, ಎ. 9: ಜನ ಸಾಮಾನ್ಯರು ನೋವೆಲ್ ಕೊರೋನ ವೈರಸ್ ತಂದೊಡ್ಡಿರುವ ವಿವಿಧ ಸಂಕಷ್ಟಗಳನ್ನು ಎದುರಿಸುವಲ್ಲಿ ತಮ್ಮೆಲ್ಲಾ ಗಮನವನ್ನು ಕೇಂದ್ರೀಕರಿಸಿರುವಂತೆ, ಜನರನ್ನು ನಾನಾ ರೀತಿಯಲ್ಲಿ ವಂಚಿಸುವವರ ಗುಂಪೊಂದು ಕೊರೋನದ ನೆಪದಲ್ಲಿ ಜನರ ಬ್ಯಾಂಕ್ ಖಾತೆಯನ್ನು ದೋಚುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಕಾರ್ಯನಿರತರಾಗಿದ್ದಾರೆ.

ಈ ಕುರಿತು ಬ್ಯಾಂಕ್ ಆಫ್ ಬರೋಡದ (ಹಿಂದಿನ ವಿಜಯಾ ಬ್ಯಾಂಕ್) ಉಡುಪಿ ವಲಯದ ಡಿಜಿಎಂ ರವೀಂದ್ರ ರೈ ಅವರು ಜನಸಾಮಾನ್ಯರನ್ನು ಎಚ್ಚರಿಸಿದ್ದಾರೆ.

ಜನರನ್ನು ಇಂಥ ವಂಚಕರ ಕುರಿತಂತೆ ಎಚ್ಚರಿಸಿರುವ ರೈ, ಅವರು ಬಿಡುಗಡೆ ಮಾಡಿರುವ ವಿಡಿಯೋ ಒಂದರಲ್ಲಿ ತಮ್ಮ ಮೊಬೈಲ್‌ಗೆ ಬರುವ ಯಾವುದೇ ಓಟಿಪಿಗಳನ್ನು ಯಾರೊಂದಿಗೂ ಹಂಚಿಕೊಳ್ಳದಂತೆ ಗ್ರಾಹಕರಲ್ಲಿ ಮನವಿ ಮಾಡಿದ್ದಾರೆ.

ಕೊರೋನ ಜೊತೆಜೊತೆಗೆ ಈಗ ಮತ್ತೊಂದು ಅಪಾಯಕಾರಿ ಸೋಂಕು ಸಕ್ರಿಯವಾಗಿದ್ದು, ಇದರಿಂದ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣ ಕಾಣದಂತೆ ಮಾಯವಾಗುತ್ತಿದೆ ಎಂದು ಎಚ್ಚರಿಸಿದ್ದಾರೆ.

ಕೊರೋನದ ಸಂಕಷ್ಟದ ಸಮಯದಲ್ಲಿ ನಿಮ್ಮ ಮೊಬೈಲ್‌ಗೆ ಅನಾಮಿಕ ಕರೆ ಬರುತ್ತದೆ. ಅದರಲ್ಲಿ ಕೊರೋನ ಸಂಕಷ್ಟ ಪರಿಹಾರ ಹಣವನ್ನು ನೀಡುತ್ತೇವೆ ಅಂತಾರೆ. ನಿಮ್ಮ ಒಟಿಪಿ ನಂಬರ್ ಕೊಡಿ, ತಕ್ಷಣ ಹಣ ಹಾಕ್ತಿವಿ ಅಂತಾರೆ. ನೀವು ನಿಮ್ಮ ಒಟಿಪಿ ನಂಬರ್ ಅವರಿಗೆ ನೀಡಿದರೆ, ತಕ್ಷಣವೇ ನಿಮ್ಮ ಖಾತೆಯಲ್ಲಿದ್ದ ಹಣ ಖಾಲಿಯಾಗುತ್ತದೆ ಎಚ್ಚರ ಎಂದು ರವೀಂದ್ರ ರೈ ಹೇಳಿದ್ದಾರೆ. ಅದೇ ರೀತಿ ಕೊರೋನ ಹಿನ್ನೆಲೆಯಲ್ಲಿ ಮೂರು ತಿಂಗಳು ನಿಮ್ಮ ಲೋನ್ ಇಎಂಐ ತೆಗೆಯಲ್ಲ ಅಂತಾರೆ. ಲೋನ್ ನೆಪದಲ್ಲೂ ಅನಾಮಿಕರು ಒಟಿಪಿ ಕೊಡಿ ಎಂದು ಕೇಳುತ್ತಾರೆ. ನೀವು ಏನೊಂದೂ ಯೋಚಿಸದೇ ಒಟಿಪಿ ನೀಡಿದರೆ ಅಲ್ಲೂ ನಿಮ್ಮ ಆ ಖಾತೆಯಲ್ಲಿದ್ದ ಹಣ ಮಂಗಮಾಯವಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ಗ್ರಾಹಕರು ಒಂದು ವಿಷಯವನ್ನು ಚೆನ್ನಾಗಿ ನೆನಪಿಡಬೇಕು. ಯಾವ ಬ್ಯಾಂಕ್ ಕೂಡಾ ತನ್ನ ಗ್ರಾಹಕರಿಂದ ಪೋನ್‌ನಲ್ಲಿ ಒಟಿಪಿ, ಪಿನ್ ನಂಬರ್ ಕೇಳುವುದಿಲ್ಲ. ಇದನ್ನು ಕೇಳಿ ಯಾರೇ ಕರೆ ಮಾಡಿದರೂ ಅವರೊಂದಿಗೆ ಒಟಿಪಿ ಆಗ್ಲಿ, ಪಿನ್ ನಂಬರ್ ಆಗ್ಲಿ ಹಂಚಿಕೊಳ್ಳಬೇಡಿ ಎಂದು ರೈ ವಿಡಿಯೊ ಮೂಲಕ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X